Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನದಿಪಾತ್ರ ಬದಲಾವಣೆಗೆ ಬ್ರೇಕ್ ಹಾಕಲು...

ನದಿಪಾತ್ರ ಬದಲಾವಣೆಗೆ ಬ್ರೇಕ್ ಹಾಕಲು ತಡೆಗೋಡೆ: ಸಚಿವ ಬಸವರಾಜ್ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ24 Oct 2019 7:38 PM IST
share
ನದಿಪಾತ್ರ ಬದಲಾವಣೆಗೆ ಬ್ರೇಕ್ ಹಾಕಲು ತಡೆಗೋಡೆ: ಸಚಿವ ಬಸವರಾಜ್ ಬೊಮ್ಮಾಯಿ

ಮಂಗಳೂರು, ಅ.24: ಬೆಳ್ತಂಗಡಿಯ ಚಾರ್ಮಾಡಿ ತಪ್ಪಲಿನ ಗ್ರಾಮದಲ್ಲಿ ಪ್ರಾಕೃತಿಕ ವಿಕೋಪದಿಂದ ಭಾರೀ ನಷ್ಟವುಂಟಾಗಿದ್ದು, ಪ್ರಾಕೃತಿಕ ವಿಕೋಪವು ನದಿ ಪಾತ್ರದ ಬದಲಾವಣೆ ಮೂಲಕ ಆಘಾತ ನೀಡಿದೆ. ಇದನ್ನು ನಿಯಂತ್ರಿಸಲು ಮೃತ್ಯುಂಜಯ ಹೊಳೆಗೆ ಸುಮಾರು ಎರಡೂವರೆ ಕಿಲೋ ಮೀಟರ್ ಉದ್ದದ ಡೆಗೋಡೆ ನಿರ್ಮಿಸಲು ತಕ್ಷಣ ಮಂಜೂರಾತಿ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಇಂದು ಚಾರ್ಮಾಡಿಯ ಅರಣೆಪಾದೆ ಹಾಗೂ ಅಂತರ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರ ಜತೆ ಮಾತನಾಡಿದ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಇಲ್ಲಿನ ಸ್ಥಳೀಯರ ಜತೆ ಮಾತನಾಡಿದಾಗ ಶಾಶ್ವತ ಪರಿಹಾರದ ಬೇಡಿಕೆಯನ್ನು ನೀಡಿದ್ದಾರೆ. ಅದರಂತೆ ತಡೆಗೋಡೆ ಶಾಶ್ವತ ಪರಿಹಾರ ಒದಗಿಸಲಿದೆ ಎಂದರು. ಈ ಬಾರಿಯ ಮಳೆ ಪ್ರವಾಹದಿಂದಾಗಿ ಕೃಷಿ ಭೂಮಿಯಲ್ಲಿ ಹೂಳು ತುಂಬಿದೆ. ಹೆಚ್ಚಿನ ಕಡೆ ವಾಸ್ತವ್ಯ, ಕೃಷಿಯೇ ಕುರುಹು ಇಲ್ಲದಂತಾಗಿದೆ. ನದಿಯ ಎರಡು ಭಾಗದ 500ಮೀಟರ್ ವ್ಯಾಪ್ತಿಯುದ್ದಕ್ಕೂ ಹಾನಿಯಾಗಿದೆ. ದೊಡ್ಡ ಬಂಡೆ, ಮರಗಳು ಬಂದು ಸೇತುವೆಯಲ್ಲಿ ಅಡ್ಡಲಾಗಿ ನಿಲ್ಲುತ್ತಿವೆ. ಸರಕಾರ ಸಾಕಷ್ಟು ಪರಿಹಾರ ಒದಗಿಸಿದೆ ಎಂದು ಅವರು ಹೇಳಿದರು.

ಇಂದು ಗೃಹ ಇಲಾಖೆಗೆ ಸಂಬಂಧಿಸಿ ಐಜಿಪಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಜತೆ ಸಭೆ ನಡೆಸಿ, ಜಿಲ್ಲೆಯ ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಲಾಗಿದೆ. 3 ವರ್ಷಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪರಿಣಾಮಕಾರಿಯಾಗಿ ಅಧಿಕಾರಿಗಳು ಕೆಲಸ ಮಾಡಿದ್ದಾರೆ ಎಂದು ಸಚಿವ ಬೊಮ್ಮಾಯಿ ಹೇಳಿದರು.

ಕರಾವಳಿ ತೀರದಲ್ಲಿ ಭದ್ರತೆಗೆ ಸಂಬಂಧಿಸಿ ಸಾಕಷ್ಟು ಸವಾಲುಗಳಿವೆ. ಈ ಪ್ರದೇಶ ಬಲಪಡಿಸಲು ಕರಾವಳಿ ಕಾವಲು ಪಡೆಗೆ ಬಲಪಡಿಸಲು ಹೆಚ್ಚುವರಿ ಸಿಬ್ಬಂದಿ ಸಹಿತ ಶಸ್ತ್ರಾಸ್ತ್ರ, ಬೋಟು ಸೇರಿದಂತೆ ಅಗತ್ಯತೆ ಕುರಿತು ಪತಿಸಾತಿವನೆ ಕಳುಹಿಸಲು ತಿಳಿಸಿದ್ದೇನೆ. ಆದಷ್ಟು ಬೇಗ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಇದರ ಜತೆಗೆ ಹೊರರಾಜ್ಯಗಳಿಂದ ಬರುವ ಮಾದಕ ದ್ರವ್ಯಗಳ ನಿಯಂತ್ರಣದ ಹಿನ್ನೆಲೆಯಲ್ಲಿ ಉಡುಪಿ ಮತ್ತು ಮಂಗಳೂರಿನಲ್ಲಿ ಸೈಬರ್ ಎಕನಾಮಿಕ್ ಅ್ಯಂಡ್ ಕ್ರೈಮ್ (ಸೆನ್)ಪೊಲೀಸ್ ಠಾಣೆಗಳಿವೆ. ಇದೀಗ ಮತ್ತೆ ಮಂಗಳೂರು ಮತ್ತು ಉಡುಪಿ ಮಣಿಪಾಲವನ್ನು ಕೇಂದ್ರೀಕರಿಸಿಕೊಂಡು ಹೆಚ್ಚುವರಿ ಸೆನ್ ಪೊಲೀಸ್ ಠಾಣೆ ಗಳನ್ನು ಒದಗಿಸಲಾಗುವುದು. ಅದರ ಜತೆ ಜನ ಸ್ನೇಹಿ ನೈಟ್ ಬೀಟ್ ಮಾಡಲು ಚರ್ಚಿಸಲಾಗಿದೆ. ಅದಕ್ಕೆ ಐಜಿಪಿ ನೀಲನಕ್ಷೆ ತಯಾರು ಮಾಡಲಿದ್ದಾರೆ. ಗಡಿ ಭಾಗಗಳಲ್ಲಿ ನಿಗಾ ವಹಿಸಲು ಚರ್ಚಿಲಾಗಿದೆ ಎಂದು ಅವರು ವಿವರಿಸಿದರು.

ಸ್ಥಳೀಯ ಶಾಸಕ ಹರೀಶ್ ಪೂಂಜ, ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು

ಅಕ್ರಮ ನಿವಾಸಿಗಳ ಕುರಿತು ಡಾಟಾ ಸಂಗ್ರಹ

ಎನ್‌ಆರ್‌ಸಿ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರಸ್ತುತ ಅಂಕಿಅಂಶಗಳನ್ನು ಸಂಗ್ರಹಿಸಬೇಕಿದೆ. ಇದರಿಂದ ಇಲ್ಲಿರುವ ಯಾವುದೇ ಸಮುದಾಯಕ್ಕೆ ತೊಂದರೆ ಮಾಡುವುದಿಲ್ಲ. ಇದು ಸ್ಪಷ್ಟ. ನಮ್ಮ ದೇಶದ ಯಾವುದೇ ರಾಜ್ಯದಿಂದ ಬಂದವರಿಗೂ ತೊಂದರೆ ಆಗದು. ಅನುಮತಿ ಇಲ್ಲದೆ, ದಾಖಲೆಗಳಿಲ್ಲದೆ, ಅವಧಿ ಮೀರಿ ವಾಸಿಸುವವರ ಬಗ್ಗೆ ಮಾಹಿತಿ ಅಗತ್ಯ. ಅವರೇನಾದರೂ ಅಪರಾಧ ಕೃತ್ಯವ ನಡೆಸಿ ಹೋದರೆ ಕಷ್ಟ. ಅಷ್ಟು ಸೂಚನೆ ಮಾತ್ರ ನೀಡಲಾಗಿದೆ. ಎನ್‌ಆರ್‌ಸಿ ಮಾಡುವುದು ರಾಷ್ಟ್ರೀಯ ನೀತಿ. ಅದನ್ನು ಕೇಂದ್ರ ಗೃ ಸಚಿವಾಲಯ ನಿರ್ಧರಿಸಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X