Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೀಪಾವಳಿ: ನಿಯಮಗಳನ್ನು ಪಾಲಿಸಲು ಕರೆ

ದೀಪಾವಳಿ: ನಿಯಮಗಳನ್ನು ಪಾಲಿಸಲು ಕರೆ

ವಾರ್ತಾಭಾರತಿವಾರ್ತಾಭಾರತಿ25 Oct 2019 11:37 PM IST
share
ದೀಪಾವಳಿ: ನಿಯಮಗಳನ್ನು ಪಾಲಿಸಲು ಕರೆ

ಬೆಂಗಳೂರು, ಅ.25: ಸಾರ್ವಜನಿಕರು ದೀಪಾವಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಕಡ್ಡಾಯವಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಕೆಲವು ನಿಯಮಗಳನ್ನು ಪಾಲಿಸಬೇಕೆಂದು ಒಳಾಡಳಿತ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಕರೆ ನೀಡಿದ್ದಾರೆ. 

ವಾಯು ಮಾಲಿನ್ಯ, ಶಬ್ದಮಾಲಿನ್ಯ ಮತ್ತು ಪಟಾಕಿ ಸಿಡಿಸಿದ ನಂತರದ ಘನ ತ್ಯಾಜ್ಯ ವಸ್ತುಗಳಿಂದ ಮಾಲಿನ್ಯ ಉಂಟಾಗುವುದರಿಂದ, ಸರಣಿ ಸ್ಪೋಟಕ ಪಟಾಕಿಗಳನ್ನು ತಯಾರಿಸುವುದು, ಮಾರಾಟ ಮಾಡುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಸ್ಫೋಟಕ ಪಟಾಕಿಗಳನ್ನು ಅಧಿಕೃತವಾಗಿ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಮಾರಾಟ ಮಾಡುವುದು ಮತ್ತು ಅಧಿಕೃತವಾಗಿ ಪರವಾನಗಿ ಪಡೆದವರು ಸ್ಪೋಟಕ ಪಟಾಕಿಗಳನ್ನು ಈ ಆದೇಶಾನುಸಾರ ಮಾತ್ರ ಮಾರಾಟ ಮಾಡುವುದು ಕಡ್ಡಾಯವಾಗಿದೆ

ದೀಪಾವಳಿ ಹಬ್ಬದ ಸಂಬಂಧ ಅ.27ರ ನರಕ ಚತುರ್ದರ್ಶಿ ಅ.28ರ ಅಮಾವಾಸ್ಯೆ ದಿನದ ಲಕ್ಷ್ಮಿಪೂಜೆ, ಅ.29ರ ಬಲಿಪಾಢ್ಯಮಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳನ್ನು ರಾತ್ರಿ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ. ಈ ಸಂಬಂಧ ಪೊಲೀಸ್ ಇಲಾಖೆ ಪಟಾಕಿ ಸಿಡಿತ ಪ್ರಕ್ರಿಯೆಯು ನಿಗದಿತ ಅವಧಿಯಲ್ಲಿ ನಡೆಯುವಂತೆ ಮುಂಜಾಗ್ರತೆ ವಹಿಸಬೇಕು.

ನಿಷೇಧಿತ ಸ್ಪೋಟಕ ಪಟಾಕಿಗಳ ಮಾರಾಟವನ್ನು ತಡೆಗಟ್ಟಲು ಕ್ರಮಕೈಗೊಳ್ಳುವುದು. ತಪ್ಪಿದಲ್ಲಿ ಸಂಬಂಧಿಸಿದ ಠಾಣಾಧಿಕಾರಿಗಳನ್ನು, ನ್ಯಾಯಾಲಯದ ಉಲ್ಲಂಘನೆಗಾಗಿ ತಪ್ಪಿತಸ್ಥರೆಂದು ನಿರ್ಧರಿಸಿ, ಕ್ರಮಕೈಗೊಳ್ಳಲಾಗುವುದು ಎಂದು ಡಾ.ರಜನೀಶ್ ಗೋಯಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮಗಳು

-ಮಕ್ಕಳಿಗೆ ದೊಡ್ಡವರ ಸಮ್ಮುಖದಲ್ಲೆ ಪಟಾಕಿ ಹಚ್ಚಲು ತಿಳಿಸತಕ್ಕದ್ದು.

-ತೆರೆದ ಪ್ರದೇಶದಲ್ಲಿ ಪಟಾಕಿ ಹಚ್ಚುವುದು ಸುರಕ್ಷಿತ. ಯಾವುದೇ ಸಂದರ್ಭದಲ್ಲಿ ಮನೆಯೊಳಗೆ ಪಟಾಕಿ ಹಚ್ಚಬಾರದು.

-ಆದಷ್ಟು ಮಟ್ಟಿಗೆ ಶರೀರಕ್ಕೆ ಹೊಂದಿಕೊಳ್ಳುವಂತಹ ಬಟ್ಟೆಗಳನ್ನು ಧರಿಸತಕ್ಕದ್ದು. ದೊಗಲೆ ಬಟ್ಟೆಗಳನ್ನು ಧರಿಸಬಾರದು.

-ಸುರುಸುರು ಬತ್ತಿ ಇತ್ಯಾದಿಗಳನ್ನು ಶರೀರದಿಂದ ಆದಷ್ಟು ದೂರ ಹಿಡಿಯಬೇಕು.

-ಪಟಾಕಿ ಹಚ್ಚುವಾಗ ಅದರ ಮೇಲೆ ಬಾಗಬಾರದು. ಸಾದ್ಯವಾದಷ್ಟು ಮಟ್ಟಿಗೆ ಪಕ್ಕದಿಂದ ಹಚ್ಚತಕ್ಕದ್ದು.

-ಯಾವುದೇ ಪಾತ್ರೆ ಒಳಗೆ ಅಥವಾ ಇಕ್ಕಟ್ಟಾದ ಸ್ಥಳಗಳಲ್ಲಿ ಪಟಾಕಿ ಹಚ್ಚಬಾರದು.

-ಪಟಾಕಿಗಳನ್ನು ಜೇಬಿನಲ್ಲಿಡಬಾರದು.

-ಯಾವುದೇ ಸಂದರ್ಭದಲ್ಲಿ ಪಟಾಕಿಗಳನ್ನು ಬೆಂಕಿಯ ಅಥವಾ ಉಷ್ಣತೆ ಹೆಚ್ಚಿರುವ ಸ್ಥಳಗಳಲ್ಲಿ ಇಡಬಾರದು ಹಾಗೂ ಪೊಟ್ಟಣಗಳನ್ನು ತೆರೆಯಬಾರದು.

-ಹಚ್ಚಿರುವ ಪಟಾಕಿ ಸಿಡಿಯದಿದ್ದರೆ ಅದನ್ನು ಪುನರ್ ಪರೀಕ್ಷಿಸಲು ಪ್ರಯತ್ನಿಸಬಾರದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X