Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನಪರ ಚಳವಳಿಗಳ ಮೇಲೆ ಗಾಂಧಿ ಚಿಂತನೆ...

ಜನಪರ ಚಳವಳಿಗಳ ಮೇಲೆ ಗಾಂಧಿ ಚಿಂತನೆ ಪ್ರಭಾವ ಬೀರಿದೆ: ನಟರಾಜ್ ಹುಳಿಯಾರ್

ವಾರ್ತಾಭಾರತಿವಾರ್ತಾಭಾರತಿ25 Oct 2019 11:35 PM IST
share

ಬೆಂಗಳೂರು, ಅ.25: ಕರ್ನಾಟಕದ ಆರೋಗ್ಯಪೂರ್ಣ ಜನಪರ ಚಳವಳಿಗಳ ಮೇಲೆ ಮಹಾತ್ಮಗಾಂಧೀಯ ಚಿಂತನೆ ಪ್ರಭಾವ ಬೀರಿದೆ ಎಂದು ಲೇಖಕ ಹಾಗೂ ಬೆಂಗಳೂರು ವಿವಿಯ ಗಾಂಧೀ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ನಟರಾಜ್ ಹುಳಿಯಾರ್ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ನಗರದ ಸಾಹಿತ್ಯ ಅಕಾಡೆಮಿ, ಶಬ್ದನಾ ಭಾಷಾಂತರ ಕೇಂದ್ರದ ವತಿಯಿಂದ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಅಕಾಡೆಮಿಯ ಸಭಾಂಗಣದಲ್ಲಿ ಆಯೋಜಿಸಿದ್ದ ‘ಕನ್ನಡದಲ್ಲಿ ಗಾಂಧೀ ಸ್ವೀಕಾರ’ ವಿಷಯದ ಕುರಿತ ವಿಚಾರಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸ್ವಾತಂತ್ರ ಚಳವಳಿಯಲ್ಲಿ ಗಾಂಧೀಜಿ ತೊಡಗಿಸಿಕೊಂಡ ಬಳಿಕ ಒಂದಲ್ಲಾ ಒಂದು ರೀತಿಯಲ್ಲಿ ಎಲ್ಲ ಲೇಖಕರು ಅವರಿಗೆ ಸ್ಪಂದಿಸಿದ್ದಾರೆ. ಅದೇ ರೀತಿ ಅಂದಿನ ದೇವನೂರ ಮಹಾದೇವರು ಆರಂಭಿಸಿದ ದಲಿತ ಚಳವಳಿ, ಪರಿಸರ ಚಳವಳಿ, ಕಾರ್ಮಿಕ ಚಳವಳಿ ಸೇರಿದಂತೆ ಅನೇಕ ಚಳವಳಿಗಳು ಗಾಂಧಿಯವರ ಚಿಂತನೆಗಳನ್ನು ಅಳವಡಿಸಿಕೊಂಡಿರುವುದನ್ನು ಕಾಣಬಹುದಾಗಿದೆ ಎಂದು ಹೇಳಿದರು. ಮಹಾತ್ಮಗಾಂಧೀ ಕುವೆಂಪು, ಲೋಹಿಯಾ, ಲಂಕೇಶ್, ಶಿವರಾಮ ಕಾರಂತರು, ದೇವನೂರ ಮಹಾದೇವ, ಪೂರ್ಣಚಂದ್ರ ತೇಜಸ್ವಿ, ರಾಜರತ್ನಂ, ಸಿದ್ದಲಿಂಗಯ್ಯ, ಕಂಬಾರ ಸೇರಿದಂತೆ ಇಂದಿನ ಸಾಹಿತಿಗಳು, ಲೇಖಕರವರೆಗೂ ಅನೇಕರನ್ನು ಪ್ರಭಾವಿಸಿದ್ದಾರೆ. ಕಾರಂತರ ಚೋಮನದುಡಿ, ದೇವನೂರರ ಎದೆಗೆ ಬಿದ್ದ ಅಕ್ಷರ, ತೇಜಸ್ವಿಯ ಕರ್ವಾಲೋ ಸೇರಿದಂತೆ ಅನೇಕರ ಕೃತಿಗಳಲ್ಲಿ ಗಾಂಧಿಯ ಚಿಂತನೆಗಳನ್ನು ಕಾಣಬಹುದಾಗಿದೆ ಎಂದರು.

ದೇಶದಲ್ಲಿ ಗಾಂಧೀವಾದವನ್ನು ಅಷ್ಟು ಸುಲಭವಾಗಿ ಬದಲಿಸಲು ಸಾಧ್ಯವಿಲ್ಲ ಎಂದ ಅವರು, ಸನಾತನವಾದಿಗಳು ಅತಿಹೆಚ್ಚು ಗಾಂಧಿಗೆ ಹೆದರಿಕೊಂಡಿದ್ದರು. ಅಲ್ಲದೆ, ಬ್ರಾಹ್ಮಣರು ಸನಾತನದಿಂದ ಹೊರ ಬರಲು ಸಹ ಗಾಂಧಿಯ ಚಿಂತನೆಗಳೇ ನೆರವಾಗಿವೆ. ಗಾಂಧಿಯು ಅಹಿಂಸೆ ದುರ್ಬಲರ ಅಸ್ತ್ರವಲ್ಲ, ಶೌರ್ಯರ ಅಸ್ತ್ರವಾಗಿದೆ ಎಂದು ಹೇಳುತ್ತಿದ್ದರೆಂದು ಅವರು ಪ್ರತಿಪಾದಿಸಿದರು.

ಮಹಾತ್ಮಗಾಂಧಿಯವರ ಆತ್ಮಕತೆಯು ಹಲವಾರು ಭಾಷೆಗಳಿಗೆ ಭಾಷಾಂತರವಾಗಿದೆ. ಗಾಂಧಿಯು ಆತ್ಮಕತೆಯನ್ನು ಸತ್ಯಾನ್ವೇಷಣೆ, ಸತ್ಯದೊಂದಿಗಿನ ಪ್ರಯೋಗ ಎಂದಿದ್ದಾರೆ. ಹೀಗಾಗಿ, ಆಂಗ್ಲದಿಂದ ಭಾಷಾಂತರವಾದ ಅವರ ಆತ್ಮಕಥೆ ಮೂಲಭಾಷೆಗಿಂತ ಸ್ವಲ್ಪ ಏರುಪೇರಾಗಿದೆ ಎಂದು ಮಾಹಿತಿ ನೀಡಿದರು. ಇಂಗ್ಲಿಷ್‌ನಲ್ಲಿ ಮಾತನಾಡುವ ವೇಳೆ ಸಿಗುವ ಶಬ್ದಕೋಶವನ್ನೇ ಅನುವಾದದಲ್ಲಿ ಬಳಸುತ್ತೇವೆ. ಅಲ್ಲಿ ಸಿಗುವಂತಹ ಪದಗಳೇ ನಮ್ಮ ಭಾಷೆಯನ್ನು ನಿಯಂತ್ರಣ ಮಾಡುತ್ತದೆ. ಇಂದಿಗೂ ಗುಜರಾತಿ ಭಾಷೆಯಿಂದ ಬಿಟ್ಟಿರುವ, ಎಡಿಟ್ ಮಾಡಿರುವ ಪದಗಳಿಗೆ ಬಹಳ ಬೇಡಿಕೆಯಿದೆ ಎಂದ ಅವರು, ನಮ್ಮ ಸಂವೇದನೆ ಯಾವುದಾಗಿರುತ್ತದೆಯೋ ಅದು ಹೆಚ್ಚು ಪರಿಣಾಮಕಾರಿಯಾಗಿ ಭಾಷಾಂತರವಾಗುತ್ತದೆ ಎಂದು ನುಡಿದರು.

ಮಹಾತ್ಮಗಾಂಧಿ ಹಾಗೂ ಅಂಬೇಡ್ಕರ್ ನಡುವೆ ಹಲವು ವೈರುಧ್ಯಗಳನ್ನು ಗುರುತಿಸುತ್ತಾ ಟೀಕೆ ಮಾಡುತ್ತಾ ಕಾಲ ಕಳೆಯುತ್ತಿದ್ದೇವೆ. ಅದರ ಬದಲಿಗೆ, ಅವರ ಸಾಹಿತ್ಯವನ್ನು ಓದಿ, ವಿಮರ್ಶೆಗೆ ಒಳಪಡಿಸುವ ಅಗತ್ಯವಿದೆ. ಲಂಕೇಶ್ ಹಾಗೂ ಲೋಹಿಯಾ ಸಹ ಗಾಂಧಿಯನ್ನು ಟೀಕಿಸಿದ್ದರು ಮತ್ತು ಒಪ್ಪಿದ್ದರು ಎಂದು ನಟರಾಜ್ ಹುಳಿಯಾರ್ ತಿಳಿಸಿದರು.

ಗಾಂಧಿಯು ಮುಸ್ಲಿಮ್ ಮಹಿಳೆಯರ ಕುರಿತು ಹಾಗೂ ಮತ್ತಿತರೆ ವಿಷಯಗಳ ಕುರಿತಾದ ಪತ್ರಗಳು ಕನ್ನಡದಲ್ಲಿ ಸಾಕಷ್ಟಿವೆ ಎಂದ ಅವರು, ಗಾಂಧಿಯನ್ನು ಪಠ್ಯ, ಗದ್ಯ, ಪದ್ಯ, ಲಾವಣಿಗಳಲ್ಲಿಯೂ ಕಾಣಬಹುದಾಗಿದೆ ಎಂದು ಹೇಳಿದರು.

ಇಂದಿನ ನಮ್ಮ ಶಿಕ್ಷಣ ವ್ಯವಸ್ಥೆಯೂ ಸಂಪೂರ್ಣ ಬದಲಾಗಿದೆ. ನಮ್ಮಲ್ಲಿನ ವಿಶ್ವವಿದ್ಯಾಲಯಗಳು ಬೇರೆ ಬೇರೆ ವಿಚಾರಗಳನ್ನು ಚರ್ಚೆ ಮಾಡುತ್ತಾ, ಗಾಂಧಿಯ ಚಿಂತನೆಗಳನ್ನು ದೂರಕ್ಕೆ ಸರಿಸಿವೆ. ಗಾಂಧೀ, ಅಂಬೇಡ್ಕರ್, ಲೋಹಿಯಾರ ಚಿಂತನೆಗಳ ಓದು, ಚರ್ಚೆ, ವಿಮರ್ಶೆ ಇಂದಿನ ತುರ್ತು ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಗಾಂಧಿ ವಿದ್ವಾಂಸ ಜಿ.ಬಿ.ಶಿವರಾಜು, ಭಾಷಾಂತರ ಕೇಂದ್ರದ ಗೌರವ ನಿರ್ದೇಶಕ ಎಸ್.ಆರ್.ವಿಜಯಶಂಕರ, ದಲಿತ ಕವಿ ಸಿದ್ದಲಿಂಗಯ್ಯ ಉಪಸ್ಥಿತರಿದ್ದರು.

ಶಿಕ್ಷಣದಲ್ಲಿ ಗಾಂಧಿಯ ವಿಚಾರಧಾರೆಗಳು ಸಿಗದೇ ಇರುವುದರಿಂದ ಗೋಡ್ಸೆಯನ್ನು ವೈಭವೀಕರಿಸಿ ಬರೆಯುತ್ತಿದ್ದಾರೆ. ಹೀಗಾಗಿ, ಗಾಂಧಿಯ ವಿಚಾರಧಾರೆಗಳ ಮರು ಓದು, ವಿಮರ್ಶೆ ಅತ್ಯಗತ್ಯವಾಗಿದೆ. ಆ ಮೂಲಕ ಗಾಂಧಿಯ ಚಿಂತನೆಗಳನ್ನು ಬಿತ್ತುವ ಮೂಲಕ, ಗೋಡ್ಸೆಯ ವಿಚಾರಧಾರೆಗಳನ್ನು ನಾಶಮಾಡಬೇಕಿದೆ.

-ಪ್ರೊ.ನಟರಾಜ್ ಹುಳಿಯಾರ್, ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X