ಎಂಆರ್ಪಿಎಲ್ನಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಒಂದು ಕೋಟಿ ರೂ. ದೇಣಿಗೆ
ಮಂಗಳೂರು, ಅ.19: ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳ ಸಂದರ್ಭ ಕಾರ್ಯಾಚರಣೆಗೆ ಅಗತ್ಯ ಪರಿಕರ ಖರೀದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ತರಬೇತಿಗಾಗಿ ಎಂಆರ್ಪಿಎಲ್ನಿಂದ ಒಂದು ಕೋಟಿ ರೂ. ದೇಣಿಗೆಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರಿಗೆ ಹಸ್ತಾಂತರಿಸಲಾಯಿತು.
ಎಂಆರ್ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ವೆಂಕಟೇಶ್ ಅವರು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರಿಗೆ ದೇಣಿಗೆಯ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಹಸ್ತಾಂತರಿಸಿದರು.
ಈ ಸಂದರ್ಭ ಜಿಜಿಎಂ-ಎಚ್ಆರ್ ಬಿ.ಎಚ್.ವಿ. ಪ್ರಸಾದ್ ಮತ್ತು ಎಂಆರ್ಪಿಎಲ್ನ ಅಧಿಕಾರಿಗಳು ಉಪಸ್ಥಿತರಿದ್ದರು.
Next Story