Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹಸಿವು ಮುಕ್ತ ಭಾರತ ಎಂದು?

ಹಸಿವು ಮುಕ್ತ ಭಾರತ ಎಂದು?

-ಸಂತೋಷ ಜಾಬೀನ್, ಸುಲೇಪೇಟೆ-ಸಂತೋಷ ಜಾಬೀನ್, ಸುಲೇಪೇಟೆ21 Oct 2019 11:43 PM IST
share

ಮಾನ್ಯರೇ,

ಇತ್ತೀಚೆಗೆ ವರದಿಯಾದ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತ 102ನೇ ಸ್ಥಾನದಲ್ಲಿದೆಯೆಂದು ಕಂಡುಬಂದಿದೆ. ಅಪೌಷ್ಟಿಕತೆ, ಮಕ್ಕಳ ಕುಂಠಿತ ಬೆಳವಣಿಗೆ, ಕಡಿಮೆ ತೂಕದ ಮಕ್ಕಳು ಹಾಗೂ ಶಿಶುಮರಣದ ಪ್ರಮಾಣವನ್ನು ಆಧರಿಸಿ ಈ ಸೂಚ್ಯಂಕವನ್ನು ರೂಪಿಸಲಾಗಿದೆ. ವಿಶ್ವ ಹಸಿವು ಸೂಚ್ಯಂಕದ ಪಟ್ಟಿಯಲ್ಲಿ ಭಾರತವು 2000ನೇ ಇಸವಿಯಲ್ಲಿ 83ನೇ ಸ್ಥಾನದಲ್ಲಿತ್ತು ಎನ್ನುವುದನ್ನು ಪರಿಗಣಿಸಿದರೆ, ಎರಡು ದಶಕಗಳಲ್ಲಿ ನಾವು ಸಾಧಿಸಿರುವ ಅಭಿವೃದ್ಧಿಯ ಅಸಲಿಯತ್ತಿನ ಬಗ್ಗೆಯೇ ಗಂಭೀರ ವಿಮರ್ಶೆ ನಡೆಯಬೇಕಿದೆ. ಸ್ವಾತಂತ್ರ್ಯ ಪಡೆದಂದಿನಿಂದ ಈವರೆಗೆ ಬಡತನ-ಹಸಿವು ನಿರ್ಮೂಲನಕ್ಕೆೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ‘ಗರೀಬಿ ಹಠಾವೊ’ದಿಂದ ಕರ್ನಾಟಕದ ‘ಅನ್ನಭಾಗ್ಯ’ದವರೆಗಿನ ಹಲವು ಯೋಜನೆಗಳು ಹಸಿವಿನ ನಿರ್ಮೂಲನೆಯ ಉದ್ದೇಶದಿಂದಲೇ ರೂಪುಗೊಂಡಂತಹವು. ಉಚಿತವಾಗಿ ಇಲ್ಲವೆ ರಿಯಾಯಿತಿ ದರದಲ್ಲಿ ದವಸ ಧಾನ್ಯ ವಿತರಿಸುವ ಪಡಿತರ ಯೋಜನೆಗಳು ಎಲ್ಲ ರಾಜ್ಯಗಳಲ್ಲಿವೆ. ಇಷ್ಟೆಲ್ಲ ಕಾರ್ಯಕ್ರಮಗಳ ನಂತರವೂ ಹಸಿವಿನ ಸಮಸ್ಯೆಯನ್ನು ಹೋಗಲಾಡಿಸಲು ಸಾಧ್ಯವಾಗಿಲ್ಲ ಎಂದರೆ ಸರಕಾರದ ಯೋಜನೆಗಳು ಅರ್ಹರನ್ನು ತಲುಪುವಲ್ಲಿ ಯಶಸ್ವಿಯಾಗಿಲ್ಲ ಎಂದಾಯಿತು. ಆಹಾರಧಾನ್ಯಗಳ ಸಂಗ್ರಹ ಹಾಗೂ ವಿತರಣೆ ಕೂಡ ಸಮರ್ಪಕವಾಗಿಲ್ಲ. ಒಂದೆಡೆ ಹೊಟ್ಟೆ ಹಸಿದ ಮಂದಿಯಿದ್ದರೆ, ಇನ್ನೊಂದು ತುದಿಯಲ್ಲಿ ಗೋದಾಮುಗಳಲ್ಲಿನ ಆಹಾರ ಕೊಳೆಯುತ್ತಿದೆ, ಇಲಿ- ಹೆಗ್ಗಣಗಳ ಪಾಲಾಗುತ್ತಿದೆ. ಶ್ರೀಮಂತವರ್ಗ ಪ್ರತಿನಿತ್ಯ ಸೇವಿಸುವ ಆಹಾರದಲ್ಲಿ ಐದನೇ ಒಂದು ಪಾಲು ಪೋಲಾಗುತ್ತಿದೆ ಎನ್ನುವ ವರದಿಯೂ ಇದೆ. ಅನ್ನದ ಈ ಅಪಬಳಕೆಯು ಅಮಾನವೀಯ, ಅನೈತಿಕ. ಆಹಾರವು ಮನುಷ್ಯನ ಕನಿಷ್ಠ ಹಾಗೂ ಮೂಲಭೂತ ಅಗತ್ಯ. ಹಸಿವುಮುಕ್ತ ಭಾರತವನ್ನಾಗಿಸುವ ಪ್ರಯತ್ನವನ್ನು ಒಂದು ಬೃಹತ್ ಹಾಗೂ ಪ್ರಾಮಾಣಿಕ ಆಂದೋಲನವಾಗಿ ಬೆಳೆಸಬೇಕಾದ ಸವಾಲು ಸರಕಾರದ ಮುಂದಿದೆ. ಸರಕಾರವು ಈ ಬಗ್ಗೆ ನಿರ್ಲಕ್ಷ ತೋರದೆ ದೇಶವನ್ನು ಹಸಿವುಮುಕ್ತ ಭಾರತವನ್ನಾಗಿ ಮಾಡುವಲ್ಲಿ ಶ್ರಮವಹಿಸಬೇಕಿದೆ

share
-ಸಂತೋಷ ಜಾಬೀನ್, ಸುಲೇಪೇಟೆ
-ಸಂತೋಷ ಜಾಬೀನ್, ಸುಲೇಪೇಟೆ
Next Story
X