Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭೈರಂಪಳ್ಳಿ ರಸ್ತೆ ಕುಸಿತ ಪ್ರದೇಶಕ್ಕೆ...

ಭೈರಂಪಳ್ಳಿ ರಸ್ತೆ ಕುಸಿತ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ16 Oct 2019 8:17 PM IST
share
ಭೈರಂಪಳ್ಳಿ ರಸ್ತೆ ಕುಸಿತ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ

ಹಿರಿಯಡ್ಕ, ಅ.15: ದಿಢೀರ್ ಸುರಿದ ಭಾರೀ ಮಳೆಗೆ ಕೊಚ್ಚಿ ಹೋದ ಭೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದೂಪದಕಟ್ಟೆ ಕಂಚಿಗುಂಡಿಯ ಲೋಕೋಪಯೋಗಿ ರಸ್ತೆಯನ್ನು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಜೊತೆ ಆಗಮಿಸಿದ ಜಿಲ್ಲಾಧಿಕಾರಿ ಮಳೆಯಿಂದ ಕುಸಿದ ರಸ್ತೆಯನ್ನು ವೀಕ್ಷಿಸಿದರು. ಸದ್ಯ ತಾತ್ಕಾಲಿಕ ವಾಗಿ ಮೋರಿ ನಿರ್ಮಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂದೆ ಈ ಪ್ರದೇಶದಲ್ಲಿ ಸೇತುವೆ ನಿರ್ಮಿಸುವ ಕುರಿತು ಸರಕಾರಕ್ಕೆ ಪ್ರಾಸ್ತಾ ವನೆ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು. ಬಳಿಕ ಅವರು ಇದೇ ಪರಿಸರದಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಗದ್ದೆ ಹಾಗೂ ಕಟಾವು ಮಾಡಲಾದ ಭತ್ತದ ಕೃಷಿಯನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಬೈರಂಪಳ್ಳಿ ಗ್ರಾಪಂ ಅಧ್ಯಕ್ಷ ಸದಾಶಿವ ಪೂಜಾರಿ, ಉಪಾಧ್ಯಕ್ಷ ಸತೀಶ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ನಾಯ್ಕಿ, ಗ್ರಾಮ ಲೆಕ್ಕಿಗ ಅಭಿೇಕ್ ಮೊದಲಾದವರು ಹಾಜರಿದ್ದರು.

ಸದ್ಯ ಹರಿಖಂಡಿಗೆ -ಪೆರ್ಡೂರು ರಸ್ತೆಯ ಸಂಚಾರವನ್ನು ಸ್ಥಗಿತಗೊಳಿಸ ಲಾಗಿದ್ದು, ರಸ್ತೆ ಕುಸಿದ ಪ್ರದೇಶದಲ್ಲಿ ಬ್ಯಾರಿಕೇಡ್ ಆಳವಡಿಸಿ ಎಚ್ಚರಿಕೆ ವಹಿಸ ಲಾಗಿದೆ. ಈಗ ಹರಿಖಂಡಿಗೆ, ದೊಂಡರಂಗಡಿ, ಅಜೆಕಾರು ಗ್ರಾಮದವರು ಐದು ಕಿ.ಮೀ. ದೂರದ ಕುಂಟಾಲಕಟ್ಟೆ ಮಾಗವಾರ್ಗಿ ಪೆರ್ಡೂರಿಗೆ ಹೋಗುತ್ತಿದ್ದಾರೆ.

ಕಾರ್ಕಳದಲ್ಲಿ ಬೆಳೆ ಹಾನಿ: ಮಂಗಳವಾರ ಅಪರಾಹ್ನ ಸುರಿದ ಹಠಾತ್ ಮಳೆಗೆ ಕಾರ್ಕಳದಲ್ಲೂ ಬೆಳೆ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಬೆಳ್ಳಾರೆಯ ಶೇಖರ ಕುಲಾಲ ಎಂಬವರ ಭತ್ತದ ಗದ್ದೆಗೆ ಹಾಗೂ ಕುಕ್ಕುಜೆಯ ಹರೀಶ್ ಪೂಜಾರಿ ಅವರ ಭತ್ತದ ಗದ್ದೆಗೆ ನಿನ್ನೆಮಳೆಯಿಂದ ಹಾನಿಯಾಗಿದ್ದು, ತಲಾ 10,000ರೂ. ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ.

ಅಲ್ಲದೇ ನಿನ್ನೆ ಸಿಡಿಲು ಬಡಿದು ತಾಲೂಕಿನ ಕಲ್ಯಾ ಗ್ರಾಮದ ಪುಷ್ಪಾ ನಾಯಕ್ ಹಾಗೂ ಮುಲ್ಲಡ್ಕದ ಕೃಷ್ಣ ಸಫಲಿಗ ಎಂಬವರ ಮನೆಗೆ ಹಾನಿ ಸಂಭವಿಸಿದೆ. ಅಲ್ಲದೇ ಮಳೆಯಿಂದ ದುರ್ಗಾ ಗ್ರಾಮದ ಅಣ್ಣಿ ಮೇರ ಹಾಗೂ ಜೀನತ್ ಬಾನು ಎಂಬವರ ಮನೆಗಳಿಗೂ ಭಾಗಶ: ಹಾನಿಯಾಗಿ ರುವುದಾಗಿ ವರದಿಗಳು ಬಂದಿವೆ.

ಬೈಂದೂರು ತಾಲೂಕು: ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಸುಬ್ಬ ಕುಲಾರ್ತಿ ಎಂಬವರ ಮನೆಗೆ ಸಿಡಿಲು ಬಡಿದು 50,000ರೂ. ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ. ಅದೇ ಗ್ರಾಮದ ವಿಷ್ಣು ಆಚಾರಿ ಹಾಗೂ ಉಪ್ಪುಂದ ಗ್ರಾಮದ ಮುಕಾಂಬು ಶೆಡ್ತಿ ಎಂಬವರ ಮನೆ ಮೇಲೆ ತೆಂಗಿನ ಮರ ಬಿದ್ದು ತಲಾ 30ಸಾವಿರ ರೂ.ನಷ್ಟವಾಗಿದೆ. ಹಳ್ಳಿಹೊಳೆಗೆ ಗ್ರಾಮದ ಮುಕಾಂಬು ಎಂಬವರ ಮನೆ ಮೇಲೆ ಮರಬಿದ್ದು ಭಾಗಶ: ಹಾನಿಯಾಗಿದ್ದು 30ಸಾವಿರ ನಷ್ಟದ ಅಂದಾಜು ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X