Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಗ್ರರಿಂದ 2018ರಲ್ಲಿ 5 ವರ್ಷಗಳಲ್ಲೇ...

ಉಗ್ರರಿಂದ 2018ರಲ್ಲಿ 5 ವರ್ಷಗಳಲ್ಲೇ ಅತ್ಯಧಿಕ ಗಡಿ ನುಸುಳುವ ಯತ್ನ

ವಾರ್ತಾಭಾರತಿವಾರ್ತಾಭಾರತಿ26 Oct 2019 11:16 PM IST
share
ಉಗ್ರರಿಂದ 2018ರಲ್ಲಿ 5 ವರ್ಷಗಳಲ್ಲೇ ಅತ್ಯಧಿಕ ಗಡಿ ನುಸುಳುವ ಯತ್ನ

ಹೊಸದಿಲ್ಲಿ, ಅ. 26: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು 2018ರಲ್ಲಿ ಗಡಿ ಮೂಲಕ ಜಮ್ಮು ಕಾಶ್ಮೀರಕ್ಕೆ ನುಸುಳಲು 328 ಬಾರಿ ಪ್ರಯತ್ನಿಸಿದೆ. ಈ ಪ್ರಯತ್ನದಲ್ಲಿ 143 ಬಾರಿ ಸಫಲವಾಗಿದೆ. 2018ರಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ಐದು ವರ್ಷಗಳಲ್ಲೇ ಅತ್ಯಧಿಕ ಎಂದು ಗೃಹ ಸಚಿವಾಲಯದ ವಾರ್ಷಿಕ ವರದಿ ತಿಳಿಸಿದೆ.

ಶುಕ್ರವಾರ ಲಭ್ಯವಾಗಿರುವ ಗೃಹ ಸಚಿವಾಲಯ 2018-19ರ ಈ ವರದಿ, ಕಳೆದ ವರ್ಷ ಜಮ್ಮು ಹಾಗೂ ಕಾಶ್ಮೀರದಲ್ಲಿ 257 ಭಯೋತ್ಪಾದಕರು ಹತರಾಗಿದ್ದಾರೆ ಹಾಗೂ 91 ಯೋಧರು ಹುತಾತ್ಮರಾಗಿದ್ದಾರೆ. 39 ನಾಗರಿಕರು ಮೃತಪಟ್ಟಿದ್ದಾರೆ. ಇದು ಕಳೆದ ಐದು ವರ್ಷಗಳಲ್ಲೇ ಅತ್ಯಧಿಕ ಸಾವು ನೋವು ಎಂದು ತಿಳಿಸಿದೆ.

ವರದಿಯ ಪ್ರಕಾರ 2018ರಲ್ಲಿ ಗಡಿಯ ಮೂಲಕ ಜಮ್ಮು ಹಾಗೂ ಕಾಶ್ಮೀರಕ್ಕೆ ನುಸುಳಲು ಪಾಕಿಸ್ತಾನ ಮೂಲದ ಭಯೋತ್ಪಾದಕರು 328 ಪ್ರಯತ್ನಗಳನ್ನು ಮಾಡಿದ್ದಾರೆ. ಇದರಲ್ಲಿ 143ರಲ್ಲಿ ಯಶಸ್ವಿಯಾಗಿದ್ದಾರೆ.

2017ರಲ್ಲಿ ಭಯೋತ್ಪಾದಕರು 419 ಒಳ ನುಸುಳುವಿಕೆಯ ಪ್ರಯತ್ನ ನಡೆಸಿದ್ದಾರೆ. ಇದರಲ್ಲಿ 136ರಲ್ಲಿ ಯಶಸ್ವಿಯಾಗಿದ್ದಾರೆ. 2016ರಲ್ಲಿ ಭಯೋತ್ಪಾದಕರು 371 ಒಳ ನುಸುಳುವ ಪ್ರಯತ್ನ ನಡೆಸಿದ್ದಾರೆ. ಇದರಲ್ಲಿ 119ರಲ್ಲಿ ಯಶಸ್ವಿಯಾಗಿದ್ದಾರೆ ಎಂದು ವರದಿ ಹೇಳಿದೆ.

2015ರಲ್ಲಿ ಭಯೋತ್ಪಾದಕರು ಒಟ್ಟು 121 ಒಳ ನುಸುಳುವ ಪ್ರಯತ್ನ ನಡೆಸಿದ್ದಾರೆ. ಇದರಲ್ಲಿ 33ರಲ್ಲಿ ಯಶಸ್ವಿಯಾಗಿದ್ದಾರೆ. 2014ರಲ್ಲಿ ಭಯೋತ್ಪಾದಕರು 222 ಒಳನುನುಸುಳುವ ಪ್ರಯತ್ನ ನಡೆಸಿದ್ದಾರೆ. ಇದರಲ್ಲಿ 65ರಲ್ಲಿ ಯಶಸ್ವಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.

‘‘2018ರಲ್ಲಿ ಜಮ್ಮು ಹಾಗೂ ಕಾಶ್ಮೀರದಲ್ಲಿ ನಡೆದ 614 ಭಯೋತ್ಪಾದಕ ದಾಳಿಯಲ್ಲಿ ಒಟ್ಟು 257 ಭಯೋತ್ಪಾದಕರು ಹತರಾಗಿದ್ದಾರೆ, 91 ಯೋಧರು ಹುತಾತ್ಮರಾಗಿದ್ದಾರೆ ಹಾಗೂ 39 ನಾಗರಿಕರು ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆ.

ಜಮ್ಮು ಹಾಗೂ ಕಾಶ್ಮೀರದಲ್ಲಿ 2018ರಲ್ಲಿ ನಡೆದ ಭಯೋತ್ಪಾದಕ ಘಟನೆಗಳು ಹಾಗೂ ಯೋಧರು, ಉಗ್ರರ ಸಾವು ನೋವು ಕಳೆದ ಐದು ವರ್ಷಗಳಲ್ಲೇ ಅತ್ಯಧಿಕ ಎಂದು ಅದು ಹೇಳಿದೆ.

ರಾಜ್ಯದಲ್ಲಿ 2017ರಲ್ಲಿ ನಡೆದ 342 ಭಯೋತ್ಪಾದಕ ಘಟನೆಗಳಲ್ಲಿ 213 ಭಯೋತ್ಪಾದಕರು ಹತರಾಗಿದ್ದಾರೆ, 80 ಯೋಧರು ಹುತಾತ್ಮರಾಗಿದ್ದಾರೆ ಹಾಗೂ 40 ನಾಗರಿಕರು ಸಾವನ್ನಪ್ಪಿದ್ದಾರೆ.

 2016ರಲ್ಲಿ 322 ಭಯೋತ್ಪಾದಕ ಘಟನೆಗಳಲ್ಲಿ ಒಟ್ಟು 150 ಭಯೋತ್ಪಾದಕರು ಹತರಾಗಿದ್ದಾರೆ, 82 ಯೋಧರು ಹುತಾತ್ಮರಾಗಿದ್ದಾರೆ ಹಾಗೂ 15 ನಾಗರಿಕರು ಸಾವನ್ನಪ್ಪಿದ್ದಾರೆ. 2015ರಲ್ಲಿ 208 ಭಯೋತ್ಪಾದಕ ಘಟನೆಗಳಲ್ಲಿ 108 ಭಯೋತ್ಪಾದಕರು ಹತರಾಗಿದ್ದಾರೆ, 39 ಯೋಧರು ಹುತಾತ್ಮರಾಗಿದ್ದಾರೆ ಹಾಗೂ 17 ನಾಗರಿಕರು ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆ.

 2014ರಲ್ಲಿ 222 ಭಯೋತ್ಪಾದಕ ಘಟನೆಗಳಲ್ಲಿ ಒಟ್ಟು 110 ಭಯೋತ್ಪಾದಕರು ಹತರಾಗಿದ್ದಾರೆ, 47 ಯೋಧರು ಹುತಾತ್ಮರಾಗಿದ್ದಾರೆ ಹಾಗೂ 28 ನಾಗರಿಕರು ಮೃತಪಟ್ಟಿದ್ದಾರೆ ಎಂದು ಸಚಿವಾಲಯದ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X