Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಗ್ರರಿಗೆ ಹಣಕಾಸು ಪೂರೈಕೆ ನಿಲ್ಲಿಸಲು...

ಉಗ್ರರಿಗೆ ಹಣಕಾಸು ಪೂರೈಕೆ ನಿಲ್ಲಿಸಲು ಪಾಕ್‌ಗೆ ಫೆಬ್ರವರಿವರೆಗೆ ಅವಕಾಶ

ಎಫ್‌ಎಟಿಎಫ್ ಪೂರ್ಣಧಿವೇಶನದಲ್ಲಿ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ18 Oct 2019 11:08 PM IST
share
ಉಗ್ರರಿಗೆ ಹಣಕಾಸು ಪೂರೈಕೆ ನಿಲ್ಲಿಸಲು ಪಾಕ್‌ಗೆ ಫೆಬ್ರವರಿವರೆಗೆ ಅವಕಾಶ

ಪ್ಯಾರಿಸ್, ಅ. 18: ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವವರ ವಿರುದ್ಧದ ಸಂಪೂರ್ಣ ಕ್ರಿಯಾ ಯೋಜನೆಯನ್ನು 2020ರ ಫೆಬ್ರವರಿ ಒಳಗೆ ಅನುಷ್ಠಾನಕ್ಕೆ ತರಲು ಪಾಕಿಸ್ತಾನ ವಿಫಲವಾದರೆ ಅದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭಯೋತ್ಪಾದಕರಿಗೆ ಹಣಕಾಸು ಪೂರೈಸುವವರ ಮೇಲೆ ನಿಗಾ ಇಡುವ ಜಾಗತಿಕ ಸಂಸ್ಥೆ ಎಫ್‌ಎಟಿಎಫ್ ಶುಕ್ರವಾರ ಎಚ್ಚರಿಕೆ ನೀಡಿದೆ. ಅಲ್ಲಿಯವರೆಗೆ ಆ ದೇಶವು ‘‘ಬೂದು ಪಟ್ಟಿ’ಯಲ್ಲಿ ಮುಂದುವರಿಯುವುದು.

ಒಂದು ದೇಶವು ಎಫ್‌ಎಟಿಎಫ್‌ನ ಬೂದು ಪಟ್ಟಿಯಲ್ಲಿ ಇರುವುದೆಂದರೆ, ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಅದಕ್ಕೆ ಎಚ್ಚರಿಕೆ ನೀಡಲಾಗಿದೆ ಎಂದು ಅರ್ಥ.

2020 ಫೆಬ್ರವರಿ ಬಳಿಕ, ಪಾಕಿಸ್ತಾನ ಎಫ್‌ಎಟಿಎಫ್‌ನ ಕಪ್ಪು ಪಟ್ಟಿಗೆ ಸೇರುವುದು ಬಹುತೇಕ ಖಚಿತ ಎಂದು ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಸಂಸ್ಥೆಯ ಐದು ದಿನಗಳ ಪೂರ್ಣಾಧಿವೇಶನದಲ್ಲಿ ಭಾಗವಹಿಸಿರುವ ಅಧಿಕಾರಿಗಳು ಹೇಳಿದ್ದಾರೆ.

ಪ್ಯಾರಿಸ್‌ನ ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್) ಪಾಕಿಸ್ತಾನ ಕುರಿತ ಅಂತಿಮ ನಿರ್ಧಾರವನ್ನು ಮುಂದಿನ ವರ್ಷದ ಫೆಬ್ರವರಿಯಲ್ಲಿ ತೆಗೆದುಕೊಳ್ಳಲಿದೆ.

 ಭಯೋತ್ಪಾದಕರಿಗೆ ಹಣಕಾಸು ಪೂರೈಕೆ ಸಂಬಂಧದ 27 ಅಂಶಗಳ ಪೈಕಿ ಕೇವಲ ಐದನ್ನು ನಿಭಾಯಿಸುವಲ್ಲಿ ಪಾಕಿಸ್ತಾನ ಸಮರ್ಥವಾಗಿದೆ ಎನ್ನುವುದನ್ನು ಎಫ್‌ಎಟಿಎಫ್ ಗಮನಿಸಿದೆ ಎಂದು ಭಾರತೀಯ ಅಧಿಕಾರಿಗಳು ಹೇಳಿದ್ದಾರೆ.

27 ಅಂಶಗಳ ಕ್ರಿಯಾ ಯೋಜನೆಯಲ್ಲಿ ಪಾಕಿಸ್ತಾನದದ ಕಳಪೆ ನಿರ್ವಹಣೆಯನ್ನು ಗಮನದಲ್ಲಿರಿಸಿ ಅದನ್ನು ಬೂದು ಪಟ್ಟಿಯಲ್ಲೇ ಉಳಿಸಿಕೊಳ್ಳಲು ಒಮ್ಮತದಿಂದ ನಿರ್ಧರಿಸಲಾಯಿತು ಎಂದು ಎಫ್‌ಎಟಿಎಫ್ ಹೇಳಿದೆ.

ಉಗ್ರ ನಿಗ್ರಹ ಕ್ರಮಕ್ಕಾಗಿ ಪಾಕಿಸ್ತಾನಕ್ಕೆ ಪ್ರಬಲ ಒತ್ತಾಯ

‘‘2020 ಫೆಬ್ರವರಿ ಒಳಗೆ ಕ್ರಿಯಾ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೊಳಿಸುವಂತೆ ನಾವು ಪಾಕಿಸ್ತಾನವನ್ನು ಬಲವಾಗಿ ಒತ್ತಾಯಿಸುತ್ತೇವೆ. ಇದರಲ್ಲಿ ಪಾಕಿಸ್ತಾನ ವಿಫಲವಾದರೆ ಪಾಕಿಸ್ತಾನದೊಂದಿಗಿನ ವ್ಯಾಪಾರ ಸಂಬಂಧಗಳು ಮತ್ತು ವ್ಯವಹಾರಗಳನ್ನು ಮರುಪರಿಶೀಲಿಸುವಂತೆ ಸದಸ್ಯ ದೇಶಗಳನ್ನು ಎಫ್‌ಎಟಿಎಫ್ ಒತ್ತಾಯಿಸಬೇಕಾಗುತ್ತದೆ’’ ಎಂದು ಎಫ್‌ಎಟಿಎಫ್ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಶುಕ್ರವಾರ ಎಫ್‌ಎಟಿಎಫ್ ಪೂರ್ಣಾಧಿವೇಶನದ ಕೊನೆಯ ದಿನವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X