Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಹಿಂಸಾಚಾರ, ಅಪನಂಬಿಕೆ ಹೆಚ್ಚಳ:...

ದೇಶದಲ್ಲಿ ಹಿಂಸಾಚಾರ, ಅಪನಂಬಿಕೆ ಹೆಚ್ಚಳ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ

ವಾರ್ತಾಭಾರತಿವಾರ್ತಾಭಾರತಿ23 Oct 2019 7:49 PM IST
share
ದೇಶದಲ್ಲಿ ಹಿಂಸಾಚಾರ, ಅಪನಂಬಿಕೆ ಹೆಚ್ಚಳ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ

ಹೊಸದಿಲ್ಲಿ, ಅ.23: ದೇಶದಲ್ಲಿ ಮನುಷ್ಯನ ಜೀವದ ಬಗ್ಗೆ ಅನಾದರದ ಭಾವನೆ ಹಾಗೂ ಹಿಂಸಾಚಾರ ಹೆಚ್ಚುತ್ತಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ವೈವಿಧ್ಯತೆ ಭಾರತದ ಅಸ್ಮಿತೆಯಾಗಿದೆ ಎಂದು ಹೇಳಿದ್ದಾರೆ.

‘ನಾರ್ಥ್ ಈಸ್ಟ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್’ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾರತೀಯ ಸಮಾಜದಲ್ಲಿ ಸಹಿಷ್ಣುತೆ ಎಂಬ ವಿಷಯದಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಅವರು ಉಪನ್ಯಾಸ ನೀಡಿದರು. ಭಾರತವು ಒಂದೇ ಭಾಷೆ ಅಥವಾ ಒಂದೇ ಧರ್ಮವನ್ನು ಹೊಂದಿಲ್ಲ. ಇಂದಿನ ದಿನದಲ್ಲಿ ಭಿನ್ನಾಭಿಪ್ರಾಯದಿಂದ ಹಿಂಸಾಚಾರ ಹೆಚ್ಚುತ್ತಿರುವುದನ್ನು ಕಾಣಬಹುದಾಗಿದೆ. ಈ ರೀತಿಯ ಹಿಂಸಾಚಾರ ಕೇವಲ ದೈಹಿಕ ತೊಂದರೆಗೆ ಮಾತ್ರ ಕಾರಣವಾಗದೆ, ಮಾನಸಿಕ, ಬೌದ್ಧಿಕ ತೊಂದರೆಯ ಜೊತೆಗೆ ಸಾಮಾಜಿಕ ಆರ್ಥಿಕ ನಷ್ಟಕ್ಕೂ ಕಾರಣವಾಗುತ್ತದೆ.

ಸಮಾಜದಲ್ಲಿ ಸಹಬಾಳ್ವೆ ನಡೆಸುವ ವ್ಯಕ್ತಿಗಳ ಬದುಕಿನ ಬಗ್ಗೆ ಅನಾದರದ ಭಾವನೆಯಿದೆ. ಅಪನಂಬಿಕೆ, ದ್ವೇಷಭಾವನೆ, ಶಂಕೆ, ಮತ್ಸರ ಹೆಚ್ಚಿದೆ. ಓರ್ವ ವ್ಯಕ್ತಿ, ಮಗು ಅಥವಾ ಮಹಿಳೆಯ ಮೇಲೆ ದೌರ್ಜನ್ಯ ನಡೆದಾಗಲೆಲ್ಲಾ ಭಾರತದ ಅಸ್ಮಿತೆಗೆ ಘಾಸಿಯಾಗುತ್ತದೆ. ಕ್ರೋಧದ ಅಭಿವ್ಯಕ್ತಿ ನಮ್ಮ ಸಾಮಾಜಿಕ ಚೌಕಟ್ಟನ್ನು ಛಿದ್ರಗೊಳಿಸುತ್ತದೆ ಎಂದವರು ಹೇಳಿದ್ದಾರೆ. ಸಾರ್ವಕಾಲಿಕ ಏಕತ್ವತಾವಾದ ಭಾರತದ ಹೆಗ್ಗುರುತಾಗಿದೆ. ಇಲ್ಲಿ 122 ಭಾಷೆ ಹಾಗೂ 1600 ಆಡುಭಾಷೆಯನ್ನು ಬಳಸುವ 1.3 ಬಿಲಿಯನ್ ಜನರಿದ್ದಾರೆ. 7 ಪ್ರಮುಖ ಧರ್ಮದವರು ಮತ್ತು ಮೂರು ಪ್ರಮುಖ ಜನಾಂಗೀಯ ಗುಂಪಿನವರು ಭಾರತೀಯರು ಎಂಬ ಒಂದೇ ವ್ಯವಸ್ಥೆಯಡಿ, ಒಂದೇ ಧ್ವಜದಡಿ ಬದುಕುವುದೇ ವೈವಿಧ್ಯತೆಯಲ್ಲಿ ಏಕತೆಯ ಹೆಗ್ಗಳಿಕೆಯಾಗಿದೆ. ಬಹುತ್ವ ಮತ್ತು ವೈವಿಧ್ಯತೆ ಭಾರತದ ಆತ್ಮವಾಗಿದೆ. ನಮ್ಮ ಸಮಾಜದಲ್ಲಿರುವ ಬಹುತ್ವ ಶತಮಾನಗಳಿಂದ ಅಭಿಮತಗಳ ಸಂಯೋಜನೆಯಿಂದ ರೂಪುಗೊಂಡಿದೆ. ಜಾತ್ಯತೀತತೆ ಮತ್ತು ಅಂತರ್ವೇಶನ (ಒಳಗೂಡಿಸುವಿಕೆ) ನಮ್ಮ ನಂಬಿಕೆಯ ವಿಷಯವಾಗಿದೆ. ಸಂಯೋಜಿತ ಸಂಸ್ಕೃತಿ ನಮ್ಮನ್ನು ಒಂದು ರಾಷ್ಟ್ರವನ್ನಾಗಿಸಿದೆ. ಸಹಿಷ್ಣುತೆ ಎಂಬುದು ಒಂದು ಮನಸ್ಥಿತಿಯಾಗಿದ್ದು ಅಹಿಂಸೆಯ ಬಗ್ಗೆ ಭಾರತೀಯರ ನಂಬಿಕೆಯ ಪ್ರತೀಕವಾಗಿದೆ. ಅಹಿಂಸೆ ಎಂಬುದು ಭಾರತೀಯ ನೀತಿಯ ತಿರುಳಾಗಿದ್ದು ಮಹಾತ್ಮಾ ಗಾಂಧೀಜಿ ಆಧುನಿಕ ಯುಗದಲ್ಲಿ ಇದರ ಸಮರ್ಥ ಪ್ರಚಾರಕರಾಗಿದ್ದರು. ಅಹಿಂಸೆ, ಸಹಿಷ್ಣುತೆ ಹಾಗೂ ಪರಸ್ಪರ ಗೌರವ ನೀಡುವ ವಿಷಯಗಳಲ್ಲಿ ಮಹಾತ್ಮಾ ಗಾಂಧೀಜಿಯವರಿಗಿದ್ದ ನಂಬಿಕೆಯನ್ನು ಉಳಿಸಿಕೊಳ್ಳಬೇಕಿದೆ. ಕ್ರೋಧ, ಹಿಂಸೆ ಮತ್ತು ಸಂಘರ್ಷದ ಮನೋಭಾವ ಬಿಟ್ಟು ಶಾಂತಿ, ಸೌಹಾರ್ದತೆ ಮತ್ತು ಸಂತೋಷದ ಸ್ಥಿತಿಯತ್ತ ಮುನ್ನಡೆಯಬೇಕಾಗಿದೆ ಎಂದು ಮುಖರ್ಜಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X