ತೆಂಕನಿಡಿಯೂರು: ದಕ್ಷಿಣ ವಲಯ ವಿವಿ ಪುರುಷರ ಕಬಡ್ಡಿ ಪಂದ್ಯಾಟ
ಉಡುಪಿ, ಅ.21: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಡಿ.11ರಿಂದ 14ರವರೆಗೆ ನಡೆಯುವ ದಕ್ಷಿಣ ವಲಯ ಪುರುಷರ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಕಾಲೇಜಿನ ಸಭಾಂಗಣದಲ್ಲಿ ಶಾಸಕ ಕೆ. ರಘುಪತಿ ಭಟ್ ಬಿಡುಗಡೆಗೊಳಿಸಿದರು.
ಇದೇ ಸಂದರ್ಭದಲ್ಲಿ ಟೂರ್ನಿಯ ಯಶಸ್ಸಿಗೆ ಪೂರ್ವಭಾವಿ ಸಭೆ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಿತು. ಟೂರ್ನಿಗೆ ಅಗತ್ಯ ವ್ಯವಸ್ಥೆ, ಸಮಿತಿಗಳು ಇತ್ಯಾದಿ ಗಳ ಬಗ್ಗೆ ವಿವರವಾದ ಚರ್ಚೆ ನಡೆದು ಸ್ಪಧೆಯನ್ನು ಯಶಸ್ವಿಯಾಗಿ ನಡೆಸುವಂತೆ ಶಾಸಕರು ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಜಿಪಂ ಸದಸ್ಯ ಜನಾರ್ದನ ತೋನ್ಸೆ, ಪ್ರಾಂಶುಪಾಲ ಬಾಲಕೃಷ್ಣ ಎಸ್. ಹೆಗ್ಡೆ, ಗ್ರಾಪಂ ಅಧ್ಯಕ್ಷ ಕೃಷ್ಣ ಶೆಟ್ಟಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಮೀನುಗಾರರ ಪೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ, ನಗರಸಭಾ ಸದಸ್ಯ ವಿಜಯ ಕೊಡವೂರು, ಮಂಗಳೂರು ವಿವಿ ಕ್ರೀಡಾ ನಿರ್ದೇಶಕ ಡಾ.ಕಿಶೋರ್ ಕುಮಾರ್ ಸಿ.ಕೆ., ಉಡುಪಿ ಜಿಲ್ಲಾ ಕಬಡ್ಡಿ ಅಸೋಸಿಯೇಶನ್ಅಧ್ಯಕ್ಷ ರಾಜೇಂದ್ರ ಸುವರ್ಣ, ಕ್ರೀಡಾ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ದಯಾನಂದ ಶೆಟ್ಟಿ ಕೊಜಕುಳಿ, ರಾಘವೇಂದ್ರ ಕಿಣಿ, ಪ್ರಸಾದ್ರಾವ್, ಮಂಜುಳಾ ಪ್ರಸಾದ್, ರಘುರಾಮ ಪುತ್ತೂರು, ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ.ರಾಘವೇಂದ್ರ, ತೆಂಕನಿಡಿಯೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ, ತೆಂಕನಿಡಿಯೂರು ಹೈಸ್ಕೂಲ್ನ ಮುಖ್ಯೋಪಾಧ್ಯಾಯ ಸುಚೇತ, ಐಕ್ಯೂಎಸಿ ಸಂಚಾಲಕ ಡಾ. ಸುರೇಶ್ ರೈ ಕೆ., ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜಿನ ಕ್ರೀಡಾ ಸಂಚಾಲಕ ಪ್ರೇಮನಾಥ ಶೆಟ್ಟಿ ಕಾವೂರು ಉಪಸ್ಥಿತರಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಮಚಂದ್ರ ಪಾಟ್ಕರ್ ಸ್ವಾಗತಿಸಿದರು. ಉಪನ್ಯಾಸಕ ದಯಾನಂದ ಕುಮಾರ್ ವಂದಿಸಿದರು.