Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋವಾ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ...

ಗೋವಾ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಬೋಟುಗಳು: ಕೋಸ್ಟ್ ಗಾರ್ಡ್‌ನಿಂದ 18 ಮೀನುಗಾರರ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ26 Oct 2019 9:48 PM IST
share
ಗೋವಾ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಬೋಟುಗಳು: ಕೋಸ್ಟ್ ಗಾರ್ಡ್‌ನಿಂದ 18 ಮೀನುಗಾರರ ರಕ್ಷಣೆ

ಮಲ್ಪೆ, ಅ.26: ಕಾರವಾರ ಮತ್ತು ಗೋವಾದ ಗಡಿಯ ಸಮುದ್ರದಲ್ಲಿ ಬಿರು ಗಾಳಿಗೆ ಸಿಲುಕಿಕೊಂಡಿದ್ದ ಮಲ್ಪೆಯ ರಾಜ್ ಕಿರಣ್ ಮತ್ತು ಮಂಗಳೂರಿನ ಮಹೇಲಿ ಬೋಟ್ನಲ್ಲಿದ್ದ ಒಟ್ಟು 18 ಮೀನುಗಾರರನ್ನು ಕೋಸ್ಟ್ ಗಾರ್ಡ್ ನವರು ಇಂದು ಅಪರಾಹ್ನದ ಸುಮಾರಿಗೆ ರಕ್ಷಿಸಿದ್ದಾರೆ.

ಮಲ್ಪೆಯ ಆಶಾ ಮೆಂಡನ್ ಎಂಬವರ ರಾಜ್ ಕಿರಣ್ ಬೋಟು ಅ.16 ರಂದು ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದು, ಕಾರವಾರ ಸಮೀಪ ಮೀನುಗಾರಿಕೆ ನಡೆಸುವಾಗ ಅ.25ರಂದು ಬೆಳಗ್ಗೆ 8ಗಂಟೆ ಸುಮಾರಿಗೆ ಬೋಟಿನ ಸ್ಟೇರಿಂಗ್ ತುಂಡಾಯಿತ್ತೆನ್ನಲಾಗಿದೆ.
 ಇದರಿಂದ ಬೋಟು ಮತ್ತು ಅದರಲ್ಲಿದ್ದ ಒಂಭತ್ತು ಮಂದಿ ಮೀನುಗಾರರು ಅಪಾಯದಲ್ಲಿ ಸಿಲುಕಿಕೊಂಡಿದ್ದರು. ಈ ಬಗ್ಗೆ ಮಲ್ಪೆ ಕರಾವಳಿ ಕಾವಲು ಪಡೆ ಠಾಣೆಗೆ ಬಂದ ದೂರಿನಂತೆ ಮಂಗಳೂರು ಮತ್ತು ಕಾರವಾರ ಕೋಸ್್ಟ ಗಾರ್ಡ್‌ಗೆ ಮಾಹಿತಿ ರವಾನಿಸಲಾಗಿತ್ತು.

ಇದರ ಜೊತೆ ಮಂಗಳೂರಿನ ಮಹೇಲಿ ಬೋಟ್ ಕೂಡ ಅಪಾಯದಲ್ಲಿ ಸಿಲುಕಿಕೊಂಡಿದ್ದು, ಅದರಲ್ಲಿಯೂ 9 ಮಂದಿ ಮೀನುಗಾರರಿದ್ದರು. ಅ.26 ರಂದು ಅಪರಾಹ್ನ 2:30ರ ಸುಮಾರಿಗೆ ಎರಡೂ ಬೋಟಿನಲ್ಲಿದ್ದ 18 ಮಂದಿ ಮೀನುಗಾರರನ್ನು ಕೋರ್ಸ್ಟ್‌ಗಾರ್ಡ್‌ನವರು ರಕ್ಷಿಸಿ ಮುಂದಿನ ಕ್ರಮಕ್ಕಾಗಿ ಮಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಎಲ್ಲ ಮೀನುಗಾರರು ಸುರಕ್ಷಿತ ವಾಗಿದ್ದಾರೆ ಎಂದು ಕರಾವಳಿ ಕಾವಲು ಪಡೆಯ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ರಾಜ್ಯ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರವಾರ ಜಿಲ್ಲಾಧಿಕಾರಿಗೆ ತುರ್ತು ಸೂಚನೆ ನೀಡಿ, ರಾಜ್ಯ ಮುಖ್ಯ ಕಾರ್ಯ ದರ್ಶಿ ವಿಜಯ ಭಾಸ್ಕರ್ ಮೂಲಕ ಗೋವಾ ಸರಕಾರದ ಮುಖ್ಯ ಕಾರ್ಯ ದರ್ಶಿಯನ್ನು ಸಂಪರ್ಕಿಸಿದ್ದರು. ಸಂಕಷ್ಟದಲ್ಲಿರುವ ಮೀನುಗಾರರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಮತ್ತು ಅಗತ್ಯ ಬಿದ್ದರೆ ಹೆಲಿಕಾಪ್ಟರ್ ಸೇವೆ ಬಳಸಿ ಕೊಳ್ಳಲು ಸಚಿವರು ಸೂಚಿಸಿದ್ದರು ಎಂದು ತಿಳಿದುಬಂದಿದೆ.

ಅಪಾಯದಲ್ಲಿ ಮತ್ತೆ ಎರಡು ಬೋಟುಗಳು

ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮತ್ತೆ ಎರಡು ಬೋಟು ಗಳು ಸಮುದ್ರದ ಮಧ್ಯೆ ಸಿಲುಕಿಕೊಂಡಿದ್ದು, ಸಂಪರ್ಕವನ್ನು ಕಳೆದುಕೊಂಡಿವೆ.

ಮಲ್ಪೆಯ ಮಿಥುನ್ ಕುಮಾರ್ ಎಂಬವರ ಗಂಗಾ ಗಣೇಶ್ ಮತ್ತು ಮಲ್ಪೆಯ ಸಂತೋಷ್ ಕುಮಾರ್ ಎಂಬವರ ಸುವರ್ಣ ಜ್ಯೋತಿ ಎಂಬ ಎರಡು ಆಳ ಸಮುದ್ರ ಮೀನುಗಾರಿಕಾ ಬೋಟುಗಳು ಅ.19ರಂು ಮೀನು ಗಾರಿಕೆಗೆ ತೆರಳಿದ್ದವು.

ಸಮುದ್ರ ಮಧ್ಯೆ ಉಂಟಾಗಿರುವ ಭಾರೀ ಗಾಳಿಯಿಂದಾಗಿ ಈ ಎರಡು ಬೋಟುಗಳು ಸಂಪರ್ಕ ಕಳೆದುಕೊಂಡಿವೆ. ಈ ಎರಡು ಬೋಟುಗಳಲ್ಲಿ ತಲಾ ಆರರಂತೆ ಒಟ್ಟು 12 ಮೀನುಗಾರರಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಲ್ಪೆ ಕರಾವಳಿ ಕಾವಲು ಪಡೆಗೆ ನೀಡಿದ ದೂರಿನಂತೆ ಮಂಗಳೂರು ಹಾಗೂ ಕಾರವಾರ ಕೋಸ್ಟ್ ಗಾರ್ಡ್‌ನವರಿಗೆ ಮಾಹಿತಿ ರವಾನಿಸಲಾಗಿದೆ. ಈ ಎರಡು ಬೋಟುಗಳಿಗಾಗಿ ಈಗ ಭರದ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X