Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ಲೀನ್ ಸ್ವೀಪ್ ಸಾಧನೆಯ ಹೊಸ್ತಿಲಲ್ಲಿ...

ಕ್ಲೀನ್ ಸ್ವೀಪ್ ಸಾಧನೆಯ ಹೊಸ್ತಿಲಲ್ಲಿ ಕೊಹ್ಲಿ ಪಡೆ

►ದ. ಆಫ್ರಿಕಾ ಮೊದಲ ಇನಿಂಗ್ಸ್ ನಲ್ಲಿ 162 ರನ್ ಗೆ ಆಲೌಟ್ ►ಸತತ 2ನೇ ಬಾರಿ ಫಾಲೋ-ಆನ್

ವಾರ್ತಾಭಾರತಿವಾರ್ತಾಭಾರತಿ21 Oct 2019 11:54 PM IST
share
ಕ್ಲೀನ್ ಸ್ವೀಪ್ ಸಾಧನೆಯ ಹೊಸ್ತಿಲಲ್ಲಿ ಕೊಹ್ಲಿ ಪಡೆ

3ನೇ ಟೆಸ್ಟ್

ರಾಂಚಿ,ಅ.21: ಮುಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ನೇತೃತ್ವದ ಭಾರತದ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್‌ಗಳು ಮೂರನೇ ಟೆಸ್ಟ್ ಪಂದ್ಯದಲ್ಲಿ ಮತ್ತೊಮ್ಮೆ ದಯನೀಯ ವೈಫಲ್ಯ ಅನುಭವಿಸಿದ್ದಾರೆ. ಹರಿಣ ಪಡೆ ವಿರುದ್ಧ ತನ್ನ ಪ್ರಾಬಲ್ಯ ಮುಂದುವರಿಸಿದ ಕೊಹ್ಲಿ ಬಳಗಕ್ಕೆ 3 ಪಂದ್ಯಗಳ ಟೆಸ್ಟ್ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡು ಕ್ಲೀನ್‌ಸ್ವೀಪ್ ಸಾಧಿಸಲು ಇನ್ನು ಕೇವಲ 2 ವಿಕೆಟ್‌ಗಳ ಅಗತ್ಯವಿದೆ.

ಪಂದ್ಯದ ಮೂರನೇ ದಿನವಾದ ಸೋಮವಾರ ದಕ್ಷಿಣ ಆಫ್ರಿಕಾದ 16 ವಿಕೆಟ್‌ಗಳು ಪತನಗೊಂಡವು.ಶಮಿ ಹಾಗೂ ಯಾದವ್ ಹರಿಣ ಪಡೆಗೆ ಭಾರೀ ಆಘಾತ ನೀಡಿದರು. ಉರಿವೇಗದಲ್ಲಿ ಬೌಲಿಂಗ್ ಮಾಡಿದ ಶಮಿ-ಯಾದವ್ ಜೋಡಿ ದ.ಆಫ್ರಿಕಾ ದಾಂಡಿಗರಿಗೆ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲದಂತೆ ನೋಡಿಕೊಂಡಿತು. ಮತ್ತೊಂದು ಹೀನಾಯ ಸೋಲಿನತ್ತ ಮುಖ ಮಾಡಿರುವ ಪ್ಲೆಸಿಸ್ ಪಡೆ ದಿನದಾಟದಂತ್ಯಕ್ಕೆ 2ನೇ ಇನಿಂಗ್ಸ್‌ನಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 132 ರನ್ ಗಳಿಸಿದೆ. ಭಾರತ ನಾಲ್ಕನೇ ದಿನದಾಟದಲ್ಲಿ ಕೊನೆಯ ವಿಕೆಟ್‌ಗಳನ್ನು ಉರುಳಿಸಿ ಗೆಲುವಿನ ಔಪಚಾರಿಕತೆ ಕೊನೆಗೊಳಿಸಲು ಎದುರು ನೋಡುತ್ತಿದೆ.

►ದಕ್ಷಿಣ ಆಫ್ರಿಕಾ 162 ರನ್‌ಗೆ ಆಲೌಟ್, ಭಾರತಕ್ಕೆ ಇನಿಂಗ್ಸ್ ಮುನ್ನಡೆ

 ಭಾರತದ ಮೊದಲ ಇನಿಂಗ್ಸ್ ಮೊತ್ತ 497ಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ಸೋಮವಾರ 2 ವಿಕೆಟ್ ನಷ್ಟಕ್ಕೆ 9 ರನ್‌ನಿಂದ ಮೊದಲ ಇನಿಂಗ್ಸ್ ಆರಂಭಿಸಿತು. ಆದರೆ, 56.2 ಓವರ್‌ಗಳಲ್ಲಿ 162 ರನ್ ಗಳಿಸಿ ಗಂಟುಮೂಟೆ ಕಟ್ಟಿತು.

ಮೊದಲ ಇನಿಂಗ್ಸ್‌ನಲ್ಲಿ 335 ರನ್ ಮುನ್ನಡೆ ಪಡೆದ ಭಾರತದ ನಾಯಕ ವಿರಾಟ್ ಕೊಹ್ಲಿ ಎದುರಾಳಿ ಆಫ್ರಿಕಾ ತಂಡಕ್ಕೆ ಫಾಲೋ-ಆನ್ ವಿಧಿಸಿ ಮತ್ತೊಮ್ಮೆ ಬ್ಯಾಟಿಂಗ್ ಗೆ ಇಳಿಸಿದರು.

3ನೇ ದಿನದಾಟದ ಬೆಳಗ್ಗಿನ ಅವಧಿಯಲ್ಲಿ ದ.ಆಫ್ರಿಕಾದ ನಾಯಕ ಎಫ್‌ಡು ಪ್ಲೆಸಿಸ್(1)ರನ್ನು ಕ್ಲೀನ್‌ಬೌಲ್ಡ್ ಮಾಡಿದ ಉಮೇಶ್ ಯಾದವ್(3-40)ಭಾರತದ ವಿಕೆಟ್ ಬೇಟೆಗೆ ಚಾಲನೆ ನೀಡಿದರು. ತಲಾ 2 ವಿಕೆಟ್ ಪಡೆದ ಮುಹಮ್ಮದ್ ಶಮಿ(2-22), ಎಸ್.ನದೀಂ(2-22) ಹಾಗೂ ರವೀಂದ್ರ ಜಡೇಜ(2-19) ಯಾದವ್‌ಗೆ ಸಮರ್ಥ ಸಾಥ್ ನೀಡಿದರು.

ಚೊಚ್ಚಲ ಪಂದ್ಯದಲ್ಲಿ ಬವುಮಾ ಹಾಗೂ ನೊರ್ಟ್ಜೆ ವಿಕೆಟನ್ನು ಕಬಳಿಸಿದ ಸ್ಥಳೀಯ ಬೌಲರ್ ನದೀಂ ತನಗೆ ಲಭಿಸಿದ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡರು. 11.2 ಓವರ್‌ಗಳಲ್ಲಿ 4 ಮೇಡನ್ ಸಹಿತ 22 ರನ್ ನೀಡಿ 2 ವಿಕೆಟ್ ಪಡೆದರು. ಬವುಮಾ ವಿಕೆಟ್ ಪಡೆಯುವ ಮೂಲಕ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತನ್ನ ವಿಕೆಟ್ ಖಾತೆ ತೆರೆದರು.

ಮೊದಲ ಇನಿಂಗ್ಸ್‌ನಲ್ಲಿ ಆಫ್ರಿಕಾದ ಪರ ಝುಬೆರ್ ಹಂಝಾ (62, 79 ಎಸೆತ, 10 ಬೌಂಡರಿ, 1 ಸಿಕ್ಸರ್)ಅಗ್ರ ಸ್ಕೋರರ್ ಎನಿಸಿಕೊಂಡರು. 24ರ ಹರೆಯದ ಹಂಝಾ ಗಾಯಗೊಂಡಿರುವ ಮರ್ಕರಮ್ ಬದಲಿಗೆ ಆಡಿದ್ದು, ಚೊಚ್ಚಲ ಅರ್ಧಶತಕ ಸಿಡಿಸಿ ಗಮನ ಸೆಳೆದರು. ಲಿಂಡೆ(37) ಹಾಗೂ ಬವುಮಾ(32)ಎರಡಂಕೆಯ ಸ್ಕೋರ್ ಗಳಿಸಿದರು. ಹಂಝಾ ಹಾಗೂ ಬವುಮಾ 3ನೇ ವಿಕೆಟ್‌ಗೆ 91 ರನ್ ಜೊತೆಯಾಟ ನಡೆಸಿದರು.

►ದ್ವಿತೀಯ ಇನಿಂಗ್ಸ್‌ನಲ್ಲೂ ಮುಗ್ಗರಿಸಿದ ಆಫ್ರಿಕಾ: ಮೊದಲ ಇನಿಂಗ್ಸ್‌ನಂತೆಯೇ 2ನೇ ಇನಿಂಗ್ಸ್‌ನಲ್ಲಿ ದ.ಆಫ್ರಿಕಾದ ಆರಂಭಿಕ ಬ್ಯಾಟ್ಸ್ ಮನ್ ಕ್ವಿಂಟನ್‌ಡಿಕಾಕ್(5)ವಿಕೆಟ್ ಉರುಳಿಸಿ ಭಾರತಕ್ಕೆ ಮೇಲುಗೈ ಒದಗಿಸಿದರು. ಆನಂತರ ಮಧ್ಯಮ ಕ್ರಮಾಂಕಕ್ಕೆ ಮಾರಕವಾದ ಶಮಿ ಅವರು ಹಂಝಾ(0), ನಾಯಕ ಎಫ್‌ಡು ಪ್ಲೆಸಿಸ್(4) ಹಾಗೂ ಟೆಂಬಾ ಬವುಮಾ(00)ಸತತ ಓವರ್‌ಗಳಲ್ಲಿ ಪೆವಿಲಿಯನ್‌ಗೆ ಕಳುಹಿಸಿದರು. ಆಗ ದಕ್ಷಿಣ ಆಫ್ರಿಕಾದ ಸ್ಕೋರ್ 4 ವಿಕೆಟ್‌ಗೆ 22 ರನ್.

ಯಾದವ್ ಗಂಟೆಗೆ 145 ಕಿ.ಮೀ.ವೇಗದಲ್ಲಿ ಎಸೆದ ಚೆಂಡು ಆರಂಭಿಕ ಆಟಗಾರ ಡಿಯನ್ ಎಲ್ಗರ್ ಹೆಲ್ಮೆಟ್‌ಗೆ ಅಪ್ಪಳಿಸಿದಾಗ ಉಭಯ ತಂಡಗಳ ಆಟಗಾರರಿಗೆ ಶಾಕ್ ಆಯಿತು. ಟೀ ವಿರಾಮವನ್ನು ಬೇಗನೆ ಪಡೆಯಲಾಯಿತು. ಎಲ್ಗರ್ ಗಾಯಗೊಂಡು ನಿವೃತ್ತಿಯಾದರು.

ಲಿಂಡೆ ಅವರು ನದೀಂಗೆ ರನೌಟಾಗುವ ಮೊದಲು 27 ರನ್ ಗಳಿಸಿದರು. ಪೀಟ್(23)ಒಂದಷ್ಟು ಪ್ರತಿರೋಧ ತೋರಿದರು. ದಿನದಾಟದಂತ್ಯಕ್ಕೆ ಬ್ರೂನ್(ಔಟಾಗದೆ 30)ಹಾಗೂ ನೊರ್ಟ್ಜೆ(5)ಕ್ರೀಸ್ ಕಾಯ್ದುಕೊಂಡಿದ್ದಾರೆ.

ಎರಡನೇ ಇನಿಂಗ್ಸ್‌ನಲ್ಲಿ ಶಮಿ(3-10) ಹಾಗೂ ಯಾದವ್(2-35)ಐದು ವಿಕೆಟ್ ಹಂಚಿಕೊಂಡರು. ಸ್ಪಿನ್ನರ್‌ಗಳಾದ ಜಡೇಜ ಹಾಗೂ ಅಶ್ವಿನ್ ತಲಾ 1 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X