Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಟ ಎಸ್ಸೈ ಮೇಲೆ ಹಲ್ಲೆಗೆ ಯತ್ನಿಸಿ...

ಕೋಟ ಎಸ್ಸೈ ಮೇಲೆ ಹಲ್ಲೆಗೆ ಯತ್ನಿಸಿ ಕರ್ತವ್ಯಕ್ಕೆ ಅಡ್ಡಿ: ನಾಲ್ವರ ಬಂಧನ

ವಾರ್ತಾಭಾರತಿವಾರ್ತಾಭಾರತಿ23 Oct 2019 8:15 PM IST
share
ಕೋಟ ಎಸ್ಸೈ ಮೇಲೆ ಹಲ್ಲೆಗೆ ಯತ್ನಿಸಿ ಕರ್ತವ್ಯಕ್ಕೆ ಅಡ್ಡಿ: ನಾಲ್ವರ ಬಂಧನ

ಬ್ರಹ್ಮಾವರ, ಅ. 23: ಶಿರೂರು ಮೂರುಕೈ ಜಂಕ್ಷನ್ ಬಳಿ ಅ. 23ರಂದು ನಸುಕಿನ ವೇಳೆ ಗಸ್ತು ತಿರುಗುತ್ತಿದ್ದ ಕೋಟ ಪೊಲೀಸ್ ಠಾಣೆ ಉಪನಿರೀಕ್ಷಕ ನಿತ್ಯಾನಂದ ಗೌಡ ಅವರಿಗೆ ಯುವಕರ ಗುಂಪೊಂದು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆಗೆ ಯತ್ನಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಬಗ್ಗೆ ವರದಿಯಾಗಿದೆ.

ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿ ಮಂದರ್ತಿ ನೀರುಜೆಡ್ಡುವಿನ ಗುರುಪ್ರಸಾದ್ (34), ದಿಲೀಪ್, ಸುನೀಲ್, ಕಿರಣ್ ಎಂಬವರನ್ನು ಬ್ರಹ್ಮಾವರ ಪೊಲೀಸರು ಇಂದು ಬಂಧಿಸಿದ್ದಾರೆ.

ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಕೋಟ ಎಸ್ಸೈ ನಿತ್ಯಾನಂದ ಗೌಡ ಇಲಾಖಾ ವಾಹನದಲ್ಲಿ ಗಸ್ತು ತಿರುಗುವಾಗ ಶಿರೂರು ಮೂರುಕೈ ಜಂಕ್ಷನ್ ಬಳಿಯ ಅಂಗಡಿ ಎದುರು ಕತ್ತಲೆಯಲ್ಲಿ ಮೂವರು ಯುವಕರು ಅನುಮಾನಸ್ಪದವಾಗಿ ನಿಂತಿರುವುದು ಕಂಡು ಬಂದಿದ್ದು, ಅಲ್ಲದೆ ಅಲ್ಲೇ ಸಮೀಪ ಎರಡು ಬೈಕ್ ಹಾಗೂ ಒಂದು ಕಾರು ನಿಂತಿತ್ತು. ಈ ಬಗ್ಗೆ ಎಸ್ಸೈ ಮೂವರನ್ನು ವಿಚಾರಿಸಿದಾಗ ಸರಿಯಾದ ಉತ್ತರ ನೀಡಲಿಲ್ಲ ಎನ್ನಲಾಗಿದೆ. ನಂತರ ನಿತ್ಯಾನಂದ ಗೌಡ ಈ ಮೂವರು ಯುವಕರ ಬಗ್ಗೆ ತಿಳಿದುಕೊಳ್ಳುವ ಉದ್ದೇಶದಿಂದ ಒಟ್ಟಿಗೆ ನಿಲ್ಲಿಸಿ ಫೋಟೊ ತೆಗೆದುಕೊಂಡು ಅವರ ಬಳಿ ಇದ್ದ ಮೊಬೈಲ್ ವಶಕ್ಕೆ ಪಡೆದು ಬೆಳಗ್ಗೆ ಕೋಟ ಠಾಣೆಗೆ ವಿಚಾರಣೆಗೆ ಬರುವಂತೆ ತಿಳಿಸಿದರು. ನಂತರ ಪರಿಶೀಲಿಸಿದಾಗ ಅಲ್ಲಿಯೇ ಪಕ್ಕದಲ್ಲಿದ್ದ ಶುಭಲಕ್ಷ್ಮೀ ಬಾರ್ ಅಂಡ್ ರೆಸ್ಟೋ ರೆಂಟ್‌ನ ಎದುರು ಬಾಗಿಲು ಮುಚ್ಚಿದ್ದು ಹಿಂಬದಿಯಲ್ಲಿ 10ರಿಂದ 12 ಯುವಕರು ಮದ್ಯಪಾನ ಮಾಡುತ್ತಿರುವುದು ಕಂಡುಬಂತು. ಯುವಕರು ಎಸ್ಸೈಯನ್ನು ನೋಡಿ ಲೈಟ್ ಆಫ್ ಮಾಡಿದರು. ಈ ವೇಳೆ ಎಸ್ಸೈ ನಿತ್ಯಾನಂದ ಗೌಡ ಮೂರು ಮೊಬೈಲ್‌ಗಳೊಂದಿಗೆ ಜೀಪಿನಲ್ಲಿ ಬರುತ್ತಿವಾಗ ಗುರುಪ್ರಸಾದ್ ಏರು ದನಿಯಲ್ಲಿ ‘ಯಾವನೋ ನೀನು, ನಿಲ್ಲು ಅಲ್ಲಿ ನಿಂದು ಯಾವ ಕಾನ್‌ಸ್ಟೆನ್ಸಿ, ನೀನು ಇಲ್ಲಿ ಬಂದು ನನ್ನ ಯುವಕರನ್ನು ಕೇಳಿ ವಿಚಾರಿಸಲು ತಿಳಿಸಿದ್ದು ಯಾರು ? ಮರ್ಯಾದೆಯಿಂದ ಮೊಬೈಲ್ ಕೊಡು. ನಿನಗೆ ಸಿಎಂನಿಂದ ಕರೆ ಮಾಡಿಸಬೇಕಾ? ಎಂದು ಅವಾಚ್ಯ ಶಬ್ದದಿಂದ ನಿತ್ಯಾನಂದ ಗೌಡ ಹಾಗೂ ಅವರ ತಾಯಿಯ ಗೌರವಕ್ಕೆ ಚ್ಯುತಿ ಬರುವಂತೆ ಬೈದು ಬೆದರಿಕೆ ಹಾಕಿದರೆನ್ನಲಾಗಿದೆ.

ಅಲ್ಲದೇ ಆತನೊಂದಿಗೆ ಬಂದ ಇತರ 8 ರಿಂದ 10 ಮಂದಿ ಯುವಕರು ಗುಂಪು ಕಟ್ಟಿಕೊಂಡು ಜೀಪು ಮುಂದೆ ಹೋಗದಂತೆ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ಮಾಡಲು ಪ್ರಯತ್ನಿಸಿದರು. ಈ ಎಲ್ಲ ಯುವಕರು ಮದ್ಯಪಾನ ಮಾಡಿ ಮದ್ಯರಾತ್ರಿಯಲ್ಲಿ ಕರ್ತವ್ಯಕ್ಕೆ ಅಡ್ಡ ಪಡಿಸಿದ್ದು ನಂತರ ಅಲ್ಲಿಂದ ಕಾರಿನಲ್ಲಿ ಹಾಗೂ ಬೈಕ್‌ಗಳಲ್ಲಿ ಹೋಗಿದ್ದಾರೆ ಎಂದು ಎಸ್ಸೈ ನಿತ್ಯಾನಂದ ಗೌಡ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X