Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೃಷಿಮೇಳ-2019: ಜನರನ್ನು...

ಕೃಷಿಮೇಳ-2019: ಜನರನ್ನು ಆಕರ್ಷಿಸುತ್ತಿರುವ ಜಾನುವಾರುಗಳ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ26 Oct 2019 10:20 PM IST
share
ಕೃಷಿಮೇಳ-2019: ಜನರನ್ನು ಆಕರ್ಷಿಸುತ್ತಿರುವ ಜಾನುವಾರುಗಳ ಪ್ರದರ್ಶನ

ಬೆಂಗಳೂರು, ಅ.26: ಕೃಷಿಮೇಳ-2019 ಹಲವು ಆವೃತ್ತಿಗಳಲ್ಲಿ ಜನರನ್ನು ಸೆಳೆಯುತ್ತಿದ್ದು, ಇಲ್ಲಿನ ಜಾನುವಾರುಗಳು ಪ್ರಮುಖ ಆಕರ್ಷಣೆಯಾಗಿದೆ. ಹಸುಗಳು, ಹಂದಿಗಳು, ಕುರಿ, ಕೋಳಿ, ಮೊಲ ಸೇರಿದಂತೆ ಹಲವು ಜಾನುವಾರುಗಳು ರೈತರನ್ನು, ಕೃಷಿಕರನ್ನು ಸೆಳೆಯುತ್ತಿವೆ.

ಅರ್ಧ ಟನ್ ತೂಗುವ, ದಪ್ಪಚರ್ಮದ ಹಂದಿಗಳನ್ನು ನೋಡಲು ಜನ ಮುಗಿಬೀಳುತ್ತಿದ್ದಾರೆ. ಮತ್ತೊಂದು ಕಡೆ ಬೃಹದಾಕಾರದ ದೇವಣಿ ಹಸು, ಆಕರ್ಷಕ ಕೊಂಬುಗಳಿರುವ ಕಾಂಕ್ರೇಜ್ ದನ, ದಷ್ಟ ಪುಷ್ಟವಾದ ಡಾರ್ಪರ್ ತಳಿಯ ಕುರಿಗಳು, ಮುದ್ದು ಮುದ್ದಾದ ಮೊಲಗಳು, ಗುಂಡು ಗುಂಡಗಿನ ಬಂಡೂರು ತಳಿಯ ಕುರಿಗಳು ಜನರನ್ನು ಆಕರ್ಷಿಸುತ್ತಿವೆ.

ನಗರ ನಿವಾಸಿಗಳಿಗೆ ತರಹೇವಾರಿ ಜಾನುವಾರುಗಳನ್ನು ಕಣ್ತುಂಬಿಕೊಳ್ಳುವ ಅಪೂರ್ವ ಅವಕಾಶವನ್ನು ಕೃಷಿಮೇಳ ಕಲ್ಪಿಸಿದೆ. ಹೆದರುತ್ತಲೇ ದನಗಳ ಮೈಸವರುತ್ತಾ, ಅವುಗಳಿಗೆ ಹುಲ್ಲು ಹಾಕುತ್ತಾ, ಅವು ಕೊಂಬು ಅಲ್ಲಾಡಿಸಿದಾಗ ದೂರ ಓಡುತ್ತಾ, ಸೆಲ್ಫಿ ತೆಗೆದುಕೊಳ್ಳುತ್ತಾ ಜನ ಸಂಭ್ರಮಿಸಿದರು.

ಸ್ವರ್ಣಭೂಮಿ ಟ್ರಸ್ಟ್‌ ನಿಂದ ದೇವಣಿ, ಮಲೆನಾಡು ಗಿಡ್ಡ ಮುಂತಾದ ದೇಸಿ ತಳಿಯ ಹಸುಗಳನ್ನು ಪ್ರದರ್ಶನಕ್ಕಿಡಲಾಗಿದೆ. ಹಾಲು, ಗೋಮೂತ್ರ, ಸೆಗಣಿಯಿಂದ ತಯಾರಿಸಲಾದ ಉತ್ಪನ್ನಗಳು ಮಾರಾಟಕ್ಕಿಡಲಾಗಿದೆ. ಇದೇ ಟ್ರಸ್ಟ್‌ನಿಂದ ಗೋ ಅರ್ಕ, ಹಲ್ಲುಜ್ಜುವ ಪುಡಿ, ಊದು ಬತ್ತು, ಸೆಗಣಿ ಗಣಪತಿ, ವಿಭೂತಿ ಹೀಗೆ ಹಲವು ಸಾಮಗ್ರಿಗಳನ್ನು ಮಾರಾಟ ಮಾಡಲಾಗುತ್ತಿದೆ.

ಮಂಡ್ಯದ ಕಲ್ಲಹಳ್ಳಿಯ ಪಟೇಲ್ ಶಿವರುದ್ರೇಗೌಡರು ಹಳ್ಳಿಕಾರ್ ತಳಿಯ ಹಸುಗಳನ್ನು ಕೃಷಿಮೇಳಕ್ಕೆ ತಂದಿದ್ದಾರೆ. ಈ ತಳಿಯ ಹೋರಿಗಳು ಉಳುಮೆಗೆ ಹೇಳಿ ಮಾಡಿಸಿದವು. ಕೃಷಿಕನ ಮಾತನ್ನು ಬಲುಬೇಗ ಅರ್ಥ ಮಾಡಿಕೊಳ್ಳುತ್ತವೆ. ಸಣ್ಣ ಮುಖ, ಸಣ್ಣ ಬಾಲ, ಕೋಲುಮುಖ ಉದ್ದದೇಹದ ಈ ತಳಿ ರಾಜ್ಯದಲ್ಲಿ ವ್ಯಾಪಕವಾಗಿ ಕೃಷಿ ಕಾರ್ಯಕ್ಕೆ ಬಳಕೆಯಾಗುತ್ತಿವೆ. ಇದು ಜೋಡಿ, ಮೂರೂವರೆ ಲಕ್ಷದಷ್ಟು ಬೆಲೆಯಿದೆ.

ಸಾನಿಯನ್, ಶಾಮಿ, ಅವಾಸಿ, ಜಮುನಾಪಾರಿ ಮುಂತಾದ ಚಿತ್ತಾಕರ್ಷಕ ಕುರಿಗಳು ಹೆಚ್ಚು ಆಕರ್ಷಣೆಯಾಗಿದ್ದು, ಅತಿಹೆಚ್ಚು ಡಾರ್ಪರ್ ತಳಿಯ ಕುರಿ ಜನರನ್ನು ಸೆಳೆಯುತ್ತಿದ್ದವು. ರೈತರು ಕುರಿಗಳನ್ನು ಸಾಕುವ ಬಗೆ, ಎಷ್ಟು ತೂಕ ಬರುತ್ತದೆ, ಮರಿಗಳು ಎಲ್ಲಿ ಸಿಗುತ್ತವೆ ಎಂಬೆಲ್ಲಾ ಮಾಹಿತಿಯನ್ನು ಪಡೆದುಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X