Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಶ್ವ ಬ್ಯಾಂಕಿನ ರ್ಯಾಂಕಿಂಗ್ ಪಡೆಯಲು...

ವಿಶ್ವ ಬ್ಯಾಂಕಿನ ರ್ಯಾಂಕಿಂಗ್ ಪಡೆಯಲು ಶ್ರಮಿಸಿ: ಡಾ.ಗುರುಪ್ರಸಾದ್ ಮೊಹಪಾತ್ರ

ವಾರ್ತಾಭಾರತಿವಾರ್ತಾಭಾರತಿ17 Oct 2019 11:15 PM IST
share

ಬೆಂಗಳೂರು, ಅ. 17: 2020ರಲ್ಲಿ ವಿಶ್ವ ಬ್ಯಾಂಕಿನ ಈಸ್ ಆಫ್ ಡೂಯಿಂಗ್ ಬಿಸಿನೆಸ್ ಸಮೀಕ್ಷೆಯಲ್ಲಿ ಭಾರತವು ಪ್ರಮುಖ 50ರ ರ್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳುವ ನಿಟ್ಟಿನಲ್ಲಿ ಶ್ರಮಿಸಬೇಕಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಡಾ.ಗುರುಪ್ರಸಾದ್ ಮೊಹಪಾತ್ರ ಹೇಳಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಪ್ರಮೋಷನ್ ಆಫ್ ಇಂಡಸ್ಟ್ರೀ ಆಂಡ್ ಇಂಟರ್ನಲ್ ಟ್ರೇಡ್ ಇಲಾಖೆ ಹಾಗೂ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವರ್ಲ್ಡ್ ಬ್ಯಾಂಕ್ಸ್ ಡೂಯಿಂಗ್ ಬಿಸಿನೆಸ್-2021 ರ್ಯಾಂಕಿಂಗ್ ಇನ್‌ಕ್ಲೂಜನ್ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.

ವಿದೇಶಿ ಹೂಡಿಕೆದಾರರು ಹೂಡಿಕೆ ಮಾಡುವ ಪ್ರಾರಂಭದಲ್ಲಿ ಮೊದಲು ನೋಡುವುದೇ ವಿಶ್ವ ಬ್ಯಾಂಕಿನ ರ್ಯಾಂಕಿಂಗ್ ಸ್ಥಾನವನ್ನು. ಭಾರತ ಕಳೆದ ಸಾಲಿನಲ್ಲಿ 77ನೆ ಶ್ರೇಯಾಂಕ ಪಡೆದುಕೊಂಡು ವಿಶ್ವದೆಲ್ಲೆಡೆ ತನ್ನ ಗುರುತನ್ನು ಬಲಪಡಿಸಿದೆ ಎಂದು ಹೇಳಿದರು.

ಈ ಸಾಲಿನ ಶ್ರೇಯಾಂಕವು ಅಕ್ಟೋಬರ್ ಅಂತ್ಯದೊಳಗೆ ಘೋಷಣೆಯಾಗುವ ನಿರೀಕ್ಷೆ ಇದೆ. 2020ರ ವೇಳೆಗೆ ವಿಶ್ವ ಬ್ಯಾಂಕ್‌ನ ಈಸ್ ಆಫ್ ಡೂಯಿಂಗ್ ಬಿಸಿನೆಸ್‌ನ ಸಮೀಕ್ಷೆಯಲ್ಲಿ ಮೊದಲ 50ನೆ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತವೂ ಸೇರ್ಪಡೆಗೊಳ್ಳಬೇಕು. 2024ರ ವೇಳೆಗೆ ಈ ರ್ಯಾಂಕಿಂಗ್ ಪ್ರಮುಖ 25ರ ಪಟ್ಟಿಯಲ್ಲಿ ಬರುವಂತೆ ಶ್ರಮಿಸಬೇಕಿದೆ ಎಂದು ಕರೆ ನೀಡಿದರು.
ಇತರೆ ದೇಶಗಳು ಈಸ್ ಆಫ್ ಡೂಯಿಂಗ್ ಬಿಸಿನೆಸ್‌ನಲ್ಲಿ ಗಮನಾರ್ಹ ರೀತಿಯಲ್ಲಿ ನೀತಿ ನಿಯಮಗಳನ್ನು ಹೊಂದಿವೆ. ಭಾರತದ ಶ್ರೇಯಾಂಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೋಲ್ಕತ್ತಾ, ದಿಲ್ಲಿ, ಮುಂಬೈ ಹಾಗೂ ಬೆಂಗಳೂರು ನಗರಗಳ ಪಾತ್ರ ದೊಡ್ಡದಿದೆ ಎಂದರು.

ದಿಲ್ಲಿ ಹಾಗೂ ಮುಂಬೈಗೆ ಹೋಲಿಸಿದರೆ ಬೆಂಗಳೂರು ಹಾಗೂ ಕೋಲ್ಕತ್ತಾ ಈಸ್ ಆಫ್ ಡೂಯಿಂಗ್ ಬಿಸಿನೆಸ್‌ನಲ್ಲಿ ಹೆಚ್ಚು ಕೊಡುಗೆ ನೀಡುತ್ತಿವೆ. ಇನ್ನೂ ಹೆಚ್ಚು ಗುರಿ ತಲುಪುವ ಮೂಲಕ ಮುಂದಿನ ಸಾಲಿನಲ್ಲಿ ಶ್ರೇಯಾಂಕವನ್ನು ಹೆಚ್ಚಿಸಬೇಕಿದೆ ಎಂದರು.
ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಮಾತನಾಡಿ, ವಿಶ್ವ ಬ್ಯಾಂಕ್ ಸಮೀಕ್ಷೆಯ ಶ್ರೇಯಾಂಕ ಘೋಷಣೆಯ ನಾಲ್ಕು ಸಿಟಿಗಳ ಪೈಕಿ ಬೆಂಗಳೂರು ಸೇರ್ಪಡೆಗೊಂಡಿರುವುದು ಶ್ಲಾಘನಾರ್ಹ ಎಂದು ಇದೇ ವೇಳೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಿಟಿಜನ್ ಸರ್ವಿಸ್ ಆಕ್ಟ್ ಅನ್ವಯ 500ಕ್ಕೂ ಹೆಚ್ಚು ಸೇವೆಗಳನ್ನು 2020ರ ಮಾರ್ಚ್ ಒಳಗಾಗಿ ಆನ್‌ಲೈನ್ ವ್ಯಾಪ್ತಿಗೆ ತರಲಾಗುವುದು. ಪ್ರಸ್ತುತ 300ಸೇವೆಗಳು ಆನ್‌ಲೈನ್ ವ್ಯಾಪ್ತಿಯಲ್ಲಿವೆ. ಈಸ್ ಆಫ್ ಡೂಯಿಂಗ್ ಬಿಸಿನೆಸ್ ಸಂಬಂಧಿಸಿದ ಸೇವೆಗಳೂ ಆನ್‌ಲೈನ್ ವ್ಯಾಪ್ತಿಗೆ ಬರಲಿವೆ ಎಂದು ಅವರು ಹೇಳಿದರು.

ಜೊತೆಗೆ ಈಸ್ ಆಫ್ ಡೂಯಿಂಗ್ ಬಿಸಿನೆಸ್‌ಗೆ ಬೆಂಬಲಿತವಾಗಿ ನಿಲ್ಲಲು ಬಿಸಿನೆಸ್ ಫೆಸಿಲಿಟೇಷನ್ ಆಕ್ಟ್‌ನನ್ನು ಇನ್ನಷ್ಟು ಚುರುಕುಗೊಳಿಸಲಾಗುವುದು ಎಂದು ವಿಜಯ್ ಭಾಸ್ಕರ್ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X