Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಕ್ಯಾರ್’ ಚಂಡಮಾರುತದಿಂದ ಮೀನುಗಾರಿಕೆಗೆ...

‘ಕ್ಯಾರ್’ ಚಂಡಮಾರುತದಿಂದ ಮೀನುಗಾರಿಕೆಗೆ ಹೊಡೆತ

ವಾರ್ತಾಭಾರತಿವಾರ್ತಾಭಾರತಿ26 Oct 2019 8:29 PM IST
share

ಮಂಗಳೂರು, ಅ.26: ಅರಬಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತದಿಂದ ಕಾಣಿಸಿಕೊಂಡ ‘ಕ್ಯಾರ್’ ಚಂಡಮಾರುತದ ಹೊಡೆತವು ಬಂದರು ದಕ್ಕೆಯಲ್ಲಿ ಮೀನುಗಾರಿಕೆಗೆ ಹೊಡೆತ ನೀಡಿದೆ. ಹವಾಮಾನ ಇಲಾಖೆಯು ಸಮುದ್ರಕ್ಕಿಳಿಯದಂತೆ ಮೀನುಗಾರರನ್ನು ಎಚ್ಚರಿಸಿದ ಕಾರಣ ದಕ್ಕೆಯಲ್ಲಿ ಭಾಗಶ: ಮೀನುಗಾರಿಕಾ ಚಟುವಟಿಕೆ ಸ್ಥಗಿತಗೊಂಡಿದೆ.

ರಜೆ ಮುಗಿದ ಬಳಿಕ ಮೀನುಗಾರಿಕೆಯ ಚಟುವಟಿಕೆ ಆರಂಭಗೊಂಡೊಡನೆ ಭಾರೀ ಮಳೆ, ಬಿರುಗಾಳಿ, ಮೀನಿನ ಕೊರತೆಯಿಂದಾಗಿ ಕರಾವಳಿಯ ಮೀನುಗಾರಿಕೆಯ ಮೇಲೆ ಭಾಗಶ: ಹೊಡೆತ ಬಿದ್ದಿತ್ತು. ಪರ್ಸಿನ್, ಯಾಂತ್ರೀಕೃತ ಬೋಟುಗಳ ಮಾಲಕರು ಭಾರೀ ನಷ್ಟವನ್ನು ಅನುಭವಿಸುತ್ತಿ ದ್ದಾರೆ. ಈ ಮಧ್ಯೆ ಕಳೆದ ಮೂರ್ನಾಲ್ಕು ದಿನದಿಂದ ‘ಕ್ಯಾರ್’ ಚಂಡಮಾರುತದ ಪರಿಣಾಮ ‘ರೆಡ್ ಅಲರ್ಟ್’ ಘೋಷಿಸಿರುವುದು ಮೀನುಗಾರಿಕೆಯ ಮೇಲೆ ದುಷ್ಪರಿಣಾಮ ಭೀರಿದೆ.

ಈಗಾಗಲೆ ಮೀನುಗಾರರು ತೂಾನ್, ಸಮುದ್ರದಲ್ಲಿ ಪ್ರಕ್ಷುಬ್ದ ಸ್ಥಿತಿ, ಹವಾಮಾನ ವೈಪರೀತ್ಯ ಇತ್ಯಾದಿಯಿಂದ ಕಂಗೆಟ್ಟಿದ್ದರು. ಆಗಸ್ಟ್ ಆರಂಭದಲ್ಲೇ ಕೋಟ್ಯಂತರ ರೂಪಾಯಿಯ ನಷ್ಟಕ್ಕೊಳಗಾಗಿದ್ದರು. ಇದರಿಂದ ಮೀನುಗಾರಿಕೆಯ ಮೇಲೆ ಹೂಡಿದ ಹಣ ವಾಪಸ್ ಪಡೆಯಲು ಮೀನುಗಾರರು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ‘ಕ್ಯಾರ್’ ಚಂಡಮಾರುತದ ಹೊಡೆದ ಒಂದೆಡೆಯಾದರೆ ಆರ್ಥಿಕ ಹೊಡೆತವು ಮೀನುಗಾರರನ್ನು ಕಂಗೆಡಿಸಿವೆ.

ಜಿಲ್ಲೆಯಲ್ಲಿ 1134 ಪರ್ಸೀನ್ ಮತ್ತು ಟ್ರಾಲ್ ಬೋಟ್, 1396 ಗಿಲ್‌ನೆಟ್ ಬೋಟ್, 531 ಸಾಂಪ್ರದಾಯಿಕ ಬೋಟ್‌ಗಳಿವೆ. ಆದಾಗ್ಯೂ ಈ ಬಾರಿಯ ದೀಪಾವಳಿಯು ಮೀನುಗಾರರ ಪಾಲಿಗೆ ಸಂಭ್ರಮ ತಂದುಕೊಟ್ಟಿಲ್ಲ. ಆಗಸ್ಟ್ 1ರಿಂದ ಮೀನುಗಾರಿಕೆ ಆರಂಭಗೊಂಡಿದ್ದರೂ ಹವಾಮಾನ ವೈಪರಿತ್ಯದಿಂದ ಮೀನುಗಾರಿಕೆ ಆಶಾದಾಯಕವಾಗಿರಲಿಲ್ಲ. ಹಾಗಾಗಿ ರಜೆಯಲ್ಲಿ ತೆರಳಿದ್ದ ಹೊರ ರಾಜ್ಯದ ಮೀನುಗಾರರು ಸಕಾಲಕ್ಕೆ ಕೆಲಸಕ್ಕೆ ಬಂದಿರಲಿಲ್ಲ. ಆ ಬಳಿಕ ಬಂದರೂ ಕೂಡ ಇದೀಗ ಮತ್ತೆ ಮೀನುಗಾರಿಕೆಯಲ್ಲಿ ಏರುಪೇರು ಆದ ಕಾರಣ ಹೊರರಾಜ್ಯದ ಬಹುತೇಕ ಮೀನುಗಾರರು ಮರಳಿ ತವರು ಸೇರಿದ್ದಾರೆ.

ಕಾರ್ಗಿಲ್ ಮೀನಿನ ಹಾವಳಿ: ಹವಾಮಾನ ವೈಪರಿತ್ಯದಿಂದ ಕಂಗೆಟ್ಟ ಮೀನುಗಾರರಿಗೆ ಇದೀಗ ಮತ್ತೊಂದು ಹೊಡೆತ ಎಂಬಂತೆ ನಿರುಪಯುಕ್ತ ಕಾರ್ಗಿಲ್ ಮೀನುಗಳು ಟನ್‌ಗಟ್ಟಲೇ ಸಿಗುತ್ತಿದೆ. ಈ ಮೀನಿಗೆ ಹೆಚ್ಚು ಬೇಡಿಕೆ ಇಲ್ಲ. ತಿನ್ನಲು ಯೋಗ್ಯವಲ್ಲದ ಕಾರ್ಗಿಲ್ ಮೀನುಗಳನ್ನು ಫಿಶ್‌ಮಿಲ್‌ಗಳಿಗೆ ಕೆ.ಜಿ.ಗೆ 10 ಅಥವಾ 12 ರೂ.ನಂತೆ ಮಾರಾಟ ಮಾಡಲಾಗುತ್ತಿದೆ. ಸುಮಾರು 15ರಿಂದ 20 ನಾಟಿಕಲ್ ದೂರದಲ್ಲಿ ಈ ಮೀನುಗಳು ಸಿಗುತ್ತಿವೆ. ಆಳಸಮುದ್ರ ಮೀನುಗಾರಿಕೆ ಹೋಗಿ ಬರಲು 5 ಲಕ್ಷ ರೂ. ಡಿಸೇಲ್ ಬೇಕಾಗುತ್ತಿದ್ದು, ಕಾರ್ಗಿಲ್ ಮೀನು ಸಿಗುತ್ತಿರುವುದರಿಂದ ಸಾಕಷ್ಟು ನಷ್ಟವಾಗುತ್ತಿದೆ ಎಂದು ಮೀನುಗಾರರು ಹೇಳುತ್ತಾರೆ.

ಮೀನು ದರ ಏರಿಕೆ: ಮೀನುಗಾರಿಕೆಯ ಋತು ಆರಂಭದಲ್ಲೇ ಸಮಸ್ಯೆಗಳ ಸರಮಾಲೆ ಎದುರಾದ ಕಾರಣ ಮೀನುಗಾರಿಕೆಗೆ ಅಪಾರ ಹೊಡೆತ ನೀಡಿದೆ. ಇದರ ಪರಿಣಾಮವು ಸ್ಥಳೀಯ ಮಾರುಕಟ್ಟೆಯಲ್ಲಿ ಮೀನು ದರದಲ್ಲಿ ಭಾರೀ ಏರಿಕೆ ಕಂಡು ಬಂದಿದೆ ಎಂದು ದ.ಕ.ಜಿಲ್ಲಾ ಗಿಲ್‌ನೆಟ್ ಮೀನುಗಾರರ ಸಂಘದ ಅಧ್ಯಕ್ಷ ಅಲಿಹಸನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X