ಪ್ರಯಾಣಿಕರ ಜತೆ ಚಾಲಕರ ಅನುಚಿತ ವರ್ತನೆ: ಸಂಪೂರ್ಣ ವರದಿ ನೀಡಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು, ಅ.25: ಆ್ಯಪ್ ಆಧಾರಿತ ಕ್ಯಾಬ್ಗಳ ಸೇವೆಗಳನ್ನು ಪಡೆದುಕೊಂಡು ಪ್ರಯಾಣಿಸುವ ಪ್ರಯಾಣಿಕರ ಜೊತೆಗೆ ಅನುಚಿತವಾಗಿ ವರ್ತಿಸುವ ಚಾಲಕರ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ಸಂಪೂರ್ಣ ವರದಿ ನೀಡಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ. ಈ ಕುರಿತು ವಕೀಲ ಆರ್.ವಿ.ರಾಮರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ನ್ಯಾಯಪೀಠವು, ಕರ್ನಾಟಕ ಆನ್-ಡಿಮಾಂಡ್ ಟ್ರಾನ್ಸ್ಪೋರ್ಟೇಶನ್ ಟೆಕ್ನಾಲಜಿ ಅಗ್ರಿಗೇಟರ್ಸ್ ರೂಲ್ಸ್-2016ರ ಅನುಸಾರ ಪ್ರಯಾಣಿಕರ ಜೊತೆಗೆ ಅನುಚಿತವಾಗಿ ವರ್ತಿಸಿರುವ ಎಷ್ಟು ಚಾಲಕರ ಲೈಸನ್ಸ್ಗಳನ್ನು ರದ್ದುಗೊಳಿಸಲಾಗಿದೆ. ಅವರ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ಕುರಿತು ಮಾಹಿತಿಯನ್ನು ನೀಡುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.
ರಾಜ್ಯದಲ್ಲಿ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಶ್ರೀಮಂತಗೊಳಿಸಲು ಸಾಹಿತಿಗಳು, ಕಲಾವಿದರು ನೀಡಿರುವ ಕೊಡುಗೆಯ ಬಗ್ಗೆ ಅಪಾರ ಅಭಿಮಾನ, ಗೌರವವಿದೆ. ಅವರ ಅಭಿವ್ಯಕ್ತಿ ಸ್ವಾತಂತ್ರ ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ. ಅವರಿಗೆ ಅಗೌರವ ತರುವಂತಹ ಯಾವುದೇ ಪ್ರಯತ್ನಗಳಿಗೆ ಅವಕಾಶ ನೀಡುವುದಿಲ್ಲ.
-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ