Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉದ್ಯಮಸ್ನೇಹಿ ರಾಷ್ಟ್ರಗಳ ಶ್ರೇಯಾಂಕ: 14...

ಉದ್ಯಮಸ್ನೇಹಿ ರಾಷ್ಟ್ರಗಳ ಶ್ರೇಯಾಂಕ: 14 ಸ್ಥಾನ ಮೇಲೇರಿದ ಭಾರತ

ವಾರ್ತಾಭಾರತಿವಾರ್ತಾಭಾರತಿ24 Oct 2019 8:23 PM IST
share
ಉದ್ಯಮಸ್ನೇಹಿ ರಾಷ್ಟ್ರಗಳ ಶ್ರೇಯಾಂಕ: 14 ಸ್ಥಾನ ಮೇಲೇರಿದ ಭಾರತ

ವಾಷಿಂಗ್ಟನ್, ಅ.24: ವಿಶ್ವಬ್ಯಾಂಕ್ ಗುರುವಾರ ಬಿಡುಗಡೆಗೊಳಿಸಿರುವ ಉದ್ಯಮಸ್ನೇಹಿ ವಾತಾವರಣ ಇರುವ ವಿಶ್ವದ 190 ರಾಷ್ಟ್ರಗಳ ಶ್ರೇಯಾಂಕ ಪಟ್ಟಿಯಲ್ಲಿ ಭಾರತ 14 ಸ್ಥಾನ ಮೇಲೇರಿ 63ನೇ ಸ್ಥಾನದಲ್ಲಿದೆ. ಅಲ್ಲದೆ ಅತ್ಯುತ್ತಮ ಸಾಧನೆ ತೋರಿದ 10 ರಾಷ್ಟ್ರಗಳ ಪಟ್ಟಿಯಲ್ಲಿ ಸತತ ಮೂರನೇ ವರ್ಷ ಸ್ಥಾನ ಪಡೆದಿದೆ.

 ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಯೋಜನೆ ಹಾಗೂ ವಿದೇಶಿ ಹೂಡಿಕೆ ಆಕರ್ಷಿಸಲು ಜಾರಿಗೊಳಿಸಿರುವ ಇತರ ಯೋಜನೆಗಳಿಂದ ಭಾರತದಲ್ಲಿ ಉತ್ತಮ ಉದ್ಯಮಸ್ನೇಹಿ ವಾತಾವರಣವಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಲ್ಲದೆ ಭಾರತ ಉದ್ಯಮಸ್ನೇಹಿ ವಾತಾವರಣ ರೂಪಿಸಲು ಭಾರತ ಶ್ಲಾಘನಾರ್ಹ ಕ್ರಮಗಳನ್ನು ಮುಂದುವರಿಸಿದೆ ಎಂದು 2020ಕ್ಕೆ ಸಂಬಂಧಿಸಿದ ಉದ್ಯಮಸ್ನೇಹಿ ವಾತಾವರಣದ ವರದಿಯಲ್ಲಿ ವಿಶ್ವಬ್ಯಾಂಕ್ ತಿಳಿಸಿದೆ.

2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಸಂದರ್ಭ 190 ರಾಷ್ಟ್ರಗಳಲ್ಲಿ ಭಾರತ 142ನೇ ಸ್ಥಾನದಲ್ಲಿತ್ತು. ಮುಂದಿನ ನಾಲ್ಕು ವರ್ಷ ಸರಕಾರ ಕೈಗೊಂಡ ಹಲವು ಸುಧಾರಣಾ ಕ್ರಮಗಳಿಂದ 2018ರಲ್ಲಿ ವಿಶ್ವಬ್ಯಾಂಕ್ ಬಿಡುಗಡೆಗೊಳಿಸಿದ ಉದ್ಯಮಸ್ನೇಹಿ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 100ನೇ ಸ್ಥಾನಕ್ಕೆ ತಲುಪಿತ್ತು.

(2017ರಲ್ಲಿ 130ನೇ ಸ್ಥಾನದಲ್ಲಿತ್ತು). 2018ರಲ್ಲಿ ದಿವಾಳಿತನ ಕಾನೂನು, ತೆರಿಗೆ ನಿಯಮಕ್ಕೆ ಸಂಬಂಧಿಸಿದ ಸುಧಾರಣೆಗಳಿಂದ 77ನೇ ಸ್ಥಾನಕ್ಕೆ ಜಿಗಿದಿತ್ತು. ಈ ವರ್ಷ ಅತ್ಯುತ್ತಮ ಸಾಧನೆ ತೋರಿದ ಅಗ್ರ 10 ರಾಷ್ಟ್ರಗಳೆಂದರೆ- ಭಾರತ(63ನೇ ಸ್ಥಾನ), ಸೌದಿ ಅರೇಬಿಯಾ(62), ಜೋರ್ಡಾನ್(75), ಟೋಗೊ(97), ಬಹರೈನ್(43), ತಾಜಿಕಿಸ್ತಾನ್(106), ಪಾಕಿಸ್ತಾನ(108), ಕುವೈಟ್(83), ಚೀನಾ (31) ಮತ್ತು ನೈಜೀರಿಯಾ (131).

 ಸತತ ಮೂರನೇ ಬಾರಿ ಅತ್ಯುತ್ತಮ ಸಾಧನೆ ತೋರಿದ 10 ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವ ಮೂಲಕ ಭಾರತ ಕಳೆದ 20 ವರ್ಷಗಳಲ್ಲಿ ವಿಶ್ವದ ಕೆಲವೇ ರಾಷ್ಟ್ರಗಳು ಸಾಧಿಸಿದ ದಾಖಲೆಯನ್ನು ಸರಿಗಟ್ಟಿದೆ. ಭಾರತದ ಜನಸಂಖ್ಯೆಯನ್ನು ಗಮನಿಸಿದರೆ ಈ ಸಾಧನೆ ಅತ್ಯುತ್ತಮವಾಗಿದೆ ಎಂದು ವಿಶ್ವಬ್ಯಾಂಕ್‌ನ ಅಭಿವೃದ್ಧಿ ಅರ್ಥಶಾಸ್ತ್ರ ವಿಭಾಗದ ನಿರ್ದೇಶಕ ಸಿಮಿಯೊನ್ ಡ್ಯಾಂಕೋವ್ ಶ್ಲಾಘಿಸಿದ್ದಾರೆ.

    2020ರ ವೇಳೆ ವಿಶ್ವದ ಅಗ್ರ 50 ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವ ಗುರಿ ಹೊಂದಿರುವುದಾಗಿ 2015ರಲ್ಲಿ ಭಾರತ ಘೋಷಿಸಿತ್ತು. ಈ ಗುರಿ ಸಾಧನೆಗೆ 1 ವರ್ಷ ಬಾಕಿಯಿದ್ದು, ತೀವ್ರ ಪೈಪೋಟಿಯ ಮಧ್ಯೆಯೂ ಭಾರತ ತನ್ನ ಶ್ರೇಯಾಂಕವನ್ನು ಉನ್ನತೀಕರಿಸುತ್ತಾ ಸಾಗುತ್ತಿದೆ. ಆದರೆ 50ರೊಳಗಿನ ಅಥವಾ 25ರೊಳಗಿನ ಪಟ್ಟಿಯಲ್ಲಿ ಸ್ಥಾನ ಪಡೆಯಬೇಕಿದ್ದರೆ ಮೋದಿ ಸರಕಾರ ಈಗಲೇ ತನ್ನ ಮಹಾತ್ವಾಕಾಂಕ್ಷೆಯ ಸುಧಾರಣಾ ಕ್ರಮಗಳನ್ನು ಘೋಷಿಸಿ ಜಾರಿಗೊಳಿಸುವ ಉಪಕ್ರಮ ಆರಂಭಿಸಬೇಕು ಎಂದವರು ಹೇಳಿದ್ದಾರೆ.

  ಭಾರತದಲ್ಲಿ ತೆರಿಗೆ ಪಾವತಿ ಮತ್ತು ಗಡಿಯುದ್ದಕ್ಕೂ ವ್ಯಾಪಾರ ಉತ್ತೇಜಿಸಲು ಹೆಚ್ಚಿನ ಆದ್ಯತೆ ನೀಡಿರುವುದು ಮತ್ತು ಮುಖ್ಯವಾಗಿ ದಿವಾಳಿತನ ಸಂಹಿತೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿರುವುದು ಉದ್ಯಮಸ್ನೇಹಿ ವಾತಾವರಣ ಮೂಡಿಸಲು ಪೂರಕವಾಗಿದೆ. ದಿವಾಳಿತನ ಕಾನೂನು ಜಾರಿಗೆ ಬರುವ ಮುನ್ನ ಸಾಲ ಮರುಪಾವತಿಸದ ಸಂಸ್ಥೆಗಳನ್ನು ಸ್ವಾಧೀನಕ್ಕೆ ಪಡೆಯುವುದು ಸಾಲ ನೀಡಿದ ಸಂಸ್ಥೆಗಳಿಗೆ ಸುಲಭವಾಗಿರಲಿಲ್ಲ. ಆದರೆ ಕಠಿಣ ಕಾನೂನು ಜಾರಿಗೆ ಬಂದ ಬಳಿಕ ಸುಮಾರು 2000ಕ್ಕೂ ಹೆಚ್ಚು ಸಂಸ್ಥೆಗಳು ಹೊಸ ಕಾನೂನನ್ನು ಬಳಸಿಕೊಂಡಿವೆ. ಇದರಲ್ಲಿ ಸುಮಾರು 470 ಸಂಸ್ಥೆಗಳು ಸಮಾಪನಗೊಂಡಿದ್ದರೆ, 120ಕ್ಕೂ ಹೆಚ್ಚಿನ ಸಂಸ್ಥೆಗಳು ಪುನಸ್ಸಂಘಟನೆಯ ಯೋಜನೆಯನ್ನು ಅನುಮೋದಿಸಿದೆ . ಉಳಿದ ಪ್ರಕರಣಗಳು ಇನ್ನಷ್ಟೇ ಇತ್ಯರ್ಥವಾಗಬೇಕಿದೆ ಎಂದು ವರದಿ ತಿಳಿಸಿದೆ.

   ಇದರ ಜೊತೆಗೆ, ಉದ್ಯಮ ಆರಂಭಿಸುವ ಪ್ರಕ್ರಿಯೆಯನ್ನೂ ಭಾರತ ಸರಳೀಕರಿಸಿದೆ. ಡಿಜಿಟಲೀಕರಣ ಪ್ರಕ್ರಿಯೆ ಅಳವಡಿಕೆಯಿಂದ ನವೋದ್ಯಮಗಳಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X