Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವಸ್ಥನಾಗಿ ಹೆತ್ತಬ್ಬೆ ಮಡಿಲು ಸೇರಿದ...

ಸ್ವಸ್ಥನಾಗಿ ಹೆತ್ತಬ್ಬೆ ಮಡಿಲು ಸೇರಿದ ಮಾನಸಿಕ ಅಸ್ವಸ್ಥ ಯುವಕ

ವಾರ್ತಾಭಾರತಿವಾರ್ತಾಭಾರತಿ24 Oct 2019 9:35 PM IST
share
ಸ್ವಸ್ಥನಾಗಿ ಹೆತ್ತಬ್ಬೆ ಮಡಿಲು ಸೇರಿದ ಮಾನಸಿಕ ಅಸ್ವಸ್ಥ ಯುವಕ

ಉಡುಪಿ, ಅ.24: ಅಪರಿಚಿತ ಮನೋರೋಗಿ ಯುವಕನೊಬ್ಬ ಅನ್ನಾಹಾರ ಸೇವಿಸದೆ, ನಿತ್ರಾಣದಿಂದ ಬಳಲಿದ ಸ್ಥಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸನಿಹ ಸೆ. 17 ರಂದು ಕಂಡು ಬಂದಿದ್ದನು. ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಈ ಯುವಕನನ್ನು ರಕ್ಷಿಸಿ ದೊಡ್ಡಣಗುಡ್ಡೆ ಡಾ.ಎ.ವಿ ಬಾಳಿಗ ಆಸ್ಪತ್ರೆಗೆ ದಾಖಲಿಸಿ ದ್ದರು. ಆಸ್ಪತ್ರೆಯ ಮನೋರೋಗ ತಜ್ಞರ ಸೂಕ್ತ ಚಿಕಿತ್ಸೆಯಿಂದ ಯುವಕನು ಗುಣಮುಖನಾಗಿದ್ದು, ಆತನ ವಿಳಾಸ ಪತ್ತೆಹಚ್ಚಿ ಹೆತ್ತವರ ಮಡಿಲು ಸೇರಿಸುವಲ್ಲಿ ವಿಶು ಶೆಟ್ಟಿ ಇದೀಗ ಯಶಸ್ವಿಯಾಗಿದ್ದಾರೆ.

ಯುವಕನನ್ನು ಬೆಂಗಳೂರು ಮಾಗಡಿಯ ಮೂರ್ತಿ (28) ಎಂದು ಗುರುತಿ ಸಲಾಗಿದೆ. ಈತ ಅನ್ನಾಹಾರ ಇಲ್ಲದೆ ಅಸಹಾಯಕ ಸ್ಥಿತಿಯಲ್ಲಿದ್ದಾಗ, ವಿಶು ಶೆಟ್ಟಿ ಈತನಿಗೆ ಸ್ನಾನ ಮಾಡಿಸಿ ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ನಿಧಾನ ಗತಿಯಲ್ಲಿ ಚಿಕಿತ್ಸೆಗೆ ಸ್ಪಂದಿಸಿದ ಯುವಕ ನಿಂದ ಆಸ್ಪತ್ರೆಯ ಆಪ್ತ ಸಮಾಲೋಚಕ ನಾಗರಾಜ್, ಆತನ ಯುವಕನ ವಿಳಾಸ ಕಲೆ ಹಾಕಿದರು. ಬಳಿಕ ಹೆತ್ತವರಿಗೆ ವಿಷಯ ತಿಳಿಸಲಾಗಿ ಹಲವಾರು ತಿಂಗಳುಗಳಿಂದ ಮಗನ ಹುಡುಕಾಟದಲ್ಲಿದ್ದ ತಾಯಿಗೆ ವಿಷಯದು ಅತೀವ ಹರ್ಷವಾಗಿತ್ತು.

ಮಗನನ್ನು ನೋಡಲು ಉಡುಪಿಗೆ ಧಾವಿಸಲು ಸಹ ಹೆತ್ತವರ ಬಳಿ ಬಸ್ಸಿಗೆ ಹಣವಿರಲಿಲ್ಲ. ಪರಿಸ್ಥಿತಿ ತಿಳಿದ ವಿಶು ಶೆಟ್ಟಿ, ಯಾರಲ್ಲಾದರೂ ಸಾಲ ಮಾಡಿ ಬರುವಂತೆ, ಮುಂದಿನ ವ್ಯವಸ್ಥೆ ತಾನು ಮಾಡುವ ಭರವಸೆ ನೀಡಿದ್ದರು. ಅದರಂತೆ ಉಡುಪಿಗೆ ಬಂದ ಮೂರ್ತಿಯ ತಾಯಿ ಮಗನನ್ನು ಆಸ್ಪತ್ರೆಯಿಂದ ಅ.23ರಂದು ಬಿಡುಗಡೆಗೊಳಿಸಿ, ಬೆಂಗಳೂರಿನ ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಈ ತಾಯಿಯ ಪಾಲಿಗೆ ಈ ಬಾರಿಯ ದೀಪಾವಳಿ ವಿಶೇಷ ಬೆಳಕಿನ ಹಬ್ಬವಾದ ಖುಷಿಯಲ್ಲಿದ್ದಾರೆ. ತಮಗೆ ಆಪದ್ಬಾಂಧವನಾಗಿ ನೆರವಾದ ವಿಶು ಶೆಟ್ಟಿ ಅವರಿಗೆ ವುನದಾಳದ ಕೃತಜ್ಞತೆ ಸಲ್ಲಿಸಿದ್ದಾರೆ.

ಆಸ್ಪತ್ರೆಯ ವೈದ್ಯರು ಸಹ ಮಾನವೀಯತೆಯ ನೆಲೆಯಲ್ಲಿ ಒಟ್ಟು ಶುಲ್ಕದಲ್ಲಿ ವಿನಾಯಿತಿ ನೀಡಿದ್ದರು. ಉಳಿದ ಹಣವನ್ನು ವಿಶು ಶೆಟ್ಟಿ ಅವರ ಕೋರಿಕೆಯಂತೆ ಬೇರೆ ಬೇರೆ ಸಹೃದಯ ದಾನಿಗಳು ಭರಿಸಿದ್ದಾರೆ. ಅಂಬಲಪಾಡಿಯ ಸತೀಶ್ ಶೆಟ್ಟಿ ಎಂಬವರು ಮೂರ್ತಿ ಹಾಗೂ ಅವರ ಮನೆಮಂದಿಯ ಪ್ರಯಾಣದ ವೆಚ್ಚವನ್ನು ನೀಡಿ ಸಹಕರಿಸಿದ್ದಾರೆ ಎಂದು ವಿಶು ಶೆಟ್ಟಿ ತಿಳಿಸಿದರು.

ಚಿಕಿತ್ಸೆ ಪಡೆದು 20 ದಿನಗಳಲ್ಲಿ ವೈದ್ಯರು ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸುವಂತೆ ಸೂಚಿಸಿದ್ದರು.ಮೂರ್ತಿಗೆ ಪುರ್ನವಸತಿ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ವಿನಂತಿಸಿದ್ದೆ.ಅವರಿಂದ ಸ್ಪಂದನೆ ದೊರೆಯಲಿಲ್ಲ. ಅಸಹಾಯಕರಿಗೆ, ವೃದ್ಧರಿಗೆ, ಮಹಿಳೆಯರಿಗೆ, ಮಾನಸಿಕ ಅಸ್ವಸ್ಥರಿಗೆ ಸರಿಯಾದ ನೆಲೆ ಕೊಡುವುದು ಸಂಬಂಧ ಪಟ್ಟ ಇಲಾಖೆಗಳ ಕರ್ತವ್ಯವಾಗಬೇಕು. ಈ ಪ್ರಕರಣ ಅಧಿಕಾರಿಗಳ ನಿರ್ಲಕ್ಷತನ ಹಾಗೂ ಮಾನವ ಹಕ್ಕಿನ ಉಲ್ಲಂಘನೆ ಎಂದು ಹೇಳಬಹುದು. ಇಂತಹ ಸಂದರ್ಭಗಳಲ್ಲಿ ಮೇಲಾಧಿಕಾರಿಗಳಾದರೂ ನ್ಯಾಯ ಒದಗಿಸುವ ಪ್ರಯತ್ನ ಮಾಡಬೇಕಾಗಿದೆ.

-ವಿಶು ಶೆಟ್ಟಿ ಅಂಬಲಪಾಡಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X