Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಿತ್ರರಾಷ್ಟ್ರಗಳ ಜೊತೆಗೂಡಿ...

ಮಿತ್ರರಾಷ್ಟ್ರಗಳ ಜೊತೆಗೂಡಿ ಬೆದರಿಕೆಗಳನ್ನು ಎದುರಿಸುವೆವು: ಸೇನಾ ವರಿಷ್ಠ ಬಿಪಿನ್ ರಾವತ್

ವಾರ್ತಾಭಾರತಿವಾರ್ತಾಭಾರತಿ18 Oct 2019 8:33 PM IST
share
ಮಿತ್ರರಾಷ್ಟ್ರಗಳ ಜೊತೆಗೂಡಿ ಬೆದರಿಕೆಗಳನ್ನು ಎದುರಿಸುವೆವು: ಸೇನಾ ವರಿಷ್ಠ ಬಿಪಿನ್ ರಾವತ್

ಹೊಸದಿಲ್ಲಿ,ಅ.1: ನೆರೆಹೊರೆಯ ದೇಶಗಳಲ್ಲಿ ಹಾಗೂ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಕಾಪಾಡುವುದಕ್ಕೆ ಭಾರತವು ಬದ್ಧವಾಗಿದೆ. ಹಾಗೂ ಯಾವುದೇ ರೀತಿಯ ಬೆದರಿಕೆಗಳನ್ನು ಎದುರಿಸಲು ಸೇನೆಯು ಮಿತ್ರ ರಾಷ್ಟ್ರಗಳ ಜೊತೆ ಕೈಜೋಡಿಸಲಿದೆ ಯೆಂದು ಸೇನಾ ವರಿಷ್ಠ ಬಿಪಿನ್ ರಾವತ್ ತಿಳಿಸಿದ್ದಾರೆ.

ದಿಲ್ಲಿಯಲ್ಲಿ ಶುಕ್ರವಾರ ನಡೆದ ರಕ್ಷಣಾ ಸಂಸ್ಥೆಯ ಪ್ರತಿನಿಧಿಗಳ ನಾಲ್ಕನೇ ಶೃಂಗಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

‘‘ಯಾವುದೇ ರೀತಿಯ ಬೆದರಿಕೆಗಳನ್ನು ಎದುರಿಸಲು ಭಾರತವು ಈ ಹಿಂದೆಯೂ ತನ್ನ ಮಿತ್ರರಾಷ್ಟ್ರಗಳ ಜೊತೆ ಕೈಜೋಡಿಸಿದ್ದು, ಭವಿಷ್ಯತ್ತಿನಲ್ಲಿಯೂ ಅದು ಮುಂದುವರಿಯಲಿದೆ’’ ಎಂದು ಜನರಲ್ ರಾವತ್ ತಿಳಿಸಿದರು.

 ಶಾಂತಿ, ಸ್ಥಿರತೆ ಹಾಗೂ ಸುವ್ಯವಸ್ಥೆಯನ್ನು ಕಾಪಾಡಬೇಕಾದರೆ ಯಾವುದೇ ದೇಶಕ್ಕೆ ಬಲಿಷ್ಠವಾದ ಸಶಸ್ತ್ರಪಡೆಗಳ ಅಗತ್ಯವಿದೆಯೆಂದು ಜನರಲ್ ರಾವತ್ ತಿಳಿಸಿದರು.

  ಅದರೆ ಶಾಂತಿ ಹಾಗೂ ಸ್ಥಿರತೆ ಕಾಪಾಡಲು ಬೇಕಾದ ಯೋಗ್ಯವಾದ ಸಾಮರ್ಥ್ಯವನ್ನು ಪಡೆಯಲು ಸೇನೆಗೆ ಉತ್ತಮವಾಗಿ ತರಬೇತಿ ಪಡೆದ ಮಾನವಶಕ್ತಿ, ಸೈನಿಕರು, ನೌಕಾಪಡೆ ಮತು ವಾಯುಪಡೆ ಸಿಬ್ಬಂದಿಯ ಅಗತ್ಯವಿದೆ. ಸೈನಿಕರ ಸಬಲೀಕರಣ ವಾಗಬೇಕಾದರೆ ಅವರಿಗೆ ಉತ್ತಮ ತರಬೇತಿ ಹಾಗೂ ಉತ್ತಮ ಗುಣಮಟ್ಟದ ಶಸ್ತ್ರಾಸ್ತ್ರ ಹಾಗೂ ಉಪಕರಣಗಳ ಅಗತ್ಯವಿದೆಯೆಂದು ಅವರು ಹೇಳಿದರು.

 ನೌಕಾಪಡೆಯ ವರಿಷ್ಠ ಅಡ್ಮಿರಲ್ ಕರಮ್‌ ಬೀರ್‌ಸಿಂಗ್ ಮಾತನಾಡಿ ಸಾಗರಪ್ರದೇಶಗಳಲ್ಲಿ ಉಲ್ಬಣಿಸುತ್ತಿರುವ ಕಡಲ್ಗಳ್ಳತನದ ಪಿಡುಗಿನ ವಿರುದ್ಧ ಎಚ್ಚರಿಕೆ ನೀಡಿದರು ಹಾಗೂ ಇದರಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ದೂರಗಾಮಿ ಪರಿಣಾಮಗಳಾಗಲಿವೆಯೆಂದು ಎಚ್ಚರಿಕೆ ನೀಡಿದರು.

 ಹಿಂದೂ ಮಹಾಸಾಗರ ಪ್ರದೇಶದ ಸಮಾನಮನಸ್ಕ ಸದಸ್ಯರ ಜೊತೆ ಸಹಕಾರವನ್ನು ವೃದ್ಧಿಗೊಳಿಸಲು ಭಾರತೀಯ ನೌಕಾಪಡೆಯು ಬದ್ಧವಾಗಿದೆ. ‘‘ಪ್ರಧಾನಿಯವರು ಪ್ರತಿಪಾದಿಸಿರುವ ಸಮ್ಮಾನ್ (ಗೌರವ), ಸಂವಾದ, ಸಹಯೋಗ, ಶಾಂತಿ ಹಾಗೂ ಸಮೃದ್ಧಿ ಎಂಬ ಪಂಚ  ತತ್ವಗಳ ಆಧಾರದಲ್ಲಿ ಭಾರತೀಯ ನೌಕಾಪಡೆ ಸಹಕಾರ ನೀಡಲಿದೆ’’ ಎಂದು ಕರಮ್‌ಬೀರ್ ಸಿಂಗ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X