Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಂಧನ ಕೇಂದ್ರದಲ್ಲಿ ಮೃತಪಟ್ಟ ಪಾಲ್...

ಬಂಧನ ಕೇಂದ್ರದಲ್ಲಿ ಮೃತಪಟ್ಟ ಪಾಲ್ ಮೃತದೇಹವನ್ನು ಸಿಎಂ ಹಸ್ತಕ್ಷೇಪದ ಬಳಿಕ ಸ್ವೀಕರಿಸಿದ ಕುಟುಂಬ

ಅಸ್ಸಾಂ ಎನ್‌ಆರ್‌ಸಿ

ವಾರ್ತಾಭಾರತಿವಾರ್ತಾಭಾರತಿ23 Oct 2019 9:45 PM IST
share
ಬಂಧನ ಕೇಂದ್ರದಲ್ಲಿ ಮೃತಪಟ್ಟ ಪಾಲ್ ಮೃತದೇಹವನ್ನು ಸಿಎಂ ಹಸ್ತಕ್ಷೇಪದ ಬಳಿಕ ಸ್ವೀಕರಿಸಿದ ಕುಟುಂಬ

ಗುವಾಹಟಿ,ಅ.23: ಅಕ್ರಮ ವಲಸಿಗನೆಂಬ ಹಣೆಪಟ್ಟಿಯೊಂದಿಗೆ ಸುಮಾರು ಎರಡು ವರ್ಷಗಳ ಕಾಲ ಬಂಧನ ಕೇಂದ್ರದಲ್ಲಿದ್ದು,ಅ.13ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ದುಲಾಲ್ ಚಂದ್ರ ಪಾಲ್ (65) ಅವರ ಶವವನ್ನು ಸ್ವೀಕರಿಸಲು ನಿರಾಕರಿಸಿದ್ದ ಅವರ ಕುಟುಂಬವು ಕೊನೆಗೂ ಅಸ್ಸಾಂ ಮುಖ್ಯಮಂತ್ರಿ ಸರಬಾನಂದ ಸೋನೊವಾಲ್ ಅವರ ಹಸ್ತಕ್ಷೇಪದ ಬಳಿಕ ತನ್ನ ಪಟ್ಟನ್ನು ಸಡಿಲಿಸಿದೆ. ಪಾಲ್ ಭಾರತೀಯ ಪ್ರಜೆಯೆಂದು ಘೋಷಿಸುವಂತೆ ಕಳೆದ ವಾರ ಅಧಿಕಾರಿಗಳನ್ನು ಆಗ್ರಹಿಸಿದ್ದ ಅವರ ಕುಟುಂಬವು,ಇಲ್ಲದಿದ್ದರೆ ಅವರ ಶವವನ್ನು ಬಾಂಗ್ಲಾದೇಶಕ್ಕೆ ಮರಳಿಸುವಂತೆ ತಿಳಿಸಿತ್ತು.

  ಪಾಲ್ ತನ್ನ 1965ರ ಭೂದಾಖಲೆಗಳನ್ನು ಸಲ್ಲಿಸಿದ್ದರೂ ಅದನ್ನು ತಿರಸ್ಕರಿಸಿದ್ದ ವಿದೇಶಿಯರ ನ್ಯಾಯಾಧಿಕರಣವು 2017,ಅಕ್ಟೋಬರ್‌ನಲ್ಲಿ ಅವರನ್ನು ಬಾಂಗ್ಲಾದೇಶಿ ಎಂದು ಘೋಷಿಸಿ ಸೋನಿತಪುರ ಜಿಲ್ಲೆಯ ಬಂಧನ ಕೇಂದ್ರಕ್ಕೆ ಕಳುಹಿಸಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಳೆದ ಸೆ.28ರಂದು ಗುವಾಹಟಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅ.13ರಂದು ಅವರು ಕೊನೆಯುಸಿರೆಳೆದಿದ್ದರು. ಪಾಲ್ ಮಾನಸಿಕ ಅಸ್ವಸ್ಥತೆಯನ್ನು ಹೊಂದಿದ್ದರು ಎಂದು ಅವರ ಕುಟುಂಬವು ಹೇಳಿತ್ತು.

ಶನಿವಾರ ಅಖಿಲ ಅಸ್ಸಾಂ ಬಂಗಾಳಿ ಯುವ ವಿದ್ಯಾರ್ಥಿಗಳ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಪಾಲ್ ಕುಟುಂಬವನ್ನು ಭೇಟಿಯಾಗಿದ್ದ ಸೋನೊವಾಲ್ ಶವವನ್ನು ಸ್ವೀಕರಿಸುವಂತೆ ಆಗ್ರಹಿಸಿದ್ದರು.

 ‘ ನಮ್ಮ ತಂದೆಯ ಶವವನ್ನು ಮನೆಗೆ ಒಯ್ಯುವಂತೆ ಸೋನೊವಾಲ್ ಕೋರಿಕೊಂಡಿದ್ದರು. ಅಂತ್ಯಕ್ರಿಯೆಗೆ ನೆರವಾಗುವುದಾಗಿ ಮತ್ತು ಕಾನೂನು ನೆರವು ಒದಗಿಸುವುದಾಗಿ ಅವರು ತಿಳಿಸಿದ್ದರು. ಶ್ರಾದ್ಧದಲ್ಲಿ ಉಪಸ್ಥಿತರಿರುವುದಾಗಿ ಲಿಖಿತ ಒಪ್ಪಿಗೆಯನ್ನೂ ನೀಡಿದ್ದಾರೆ ಎಂದು ಪಾಲ್ ಪುತ್ರ ಅಶೋಕ ಪಾಲ್ ತಿಳಿಸಿದರು.

ತಮ್ಮ ಕುಟುಂಬವು ಅನುಭವಿಸಿದ ಸಂಕಷ್ಟ ಯಾವುದೇ ಕುಟುಂಬಕ್ಕೂ ಬರಬಾರದು ಮತ್ತು ಬಂಧನ ಕೇಂದ್ರದಲ್ಲಿ ಸಾವುಗಳು ತನ್ನ ತಂದೆಯೊಂದಿಗೇ ಕೊನೆಯಾಗಬೇಕು ಎಂದೂ ಅವರು ಹೇಳಿದರು.

ಬಂಧನ ಕೇಂದ್ರಗಳಲ್ಲಿರುವವರಿಗೆ ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಮೂರು ವರ್ಷಗಳಿಂದ ಬಂಧನದಲ್ಲಿರುವವರನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸುವ ಪ್ರಕ್ರಿಯೆಯನ್ನು ರಾಜ್ಯ ಸರಕಾರವು ತ್ವರಿತಗೊಳಿಸಲಿದೆ ಎಂದು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ದೀಪಕ ಡೇ ತಿಳಿಸಿದರು.

ಮಂಗಳವಾರ ಮಧ್ಯಾಹ್ನ ಗುವಾಹಟಿ ಆಸ್ಪತ್ರೆಯಿಂದ ಪಾಲ್ ಶವವನ್ನು ಸ್ವಗ್ರಾಮ ಸೋನಿತಪುರ ಜಿಲ್ಲೆಯ ಅಲಿಸಿಂಗಾ ಗ್ರಾಮಕ್ಕೆ ಒಯ್ದ ಕುಟುಂಬವು ಸಂಜೆ ಅಂತ್ಯಕ್ರಿಯೆಯನ್ನು ನೆರವೇರಿಸಿದೆ.

ಆ.31ರಂದು ಪ್ರಕಟಗೊಂಡಿದ್ದ ಅಂತಿಮ ಎನ್‌ಆರ್‌ಸಿ ಪಟ್ಟಿಯಲ್ಲಿ ಪಾಲ್ ಕುಟುಂಬದ ಐವರು ಸದ್ಯರ ಹೆಸರುಗಳಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X