Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ‘ಅಸುರನ್ ’ ಸಹಜತೆಗೆ ಹತ್ತಿರವಿರುವ...

‘ಅಸುರನ್ ’ ಸಹಜತೆಗೆ ಹತ್ತಿರವಿರುವ ಒಳ್ಳೆಯ ಪ್ರಯತ್ನ

ತಮಿಳು ಸಿನೆಮಾ

ನಂದಕುಮಾರ್ ಕೆ. ಎನ್.ನಂದಕುಮಾರ್ ಕೆ. ಎನ್.19 Oct 2019 11:56 PM IST
share
‘ಅಸುರನ್  ’ ಸಹಜತೆಗೆ ಹತ್ತಿರವಿರುವ ಒಳ್ಳೆಯ ಪ್ರಯತ್ನ

ಅಸುರನ್ ಇಂದಿನ ದಿನಗಳಲ್ಲಿ ಬಂದಿರುವ ವಿರಳ ಚಿತ್ರಕಥೆ ಹೊಂದಿರುವ ಸಿನೆಮಾ. ವೆಟ್ರಿಮಾರನ್ ಇದರ ನಿರ್ದೇಶಕ. ಒಳ್ಳೆಯ ಛಾಯಾಗ್ರಹಣ, ಒಳ್ಳೆಯ ದೃಶ್ಯಸಂಯೋಜನೆ. ಚಿತ್ರದಲ್ಲಿ ಸಹಜತೆ ಹೆಚ್ಚು ಇದೆ.. ಪರವಾಗಿಲ್ಲ ಎನ್ನಬಹುದಾದ ಸಂಗೀತವಿದೆ.

ತಮಿಳಿನ ಧನುಷ್ ಹಾಗೂ ಮಲೆಯಾಳಂನ ಮಂಜು ವಾರಿಯರ್ ಮುಖ್ಯ ತಾರಾಗಣದಲ್ಲಿರುವ ಈ ಸಿನೆಮಾ ಜಾತೀಯತೆಯ ಮನಸುಗಳು ಹಾಗೂ ಕ್ರೌರ್ಯಗಳ ಕೆಲವು ಮುಖಗಳನ್ನು ಅನಾವರಣಗೊಳಿಸುತ್ತದೆ. ಕಥಾನಾಯಕನ ಕುಟುಂಬದ ಸುತ್ತಾ ಈ ಕಥೆಯನ್ನು ಹೆಣೆಯಲಾಗಿದೆ. ತಮಿಳಿನ ಪೂಮಣಿ ಬರೆದ ‘ವೆಕೈ’ ಎಂಬ ಕಾದಂಬರಿ ಆಧಾರಿತ ಚಿತ್ರವಿದು.

ಧನುಷ್‌ರ ಅಭಿನಯ ಚೆನ್ನಾಗಿದೆ. ಎಲ್ಲ ಪಾತ್ರಧಾರಿಗಳು ತಮ್ಮ ತಮ್ಮ ಪಾತ್ರಗಳಿಗೆ ನ್ಯಾಯ ಸಲ್ಲಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ.

ಆರಂಭದ ಅಂದರೆ ಫ್ಲಾಶ್ ಬ್ಯಾಕ್ ಬರುವವರೆಗೂ ಚಿತ್ರದಲ್ಲಿ ಬಿಗಿತನ ಕಾಣುವುದಿಲ್ಲ. ಆ ಸನ್ನಿವೇಶಗಳಿಗೆ ತಕ್ಕಂತಹ ಭಾವಗಳನ್ನು, ಗಾಢತೆಗಳನ್ನು ವೀಕ್ಷಕರಿಗೆ ಮೂಡಿಸುವಲ್ಲಿ ಯಶಸ್ಸು ಕಾಣುವುದಿಲ್ಲ. ನಂತರದ ಚಿತ್ರ ನಿರ್ದೇಶಕರ ಹಿಡಿತ, ಪಾತ್ರಧಾರಿಗಳ ಅಭಿನಯ ಗಾಢತೆಯನ್ನು, ಸನ್ನಿವೇಶಗಳನ್ನು ವೀಕ್ಷಕರಿಗೆ ಗಾಢವಾಗಿ ತಟ್ಟುವಂತೆ ಕಥೆಯನ್ನು ನಿರೂಪಿಸುತ್ತಾ ಹೋಗುತ್ತದೆ.

ಚಿತ್ರದ ಕಥೆಯಲ್ಲಿಯೇ ಜಾತೀಯತೆಯ ಕ್ರೌರ್ಯ ಹಾಗೂ ಶೋಷಣೆ ಆ ಊರಿನ ಸುತ್ತಮುತ್ತಲಿನ ಸಾಮಾಜಿಕ ಸಮಸ್ಯೆಯಾಗಿ ಕಾಣುತ್ತಿದ್ದರೂ ಚಿತ್ರದಲ್ಲಿ ಅದು ಕಥಾನಾಯಕನ ಕುಟುಂಬಕ್ಕೂ ಆ ಊರಿನ ಆಸ್ತಿವಂತ ಕುಟುಂಬಕ್ಕೂ ನಡುವಿರುವ ಸಮಸ್ಯೆಯೆಂದು ಒತ್ತಿಹೇಳಲು ಬಹಳ ಪ್ರಯಾಸ ಪಡಲಾಗಿದೆ.

ಪೊಲೀಸ್ ಹಾಗೂ ನ್ಯಾಯಾಲಯಗಳ ಚಿತ್ರಣದಲ್ಲೂ ಹೇಗೆ ಜಾತೀಯತೆ ಸಮಾಜದ ಅಂತರ್ರಚನೆಯಲ್ಲೇ ಸೇರಿಕೊಂಡಿರುವ ವಿಚಾರ ಎನ್ನುವುದನ್ನು ಗೌಣಗೊಳಿಸಿ ತೋರಿಸಲಾಗಿದೆ. ಆ ಕ್ರೌರ್ಯದ ಗಾಢತೆಯನ್ನು ವೀಕ್ಷಕರಿಗೆ ಕಟ್ಟಿಕೊಡುವುದಿಲ್ಲ.

ಹೊಡೆದಾಟದ ದೃಶ್ಯಗಳಿಗೆ ಕೊಟ್ಟಷ್ಟು ಗಮನವನ್ನು, ಕಥೆಯ ಬಗ್ಗೆ, ಅದರ ಸಾಮಾಜಿಕ ಆಯಾಮಗಳ ಬಗ್ಗೆ, ಸನ್ನಿವೇಶಗಳನ್ನು ಗಾಢವಾಗಿ ಕಟ್ಟಿಕೊಡುವ ಬಗ್ಗೆ ನಿರ್ದೇಶಕರು ನೀಡಿದಂತೆ ಕಾಣಿಸುವುದಿಲ್ಲ.

ಸಾಮಾನ್ಯವಾಗಿ ಎಲ್ಲಾ ಸಾಮಾಜಿಕ ಸಮಸ್ಯೆಗಳನ್ನೊಳಗೊಂಡಿರುವ ಚಿತ್ರಗಳಂತೆ ವ್ಯಕ್ತಿ ಕೇಂದ್ರೀಕರಣವೇ ಎದ್ದು ಕಾಣಿಸುತ್ತದೆ. ಉಳಿದ ಜನ ಸಮೂಹ ಕೇವಲ ಸಕ್ರಿಯವಲ್ಲದ ಬೆಂಬಲ, ಇಲ್ಲವೇ ಮೂಕ ಪ್ರೇಕ್ಷಕರ ಮಟ್ಟಕ್ಕೆ ನಿಲ್ಲಿಸುತ್ತದೆ. ಒಂದು ಸನ್ನಿವೇಶದಲ್ಲಿ ಅದೂ ಕೊನೆಯ ಹೊಡೆದಾಟದ ಸನ್ನಿವೇಶದಲ್ಲಿ ಎಲ್ಲಾ ಮುಗಿದ ಮೇಲೆ ಸಮೂಹ ನಾಯಕನೊಂದಿಗೆ ಬಂದು ಸೇರಿಕೊಳ್ಳುವ ರೀತಿ ತೋರಿಸಲಾಗಿದೆ. ಅದರಲ್ಲೂ ಸಕ್ರಿಯತೆ ಇಲ್ಲ. ಮೇಲ್ಜಾತಿ ಆಸ್ತಿವಂತ ಕುಟುಂಬ ಮಾತ್ರ ಸಮೂಹವನ್ನು ತೊಡಗಿಸಿಕೊಳ್ಳುವುದನ್ನು ಸಹಜವೆಂಬಂತೆ ತೋರಿಸಲಾಗಿದೆ. ಆದರೆ ಆ ವ್ಯವಸ್ಥೆಯ ವಿರುದ್ಧ ನಿಂತು ಹೋರಾಡುವ ನಾಯಕನ ಹೋರಾಟ ಏಕಾಂಗಿಯನ್ನಾಗಿ ತೋರಿಸಲಾಗಿದೆ. ಆತ ತನ್ನ ಕುಟುಂಬದ ಹಲವರನ್ನು ಕಳೆದುಕೊಂಡರೂ ಕೊನೆಯವರೆಗೂ ಏಕಾಂಗಿ ಹೋರಾಟದ ದುರಂತ ವ್ಯಕ್ತಿಯನ್ನಾಗಿ ತೋರಿಸಿ ವೀಕ್ಷಕರ ಸಂತಾಪ ಗಿಟ್ಟಿಸಿಕೊಳ್ಳುವುದಕ್ಕೆ ಸೀಮಿತ ಮಾಡಿಡಲಾಗಿದೆ. ಪಂಚಾಯ್ತಿ ಸನ್ನಿವೇಶಗಳೂ ಕೂಡ ಪೇಲವವಾಗಿ ತೋರಿಸಲಾಗಿದೆ. ವೈಭವೀಕರಣಕ್ಕೆ ಒತ್ತು ಹೆಚ್ಚಿದೆ.

‘‘ಆಸ್ತಿ ಸಂಪತ್ತನ್ನು ಕಸಿದುಕೊಳ್ಳಬಹುದು ಆದರೆ ಕಲಿತ ಶಿಕ್ಷಣವನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ. ಹಾಗಾಗಿ ಚೆನ್ನಾಗಿ ಓದು’’ ಎಂದು ಜೈಲುವಾಸವನ್ನು ಹೊತ್ತುಕೊಂಡು ಹೊರಟಿರುವ ನಾಯಕ ತನ್ನ ಬಾಕಿಯುಳಿದ ಒಬ್ಬನೇ ಮಗನಿಗೆ ಹೇಳುವ ದೃಶ್ಯದೊಂದಿಗೆ ಚಿತ್ರ ಕೊನೆಗೊಳ್ಳುತ್ತದೆ. ಇಂದಿನ ಸಂದರ್ಭದಲ್ಲಿ ದಲಿತ ದಮನಿತ ಸಮೂಹಕ್ಕೆ ಈ ಮಾತುಗಳು ಕ್ಲೀಷೆಯ ಮಾತುಗಳೇ ಆಗಿವೆ. ಯಾಕೆಂದರೆ ಶಿಕ್ಷಿತರಾದ ಮಾತ್ರಕ್ಕೆ ದಲಿತ ದಮನಿತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬಹುದು ಎನ್ನುವುದು ವಾಸ್ತವವಲ್ಲ ತಾನೆ.

 ಒಟ್ಟಿನಲ್ಲಿ ಅಸುರನ್ ಸಿನೆಮಾ ಒಳ್ಳೇ ಪ್ರಯತ್ನವೆನ್ನಬಹುದು. ಇಂದಿನ ಕಾಲಘಟ್ಟದ ಸಂಕೀರ್ಣತೆಯಲ್ಲಿ ಇಂತಹ ಸಿನೆಮಾಗಳಿಂದ ಹೆಚ್ಚಿನ ಕೊಡುಗೆಯೇನೂ ಇಲ್ಲ. ಜಾತೀಯತೆಯಂತಹ ವಿಚಾರ ಇಟ್ಟುಕೊಂಡು ಸಿನೆಮಾ ಮಾಡಿ ಆರ್ಥಿಕವಾಗಿಯೂ ಯಶಸ್ವಿಯಾಗಿದ್ದಾರಲ್ಲ ಎಂಬ ಸಮಾಧಾನ ಪಡಲು ಅಡ್ಡಿಯಿಲ್ಲ. ನಿರ್ದೇಶಕರ ನಿರ್ಮಾಪಕರ ಇಂತಹ ಪ್ರಯತ್ನಗಳನ್ನು ಮೆಚ್ಚಬಹುದು.

ಅದಕ್ಕಿಂತ ಹೆಚ್ಚು ನಿರೀಕ್ಷೆಗಳನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ.

ಮಿಂಚಂಚೆ: nandakumarnandana67@gmail.com

share
ನಂದಕುಮಾರ್ ಕೆ. ಎನ್.
ನಂದಕುಮಾರ್ ಕೆ. ಎನ್.
Next Story
X