Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಸ್ತುನಿಷ್ಠ ವರದಿಗಳಿಗಿಂತ ಸುಳ್ಳು...

ವಸ್ತುನಿಷ್ಠ ವರದಿಗಳಿಗಿಂತ ಸುಳ್ಳು ಸುದ್ದಿ ಮೇಲೆ ಜನರ ಗಮನ ಹೆಚ್ಚು: ಕುಮಾರಸ್ವಾಮಿ

‘ಇದೊಂಥರಾ ಆತ್ಮಕತೆ’ ಕೃತಿ ಬಿಡುಗಡೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 Oct 2019 11:08 PM IST
share
ವಸ್ತುನಿಷ್ಠ ವರದಿಗಳಿಗಿಂತ ಸುಳ್ಳು ಸುದ್ದಿ ಮೇಲೆ ಜನರ ಗಮನ ಹೆಚ್ಚು: ಕುಮಾರಸ್ವಾಮಿ

ಬೆಂಗಳೂರು, ಅ.26: ಪ್ರಸ್ತುತ ದಿನಗಳಲ್ಲಿ ವಸ್ತುನಿಷ್ಠ ವರದಿಗಳು ಕಣ್ಮರೆಯಾಗುತ್ತಿರುವ ವಾತಾವರಣ ಸೃಷ್ಟಿಯಾಗಿದೆ. ವಸ್ತುನಿಷ್ಠ ವರದಿಗಳಿಗಿಂತ ಸುಳ್ಳು ಸುದ್ದಿಗಳ ಮೇಲೆ ಜನರ ಗಮನ ಹೆಚ್ಚಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದರು.

ನಗರದ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಬಹುರೂಪಿ ಪುಸ್ತಕ ಪ್ರಕಾಶನ ವತಿಯಿಂದ ಆಯೋಜಿಸಿದ್ದ ಪತ್ರಕರ್ತ ಆರ್.ಟಿ. ವಿಠ್ಠಲಮೂರ್ತಿ ಅವರ ‘ಇದೊಂಥರ ಆತ್ಮಕಥೆ’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮ ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗಿದೆ. ಸಮಾಜದಲ್ಲಿ ಪತ್ರಿಕೋದ್ಯಮದ ಜವಾಬ್ದಾರಿ ಹೆಚ್ಚಾಗಿದ್ದು, ಸತ್ಯ, ನಿಷ್ಠೆಯುಳ್ಳ ವರದಿಗಳನ್ನು ಮಾಡುವ ಮೂಲಕ ಸುಸ್ಥಿರ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಜನತೆಗೆ ವಾಸ್ತವದ ಸುದ್ದಿಗಳನ್ನು ಬಿತ್ತರಿಸಬೇಕಾಗಿದೆ ಎಂದು ಹೇಳಿದರು.

ಪತ್ರಿಕೋದ್ಯಮ ವ್ಯಾಪಾರೀಕರಣವಾಗುತ್ತಿದೆ. ಮೌಲ್ಯಾಧಾರಿತ ಸತ್ಯ ದೂರವಾಗುತ್ತಿದೆ. ಈ ಹಿಂದೆ ಇದ್ದಂತ ಮಾಧ್ಯಮದ ಗೌರವ, ಆಸಕ್ತಿ, ಭಯ, ಭಕ್ತಿ ಇಂದು ಉಳಿದಿಲ್ಲ. ಮಾಧ್ಯಮದವರು ಕಾವಲುಗಾರರಾಗಿ ಕೆಲಸ ಮಾಡಬೇಕಾಗಿದೆ ಎಂದು ಸಲಹೆ ನೀಡಿದ ಅವರು, ಇವತ್ತಿನ ಜನಾಂಗದಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಹೀಗಾಗಿ ಓದುವ ಹವ್ಯಾಸವನ್ನು ಹೆಚ್ಚಿಸಿಕೊಳ್ಳಬೇಕು. ವಿಶೇಷವಾಗಿ ರಾಜಕಾರಣಿಗಳು ದಿನ ಪತ್ರಿಕೆ ಓದಬೇಕು ಎಂದರು. ಮಹಾತ್ಮಾ ಗಾಂಧೀಜಿ ಅವರು ಸ್ರಾತಂತ್ರಕ್ಕಾಗಿ ಹೋರಾಡಿ ಸ್ವದೇಶಿ ವಸ್ತುಗಳನ್ನು ಉತ್ಪಾದಿಸುವ ಬಗ್ಗೆ ದೊಡ್ಡ ಹೋರಾಟವನ್ನೇ ಮಾಡಿದರು. ಆದರೆ ಇಂದಿನ ಪ್ರಧಾನಿಯವರು ಸ್ವದೇಶಿ ವಸ್ತುಗಳ ಉಪಯೋಗದ ಬಗ್ಗೆ ಮಾತನಾಡುತ್ತಿದ್ದಾರೆ. ಹಾಲನ್ನು ಬೇರೆ ರಾಷ್ಟ್ರದಿಂದ ಪಡೆಯಲು ಒಪ್ಪಂದ ಮಾಡಲು ಮುಂದಾಗುತ್ತಿರುವುದಕ್ಕೆ ದೇಶದೆಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಇದರಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಹಾಗಾಗಿ ದೇಶದ ಉತ್ಪನ್ನದಲ್ಲಿ ರೈತರಿಗೆ ಅತಿಹೆಚ್ಚು ಆದಾಯ ತರುತ್ತಿರುವ ಹಾಲು ಉತ್ಪಾದನೆಯ ಬಗ್ಗೆ ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು ಎಂದು ಹೇಳಿದರು.

ಲೇಖಕ ಆರ್.ಟಿ. ವಿಠ್ಠಲಮೂರ್ತಿ ಮಾತನಾಡಿ, ಕಳೆದ 30 ವರ್ಷದ ಹಿಂದೆ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಾಗ ವಿಧಾನಸೌಧಕ್ಕೆ ಹೋಗುವಂತೆ ಮಾಡಿದ್ದು ಪತ್ರಕರ್ತರು ಹಾಗೂ ಪತ್ರಿಕೋದ್ಯಮ, ಸುಮಾರು 12 ಜನ ಮುಖ್ಯಮಂತ್ರಿಗಳನ್ನು ನೋಡುವ ಭಾಗ್ಯ ನನ್ನದಾಗಿದೆ. ನಾನು ನನ್ನ ವೃತ್ತಿಯಲ್ಲಿ ತಪ್ಪುಮಾಡಿಲ್ಲ ಅಂತಲ್ಲ. ತಪ್ಪುಮಾಡಿಕೊಂಡೆ ಬಂದಿದ್ದೇನೆ. ಆದರೆ, ತಪ್ಪುಮಾಡಿದಾಗಲೆ ನನಗೆ ತಿದ್ದಿಕೊಳ್ಳಲು ಸಾಧ್ಯವಾಗಿದೆ ಎಂದರು.

ಸಾಹಿತಿ ಡಾ.ವಿಜಯಾ ಮಾತನಾಡಿ, ಪತ್ರಕರ್ತರಿಗೆ ಶತ್ರುಗಳು ಇರಬೇಕು. ಅಗಲೇ ಅವರು ನಿಜವಾದ ಪತ್ರಕರ್ತರಾಗಿ ಗುರುತಿಸಿಕೊಳ್ಳಲು ಸಾಧ್ಯ. ವಾಸ್ತವ ಅಂಶಗಳನ್ನು ಪತ್ರಕರ್ತರು ಎತ್ತಿ ಹಿಡಿಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಹುರೂಪಿ ಪ್ರಕಾಶನದ ಜಿ.ಎನ್. ಮೋಹನ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X