Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಬಾಬುಡನ್ ದರ್ಗಾ ವಿಚಾರದಲ್ಲಿ ಸುಳ್ಳು...

ಬಾಬಾಬುಡನ್ ದರ್ಗಾ ವಿಚಾರದಲ್ಲಿ ಸುಳ್ಳು ಆರೋಪ ಹರಡಲಾಗುತ್ತಿದೆ: ಕೋಸೌವೇ ರಾಜ್ಯ ಕಾರ್ಯದರ್ಶಿ ಗೌಸ್

ವಾರ್ತಾಭಾರತಿವಾರ್ತಾಭಾರತಿ26 Oct 2019 5:15 PM IST
share
ಬಾಬಾಬುಡನ್ ದರ್ಗಾ ವಿಚಾರದಲ್ಲಿ ಸುಳ್ಳು ಆರೋಪ ಹರಡಲಾಗುತ್ತಿದೆ: ಕೋಸೌವೇ ರಾಜ್ಯ ಕಾರ್ಯದರ್ಶಿ ಗೌಸ್

ಚಿಕ್ಕಮಗಳೂರು, ಅ.26: ಗುರುದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದ ವಿಚಾರದಲ್ಲಿ ಕೆಲವರು ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕೋಮು ಸೌಹಾರ್ದ ವೇದಿಕೆ ಜಿಲ್ಲಾಡಳಿತವನ್ನು ಆಗ್ರಹಿಸಿದೆ.

ಶನಿವಾರ ನಗರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ರಾಜ್ಯ ಕಾರ್ಯದರ್ಶಿ ಗೌಸ್ ಮೊಹಿಯುದ್ದೀನ್, ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ದರ್ಗಾ ಜಿಲ್ಲೆಯ ಒಂದು ಸೌಹಾರ್ದ ತಾಣವಾಗಿದೆ. ವಿವಾದದ ವಿಚಾರಣೆಯು ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಆದರೂ ಇಲ್ಲಿ ಪ್ರತಿನಿತ್ಯ, ಹಿಂದೂ, ಮುಸ್ಲಿಂ, ಬೌದ್ಧ, ಕ್ರೈಸ್ತ ಎಂಬ ಯಾವುದೇ ಭೇದಭಾವವಿಲ್ಲದೆ ಭಕ್ತರು ಶ್ರದ್ಧೆಯಿಂದ ಬಂದು ತಮ್ಮ ಭಕ್ತಿಗನುಗುಣವಾಗಿ ನಡೆದುಕೊಂಡು ಬರುತ್ತಿದ್ದಾರೆ ಎಂದರು.

ದೇಶಕ್ಕೆ ಕಾಫಿ ಬೆಳೆಯನ್ನು ಪರಿಚಯಿಸಿದ ಬಾಬಾಬುಡನ್ ಅವರ ದರ್ಗಾ ಕೂಡ ಇಲ್ಲಿದೆ. ಈ ಪ್ರದೇಶದ ಸುತ್ತಲಿನ ಕಾಫಿ ಬೆಳೆಗಾರರು, ಕೂಲಿ ಕಾರ್ಮಿಕರು ಕಾಫಿ ಕೊಯ್ಲಿನ ನಂತರ ಕಾಫಿ ಬೀಜ, ಹೂಗಳನ್ನು ಈ ಸಮಾದಿಗೆ ಅರ್ಪಿಸುವ ಪರಿಪಾಠ ಇಲ್ಲಿದೆ. ಈ ಪ್ರದೇಶಕ್ಕೆ ಮುಜರಾಯಿ ಇಲಾಖೆಯವರು ಗೇಟಿಗೆ ಬೀಗ ಹಾಕುತ್ತಿದ್ದು, ಯಾರಾದರೂ ಭಕ್ತರು ಒಳಗೆ ಹೋಗಲು ಇಚ್ಚಿಸಿದಲ್ಲಿ ಇಲಾಖೆಯವರು ಬೀಗ ತೆಗೆದು ಅವರುಗಳನ್ನು ಒಳಗೆ ಬಿಟ್ಟು ಅವರು ಪೂಜೆ ಸಲ್ಲಿಸಿದ ನಂತರ ಪುನಃ ಗೇಟಿಗೆ ಬೀಗ ಹಾಕುತ್ತಾರೆ ಎಂದು ತಿಳಿಸಿದರು.

ಅದೇ ರೀತಿ ಅ.20ರಂದು ಕೆಲವರು ಗೇಟಿನ ಬೀಗ ತೆಗೆಸಿ ಒಳಗೆ ತೆರಳಿ ಪ್ರಾರ್ಥಿಸಿ ಬಂದಿದ್ದಾರೆ. ಆದರೆ ಶ್ರೀರಾಮಸೇನೆಯವರು ಜನರಲ್ಲಿ ಕೋಮುಭಾವನೆ ಕೆರಳಿಸುವ ಉದ್ದೇಶದಿಂದ ಇದನ್ನು ದೊಡ್ಡ ವಿವಾದವಾಗಿಸುವ ಯತ್ನ ಮಾಡುತ್ತಿದ್ದಾರೆ. ಜನರಲ್ಲಿ ಭಯ ಹುಟ್ಟಿ ಬೇರೆ ಯಾರೂ ಅಲ್ಲಿಗೆ ಬಾರದಂತೆ ಮಾಡುವುದೇ ಅವರ ಉದ್ದೇಶವಾಗಿದೆ. ಜಿಲ್ಲಾಡಳಿತ ಇಂತಹ ಸುಳ್ಳು ಆರೋಪ ಮಾಡಿ ಕೋಮುಭಾವನೆ ಕೆರಳಿಸುವವರ ವಿರುದ್ಧ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶ್ರೀರಾಮಸೇನೆ ಕಾರ್ಯಕರ್ತರು ಕೇವಲ ಸುಳ್ಳು ಆರೋಪ ಮಾಡುತ್ತಿರುವುದಲ್ಲದೇ, ದರ್ಗಾದ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಜರಾಯಿ ಇಲಾಖೆ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಇದೇ ವೇಳೆ ಅವರು ದೂರಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕೃಷ್ಣಮೂರ್ತಿ, ಯೂಸುಫ್ ಹಾಜಿ, ಅಸ್ಮತ್, ಚಾಂದ್ ಪಾಷ, ಟಿ.ಎಲ್.ಗಣೇಶ್ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X