Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2017ರಲ್ಲಿ ದೇಶದಲ್ಲಿ ಮಕ್ಕಳ ವಿರುದ್ಧ...

2017ರಲ್ಲಿ ದೇಶದಲ್ಲಿ ಮಕ್ಕಳ ವಿರುದ್ಧ ಪ್ರತಿ ದಿನ 350 ಅಪರಾಧಗಳು: ‘ಕ್ರೈ’ ವರದಿ

ವಾರ್ತಾಭಾರತಿವಾರ್ತಾಭಾರತಿ26 Oct 2019 8:38 PM IST
share
2017ರಲ್ಲಿ ದೇಶದಲ್ಲಿ ಮಕ್ಕಳ ವಿರುದ್ಧ ಪ್ರತಿ ದಿನ 350 ಅಪರಾಧಗಳು: ‘ಕ್ರೈ’ ವರದಿ

ಹೊಸದಿಲ್ಲಿ, ಅ.26: 2017ರಲ್ಲಿ ದೇಶದಲ್ಲಿ ಮಕ್ಕಳ ವಿರುದ್ಧ ಪ್ರತಿ ದಿನ 350 ಅಪರಾಧಗಳು ನಡೆದಿದ್ದವು ಮತ್ತು ಈ ವಿಷಯದಲ್ಲಿ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಅಗ್ರಸ್ಥಾನದಲ್ಲಿದ್ದವು ಎಂದು ಮಕ್ಕಳ ಹಕ್ಕುಗಳ ಸಂಸ್ಥೆ ‘ದಿ ಚೈಲ್ಡ್ ರೈಟ್ಸ್ ಆ್ಯಂಡ್ ಯು (ಕ್ರೈ)’ ಹೇಳಿದೆ.

2016ನೇ ಸಾಲಿಗೆ ಹೋಲಿಸಿದರೆ 2017ರಲ್ಲಿ ಮಕ್ಕಳ ವಿರುದ್ಧದ ಅಪರಾಧಗಳು ಶೇ.20ರಷ್ಟು ಏರಿಕೆಯಾಗಿದ್ದನ್ನು ಇತ್ತೀಚಿಗೆ ಬಿಡುಗಡೆಗೊಂಡಿರುವ ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕ (ಎನ್‌ಸಿಆರ್‌ಬಿ)ದ ದತ್ತಾಂಶಗಳು ಬಹಿರಂಗಗೊಳಿಸಿವೆ ಎಂದು ಕ್ರೈ ಹೇಳಿದೆ. ಈ ಅವಧಿಯಲ್ಲಿ ಭಾರತದಲ್ಲಿ ಒಟ್ಟಾರೆ ಅಪರಾಧಗಳಲ್ಲಿ ಶೇ.3.6ರಷ್ಟು ಏರಿಕೆಯಾಗಿದೆ.

2007-2017ರ ಅವಧಿಯಲ್ಲಿ ಮಕ್ಕಳ ವಿರುದ್ಧ ಅಪರಾಧ ದರವು ಶೇ.1.8ರಿಂದ ಶೇ.28.9ಕ್ಕೆ ಏರಿಕೆಯಾಗಿದೆ ಎನ್ನುವುದನ್ನು ಎನ್‌ಸಿಆರ್‌ಬಿಯ ದತ್ತಾಂಶಗಳು ಪ್ರಮುಖವಾಗಿ ಬಿಂಬಿಸಿವೆ ಎಂದು ಕ್ರೈ ತಿಳಿಸಿದೆ. ಎರಡು ವರ್ಷಗಳ ವಿರಾಮದ ಬಳಿಕ ಬಿಡುಗಡೆಗೊಂಡಿರುವ ಎನ್‌ಸಿಆರ್‌ಬಿ ದತ್ತಾಂಶಗಳಂತೆ 2016ರಲ್ಲಿ 1,06,958ರಷ್ಟಿದ್ದ ಮಕ್ಕಳ ವಿರುದ್ಧದ ಅಪರಾಧ ಪ್ರಕರಣಗಳ ಸಂಖ್ಯೆ 2017ರಲ್ಲಿ 1,29,032ಕ್ಕೇರಿದೆ. ಅಂದರೆ ದೇಶದಲ್ಲಿ ಪ್ರತಿದಿನ ಮಕ್ಕಳ ವಿರುದ್ಧ 350ಕ್ಕೂ ಹೆಚ್ಚು ಅಪರಾಧಗಳು ನಡೆದಿವೆ.

ಈ ಪೈಕಿ ಶೇ.14.8ರಷ್ಟು ಅಂದರೆ 19,000 ಪ್ರಕರಣಗಳು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಗಳಿಂದ ವರದಿಯಾಗಿವೆ. 2016 ಮತ್ತು 2017ರ ನಡುವೆ ಜಾರ್ಖಂಡ್ ಗರಿಷ್ಠ ಏರಿಕೆ (ಶೇ.73.9)ಯನ್ನು ಕಂಡಿದ್ದರೆ ಮಣಿಪುರದಲ್ಲಿ ಮಕ್ಕಳ ವಿರುದ್ಧದ ಅಪರಾಧ ಪ್ರಕರಣಗಳು ಶೇ.18.7ರಷ್ಟು ಕಡಿಮೆಯಾಗಿವೆ.

2016ಕ್ಕೆ ಹೋಲಿಸಿದರೆ 2017ರಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯರ ಖರೀದಿ ಪ್ರಕರಣಗಳಲ್ಲಿ ಶೇ.37ರಷ್ಟು ಏರಿಕೆ ದಾಖಲಾಗಿದೆ ಎಂದು ಕ್ರೈ ತಿಳಿಸಿದೆ. ಅಗ್ರ ಐದು ರಾಷ್ಟ್ರಗಳ ಸಾಲಿಗೆ ಜಾರ್ಖಂಡ್ ಹೊಸದಾಗಿ ಸೇರ್ಪಡೆಯಾಗಿದೆ. ಅಪ್ರಾಪ್ತ ವಯಸ್ಕ ಬಾಲಕಿಯರ ಖರೀದಿಯ ಶೇ.60ರಷ್ಟು ಪ್ರಕರಣಗಳು ಹರ್ಯಾಣ ಮತ್ತು ಅಸ್ಸಾಮ್‌ಗಳಿಂದ ವರದಿಯಾಗಿದೆ ಎಂದಿದೆ.

ತನ್ಮಧ್ಯೆ ಮಕ್ಕಳ ಅಪಹರಣ ಪ್ರಮುಖ ಅಪರಾಧವಾಗಿ ಮುಂದುವರಿದಿದ್ದು, 2017ರಲ್ಲಿ ಒಟ್ಟೂ ಪ್ರಕರಣಗಳಲ್ಲಿ ಅದರ ಪಾಲು ಶೇ.42 (54,163)ರಷ್ಟಿತ್ತು. ಇದರಲ್ಲಿ ಐದು ಅಗ್ರರಾಷ್ಟ್ರಗಳ ಸಾಲಿಗೆ ಬಿಹಾರ ಹೊಸದಾಗಿ ಸೇರ್ಪಡೆಗೊಂಡಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ಬಿಹಾರ ಐದನೇ ಸ್ಥಾನದಲ್ಲಿದೆ. ಆದರೆ 2016ಕ್ಕೆ ಹೋಲಿಸಿದರೆ ಇಂತಹ ಪ್ರಕರಣಗಳಲ್ಲಿ ಶೇ.1ರಷ್ಟು ಇಳಿಕೆ ಕಂಡುಬಂದಿದೆ ಎಂದು ಕ್ರೈ ತಿಳಿಸಿದೆ.

ಭಾರತದಲ್ಲಿ ಬಾಲ್ಯವಿವಾಹದ ಪಿಡುಗು ಮಕ್ಕಳ ಸಬಲೀಕರಣಕ್ಕೆ ಪ್ರಮುಖ ಅಡ್ಡಿಯಾಗಿದ್ದು, 2011ರ ಜನಗಣತಿಯಂತೆ ದೇಶದಲ್ಲಿ ಸುಮಾರು 12 ಮಿಲಿಯನ್ ವಿವಾಹಿತ ಮಕ್ಕಳಿದ್ದಾರೆ ಮತ್ತು ಈ ಪೈಕಿ ಶೇ.25ರಷ್ಟು ಬಾಲಕಿಯರಾಗಿದ್ದಾರೆ ಎಂದಿದೆ. 2017ರಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ 395 ಪ್ರಕರಣಗಳು ದಾಖಲಾಗಿವೆ.

2016ಕ್ಕೆ ಹೋಲಿಸಿದರೆ 2017ರಲ್ಲಿ ಪೊಕ್ಸೊ ಪ್ರಕರಣಗಳಲ್ಲಿಯೂ ಏರಿಕೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X