Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅ. 21ರಂದು ಬಿ.ಸಿ.ರೋಡ್ ಸೌಂದರ್ಯೀಕರಣ...

ಅ. 21ರಂದು ಬಿ.ಸಿ.ರೋಡ್ ಸೌಂದರ್ಯೀಕರಣ ಯೋಜನೆಗೆ

ವಾರ್ತಾಭಾರತಿವಾರ್ತಾಭಾರತಿ19 Oct 2019 10:14 PM IST
share

ಬಂಟ್ವಾಳ, ಅ. 19: ಸುಮಾರು 20 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಬಿ.ಸಿ.ರೋಡ್ ಸೌಂದರ್ಯೀಕರಣ ಯೋಜನೆಗೆ ಅ. 21ರಂದು ಶಿಲಾನ್ಯಾಸ ನಡೆಯಲಿದೆ ಎಂದು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಹೇಳಿದರು.

ಶನಿವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಂಗಳೂರಿನ ವಿನ್ಯಾಸಕಾರ ಧರ್ಮರಾಜ್ ಅವರ ನೆರವಿನಿಂದ ಈಗಾಗಲೇ ಯೋಜನೆ ರೂಪುರೇಷೆ ತಯಾರಾಗಿದೆ. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಿಲಾನ್ಯಾಸ ನೆರವೇರಿಸಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್, ಕಂದಾಯ ಸಚಿವ ಆರ್. ಅಶೋಕ್ ಉಪಸ್ಥಿತರಿರುವರು. ಬಳಿಕ ಕಂದಾಯ ಸಚಿವರು 700 ಮಂದಿಗೆ 94ಸಿ ಮತ್ತು 94ಸಿಸಿ ಹಕ್ಕುಪತ್ರವನ್ನು ವಿತರಿಸಲಿದ್ದಾರೆ ಎಂದು ಹೇಳಿದರು.

ನಗರ ಸೌಂದರ್ಯವೃದ್ಧಿಗೆ ಈಗಾಗಲೇ ಸಮಿತಿಯನ್ನು ರಚಿಸಲಾಗಿದ್ದು, ಹೊರದೇಶದಲ್ಲಿರುವ ಬಂಟ್ವಾಳದವರು ಇದರಲ್ಲಿದ್ದಾರೆ. ಉದ್ಯಮಿಗಳಾದ ಶಶಿಕಿರಣ್ ಶೆಟ್ಟಿ, ಸಂತೋಷ್ ಕುಮಾರ್, ಬಿ.ಎ,ಮೊಯ್ದೀನ್, ಜೆರಾಲ್ಡ್ ಡಿಮೆಲ್ಲೊ, ಜಗನ್ನಾಥ ರಾವ್ ಮುಖ್ಯವಾಗಿ ಇರುತ್ತಾರೆ. ಎಂಆರ್‍ಪಿಎಲ್, ಎನ್‍ಎಂಪಿಟಿ, ಒಎನ್‍ಜಿಸಿ, ಎಚ್‍ಪಿಸಿಎಲ್, ಬಿಪಿಸಿಎಲ್, ಐಒಸಿಎಲ್ ತನ್ನ ನಿಧಿಯನ್ನು ಅಭಿವೃದ್ಧಿಗೆ ನೀಡಲಿದೆ. ಇದರಲ್ಲಿ ಎನ್‍ಎಂಪಿಟಿ ವತಿ ಯಿಂದ ಅತ್ಯುತ್ಕೃಷ್ಟ ದರ್ಜೆಯ ಶೌಚಾಲಯ ನಿರ್ಮಾಣವಾಗಲಿದೆ ಎಂದವರು ಮಾಹಿತಿ ನೀಡಿದರು.

2 ಕೋಟಿ ರೂ.ಅಂದಾಜು ವೆಚ್ಚದ ಸಿಸಿ ಕ್ಯಾಮರಾ, ಸರ್ವೀಸ್ ರಸ್ತೆಯಲ್ಲಿ ಫುಟ್‍ಪಾತ್, ವಾರದ ಸಂತೆ, ಕೈಕುಂಜೆ ರಸ್ತೆ ಅಗಲೀಕರಣ, ಬಸ್ ನಿಲ್ದಾಣ ಎದುರು ಸರ್ಕಲ್, ಬೀದಿದೀಪ, ಪಾರ್ಕಿಂಗ್ ಈ ಯೋಜನೆಯಲ್ಲಿ ಒಳಗೊಂಡಿದೆ. 10 ಕೋಟಿ ರೂ ಸಿ.ಎಸ್.ಆರ್ ಫಂಡ್ ನಿಂದ ದೊರಕಲಿದ್ದರೆ, ಮುಖ್ಯಮಂತ್ರಿಯವರು ಈಗಾಗಲೇ 5 ಕೋಟಿ ರೂಗಳನ್ನು ಘೋಷಿಸಿದ್ದಾರೆ. ಉಳಿದದ್ದನ್ನು ತನ್ನ ನಿಧಿಯಿಂದ ಒದಗಿಸಲಾಗುತ್ತದೆ ಎಂದು ಶಾಸಕರು ತಿಳಿಸಿದರು.

ಅತಿಕ್ರಮಣ ತೆರವು, ಹೊಸ ಭೂಸ್ವಾಧೀನ ಇಲ್ಲ

ಯೋಜನೆ ಜಾರಿಗೆ ಸಾರ್ವಜನಿಕರ ಸಹಕಾರ ಮುಖ್ಯವಾಗಿದ್ದು, ಈಗಾಗಲೇ ಗುರುತು ಮಾಡಲಾದ ಜಾಗದಲ್ಲಿ ಅತಿಕ್ರಮಣಗಳಿದ್ದರೆ ತೆರವುಗೊಳಿಸಲಾಗುವುದು. ಯಾವುದೇ ವಶೀಲಿ ಮಧ್ಯಸ್ಥಿಕೆಗೆ ಇಲ್ಲಿ ಅವಕಾಶವಿಲ್ಲ ಎಂದ ಶಾಸಕರು, ಹೊಸದಾಗಿ ಭೂಸ್ವಾಧೀನ ಪ್ರಕ್ರಿಯೆ ಇದಕ್ಕೆ ಮಾಡುವುದಿಲ್ಲ ಎಂದು ತಿಳಿಸಿದರು. ಇದಾದ ಬಳಿಕ ಬಂಟ್ವಾಳಕ್ಕೆ ಸಮರ್ಪಕವಾದ ಯುಜಿಡಿ, ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಸಹಿತ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದದವರು ಪ್ರಕಟಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಪ್ರಮುಖರಾದ ಜಿ.ಆನಂದ, ಎ.ಗೋವಿಂದ ಪ್ರಭು, ಬಿ.ದೇವದಾಸ ಶೆಟ್ಟಿ, ಕೆ.ಹರಿಕೃಷ್ಣ ಬಂಟ್ವಾಳ್, ಸಂತೋಷ್ ಕುಮಾರ್ ಬೋಳಿಯಾರ್, ರಾಮದಾಸ ಬಂಟ್ವಾಳ, ಪ್ರಭಾಕರ ಪ್ರಭು, ಮೋನಪ್ಪ ದೇವಸ್ಯ, ನಾರಾಯಣ ಶೆಟ್ಟಿ, ವಿಜಯ ರೈ, ರಮಾನಾಥ ರಾಯಿ ಮತ್ತಿತರರು ಉಪಸ್ಥಿತರಿದ್ದರು,

share
ವಾರ್ತಾಭಾರತಿ
ವಾರ್ತಾಭಾರತಿ
Next Story
X