ವಿಪಕ್ಷ ನಾಯಕರ ಆಪ್ತ ಕಾರ್ಯದರ್ಶಿಯಾಗಿ ಡಾ.ವೆಂಕಟೇಶಯ್ಯ ನೇಮಕ
ಬೆಂಗಳೂರು, ಅ.18: ಕೆಎಎಸ್ (ಹಿರಿಯ ಶ್ರೇಣಿ) ಅಧಿಕಾರಿ ಡಾ.ವೆಂಕಟೇಶಯ್ಯ ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯರ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಬೆಂಗಳೂರಿನ ಕೃಷಿ ಮಾರಾಟ ಇಲಾಖೆ(ಕಾನೂನು ಜಾರಿ ಕೋಶ) ಜಂಟಿ ನಿರ್ದೇಶಕರಾಗಿದ್ದ ಡಾ.ವೆಂಕಟೇಶಯ್ಯ ಅವರನ್ನು ರಾಜ್ಯಪಾಲರ ಆದೇಶಾನುಸಾರ ಮೇಲ್ಕಂಡ ಹುದ್ದೆಗೆ ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
Next Story