Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆ.ಬಿ.ಸಿದ್ದಯ್ಯನವರ ಕಾವ್ಯ ದಲಿತ ಕಾವ್ಯದ...

ಕೆ.ಬಿ.ಸಿದ್ದಯ್ಯನವರ ಕಾವ್ಯ ದಲಿತ ಕಾವ್ಯದ ಮೈಲಿಗಲ್ಲು: ಅರವಿಂದ ಮಾಲಗತ್ತಿ

ವಾರ್ತಾಭಾರತಿವಾರ್ತಾಭಾರತಿ21 Oct 2019 9:55 PM IST
share
ಕೆ.ಬಿ.ಸಿದ್ದಯ್ಯನವರ ಕಾವ್ಯ ದಲಿತ ಕಾವ್ಯದ ಮೈಲಿಗಲ್ಲು: ಅರವಿಂದ ಮಾಲಗತ್ತಿ

ಮೈಸೂರು,ಅ.21: ಖಂಡ ಕಾವ್ಯ ಶೈಲಿಯ ಕೆ.ಬಿ.ಸಿದ್ದಯನವರ ಕಾವ್ಯಗಳು ದಲಿತ ಕಾವ್ಯದ ಮೈಲಿಗಲ್ಲು ಎಂದು ಹಿರಿಯ ಸಾಹಿತಿ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಪ್ರೊ.ಅರವಿಂದ ಮಾಲಗತ್ತಿ ತಿಳಿಸಿದರು. 

ಮಾನಸ ಗಂಗೋತ್ರಿಯ ಗಾಂಧಿಭವನದಲ್ಲಿ ಬಹುಲೇಕ ಸಾಹಿತ್ಯ ವೇದಿಕೆ ಏರ್ಪಡಿಸಿದ್ದ ಇತ್ತೀಚೆಗೆ ನಿಧನರಾದ ದಲಿತ ಕವಿ ಕೆ.ಬಿ.ಸಿದ್ದಯ್ಯನವರ ನುಡಿನಮನ ಸಭೆಯಲ್ಲಿ ಮಾತನಾಡಿದ ಅವರು 'ಖಂಡಕಾವ್ಯಕ್ಕೆ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದ ಸಿದ್ದಯ್ಯನವರು ಈ ದಿಸೆಯಲ್ಲಿ ವಚನ ಸಾಹಿತ್ಯವನ್ನೇ ಅಧಿಕೃತವಾಗಿ ನೆಚ್ಚಿಕೊಂಡು ವಚನ ಸಾಹಿತ್ಯದ ಶಕ್ತಿಯನ್ನು ದಲಿತ ಸಾಹಿತ್ಯದ ಪರಿಭಾಷೆಯಾಗಿ ಪುನರ್ ಬಳಸಿಕೊಂಡರು' ಎಂದರು. 

ಅಲ್ಲಮ ಪ್ರಭುವಿನ ಬಗ್ಗೆ ಎಲ್ಲಿಲ್ಲದ ಪ್ರೀತಿ ಹೊಂದಿದ್ದ ಕೆ.ಬಿ.ಸಿದ್ದಯ್ಯನವರು ಬಕಾಲ, ಅನಾತ್ಮ, ಗಲ್ಲೇಬಾನಿ, ದಕ್ಲಾ ಕಥಾದೇವಿ ಕಾವ್ಯ ಹೀಗೆ ತಮ್ಮ ನಾಲ್ಕು ಖಂಡಕಾವ್ಯಗಳಲ್ಲಿ ವಚನ ಸಾಹಿತ್ಯದ ನಿರೂಪಣಾ ಶೈಲಿ ಅನುಸರಿಸಿದರು. ದುರಂತವೆಂದರೆ ಅವರ ಕಾವ್ಯದ ಈ ಶೈಲಿ ಕುರಿತು ಹೆಚ್ಚು ಚರ್ಚೆ ನಡೆದಿಲ್ಲ. ಹೀಗಿದ್ದರೂ ಸಿದ್ದಯ್ಯನವರ ಕಾವ್ಯ ದಲಿತ ಕಾವ್ಯದ ಸಂದರ್ಭದಲ್ಲಿ ಒಂದು ಮೈಲಿಗಲ್ಲಾಗಿ ನಿಲ್ಲುತ್ತದೆ ಎಂದು ಪ್ರೊ.ಮಾಲಗತ್ತಿ ತಿಳಿಸಿದರು.

ಕೆ.ಬಿ.ಸಿದ್ದಯ್ಯನವರ ಕಾವ್ಯವನ್ನು ಮುಳ್ಳೂರು ನಾಗರಾಜರವರ ಕಾವ್ಯದೊಡನೆ ಹೋಲಿಸಿದ ಮಾಲಗತ್ತಿಯವರು ಮುಳ್ಳೂರರ ಕಾವ್ಯ ಆಡುಮಾತಿನ ಶೈಲಿ ಮೂಲಕ ಬದುಕಿನ ನೇರ ಅನುಭವಗಳನ್ನು ಕಟ್ಟಿಕೊಟ್ಟರೆ ಸಿದ್ದಯ್ಯನವರ ಕಾವ್ಯ ಪರೋಕ್ಷ ನಿರೂಪಣಾ ಶೈಲಿ ಅನುಸರಿಸುತ್ತದೆ ಎಂದರು. 

ಸಾಹಿತಿ ಬನ್ನೂರು ಕೆ.ರಾಜು ಮಾತನಾಡಿ, ಕೆ.ಬಿ.ಸಿದ್ದಯ್ಯನವರ ಕಾವ್ಯ ಜನರಿಗೆ ವಿಶೇಷವಾಗಿ ಮೈಸೂರಿಗರಿಗೆ ಅಷ್ಟಾಗಿ ತಲುಪಿಲ್ಲ. ಅದನ್ನು ತಲುಪಿಸುವ ಕಾರ್ಯ ವಿಮರ್ಶಕರಿಂದ ನಡೆಯಬೇಕಿದೆ ಎಂದು ತಿಳಿಸಿದರು. 

ಕೇಂದ್ರದ ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಕುಪ್ನಳ್ಳಿ ಕೆ.ಭೈರಪ್ಪ ಮಾತನಾಡಿ, ಮೈಸೂರು ವಿವಿಯಲ್ಲೇ ಎಂ.ಎ ಪದವಿ ಪಡೆದು ಮೈಸೂರಿನ ಬಗ್ಗೆ ಅದರಲ್ಲೂ ಕುವೆಂಪು ಮತ್ತು ತೇಜಸ್ವಿಯವರ ಬಗ್ಗೆ ಇನ್ನಿಲ್ಲದ ಪ್ರೀತಿ ಹೊಂದಿದ್ದ ಸಿದ್ದಯ್ಯನವರು ಈ ಹಿನ್ನೆಲೆಯಲ್ಲಿ ತಮ್ಮ ಪುತ್ರನಿಗೆ 'ಅನಿಕೇತನ' ಎಂದು ಹೆಸರಿಟ್ಟರು ಎಂಬುದನ್ನು ನೆನೆಪಿಸಿಕೊಂಡರು.

ಬಾರುಕೋಲು ಪತ್ರಿಕೆಯ ಬಿ.ಆರ್.ರಂಗಸ್ವಾಮಿ ಮತ್ತು ಅವರ ಪತ್ನಿ ಪದ್ಮಶ್ರೀ ರಂಗಸ್ವಾಮಿ, 70ರ ದಶಕದಲ್ಲಿ ದಲಿತ ಚಳುವಳಿಯ ಸಂದರ್ಭದಲ್ಲಿ ಕೆ.ಬಿ.ಸಿದ್ದಯ್ಯನವರ ರಚಿಸಿದ ಜನಪ್ರಿಯ ಕ್ರಾಂತಿಗೀತೆ “ಈ ನಾಡಮಣ್ಣಿನಲ್ಲಿ ಮಣ್ಣಾದ ಜನಗಳ ಕತೆಯ...” ಹಾಡನ್ನು ಪ್ರಸ್ತುತ ಪಡಿಸಿದರು. 

ವೇದಿಕೆಯ ಅಧ್ಯಕ್ಷ ಪುನೀತ್ ಎನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾವ್ಯಾಸಕ್ತರಾದ ಯತಿರಾಜು ಬ್ಯಾಲಹಳ್ಳಿ, ಕಾಂತರಾಜು ಮೌರ್ಯ, ಬಿ.ಎಂ.ಲಿಂಗರಾಜು, ನಾರಾಯಣ, ಪ್ರವೀಣ್ ಮತ್ತಿತರರು ಭಾಗವಹಿಸಿದ್ದರು. ಸಭೆಯ ನಿರೂಪಣೆಯನ್ನು ಬಹುಲೇಕ ಸಾಹಿತ್ಯ ವೇದಿಕೆಯ ಕಾರ್ಯದರ್ಶಿ ಸಾಹಿತಿ ರಘೋತ್ತಮ ಹೊ.ಬ ರವರು ನಡೆಸಿಕೊಟ್ಟರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X