ಭಾರೀ ಮಳೆ: ಚೆಲ್ಯಡ್ಕ ಸೇತುವೆ ಮುಳುಗಡೆ
![ಭಾರೀ ಮಳೆ: ಚೆಲ್ಯಡ್ಕ ಸೇತುವೆ ಮುಳುಗಡೆ ಭಾರೀ ಮಳೆ: ಚೆಲ್ಯಡ್ಕ ಸೇತುವೆ ಮುಳುಗಡೆ](https://www.varthabharati.in/sites/default/files/images/articles/2019/10/24/216255-1571927945.jpg)
ಪುತ್ತೂರು : ಪುತ್ತೂರು ತಾಲೂಕಿನಾದ್ಯಂತ ಬುಧವಾರ ರಾತ್ರಿಯಿಂದ ಸುರಿದ ಮಳೆಯಿಂದಾಗಿ ಪುತ್ತೂರು-ಪಾಣಾಜೆ ಸಂಪರ್ಕ ರಸ್ತೆಯಲ್ಲಿನ ಚೆಲ್ಯಡ್ಕ ಮುಳುಗು ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ.
ಪುತ್ತೂರು ತಾಲ್ಲೂಕಿನಾದ್ಯಂತ ಬುಧವಾರ ರಾತ್ರಿ ಭಾರೀ ಮಳೆಯಾಗಿತ್ತು. ಇದರಿಂದಾಗಿ ಚೆಲ್ಯಡ್ಕ ಮುಳುಗು ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ರಸ್ತೆಯಲ್ಲಿ ನಿತ್ಯ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳು ಸೇರಿದಂತೆ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಖಾಸಗಿ ಬಸ್ಸುಗಳು ಮಾಣಿ-ಮೈಸೂರು ಹೆದ್ದಾರಿಯಾಗಿ ಸಂಟ್ಯಾರು-ಕೈಕಾರ ಮೂಲಕವಾಗಿ ಓಡಾಟ ನಡೆಸುತ್ತಿವೆ.
ಚೆಲ್ಯಡ್ಕ, ಗುಮ್ಮಟೆಗದ್ದೆ, ಅಜ್ಜಿಕಲ್ಲು, ಒಳತ್ತಡ್ಕ ಭಾಗದ ಮಂದಿ ಖಾಸಗಿ ಬಸ್ಸುಗಳನ್ನೇ ಅವಲಂಬಿಸಿಕೊಂಡಿದ್ದು, ಬಸ್ಸುಗಳ ಓಡಾಟ ಸ್ಥಗಿತಗೊಂಡ ಹಿನ್ನಲೆಯಲ್ಲಿ ಈ ಭಾಗದ ಮಂದಿ ಸಮಸ್ಯೆಗೊಳಗಾಗಿದ್ದಾರೆ.
Next Story