Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕಿಸ್ತಾನ ವಿರುದ್ಧ ಡೇವಿಸ್ ಕಪ್:...

ಪಾಕಿಸ್ತಾನ ವಿರುದ್ಧ ಡೇವಿಸ್ ಕಪ್: ಲಿಯಾಂಡರ್ ಪೇಸ್ ಆಡುವ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ26 Oct 2019 11:33 PM IST
share
ಪಾಕಿಸ್ತಾನ ವಿರುದ್ಧ ಡೇವಿಸ್ ಕಪ್: ಲಿಯಾಂಡರ್ ಪೇಸ್ ಆಡುವ ಸಾಧ್ಯತೆ

ಹೊಸದಿಲ್ಲಿ, ಅ.26: ಆಟವಾಡದ ನಾಯಕ ಮಹೇಶ್ ಭೂಪತಿ ಹಾಗೂ ಪ್ರಮುಖ ಡಬಲ್ಸ್ ಆಟಗಾರ ರೋಹನ್ ಬೋಪಣ್ಣ ಭದ್ರತೆಯ ಭೀತಿಯಿಂದಾಗಿ ಇಸ್ಲಾಮಾಬಾದ್‌ಗೆ ಪ್ರಯಾಣಿಸಲು ಹಿಂದೇಟು ಹಾಕಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಟೆನಿಸ್ ಸಂಸ್ಥೆ(ಎಐಟಿಎ)ಹಳೆ ಹುಲಿ ಲಿಯಾಂಡರ್ ಪೇಸ್ ಮೊರೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ.

ಡೇವಿಸ್‌ಕಪ್ ಏಶ್ಯ-ಒಸಿಯಾನಿಯಾ ಗ್ರೂಪ್-1 ಪಂದ್ಯ ನವೆಂಬರ್ 29-30ರಂದು ಇಸ್ಲಾಮಾಬಾದ್‌ನ ಹುಲ್ಲುಹಾಸಿನ ಅಂಗಳದಲ್ಲಿ ನಡೆಯಲಿದೆ. ಡೇವಿಸ್ ಕಪ್ ಪಂದ್ಯವನ್ನು ಪಾಕ್‌ನಿಂದ ಹೊರಗೆ ತಟಸ್ಥ ತಾಣಕ್ಕೆ ಸ್ಥಳಾಂತರಿಸುವಂತೆ ಎಐಟಿಎ, ಅಂತರ್‌ರಾಷ್ಟ್ರೀಯ ಟೆನಿಸ್ ಒಕ್ಕೂಟಕ್ಕೆ(ಐಟಿಎಫ್)ವಿನಂತಿಸಿಕೊಂಡಿತ್ತು. ಐಟಿಎಫ್ ಈ ಕುರಿತಂತೆ ನ.4ರಂದು ತನ್ನ ಅಂತಿಮ ನಿರ್ಧಾರ ಪ್ರಕಟಿಸಲಿದೆ.

ವೀಸಾ ಪ್ರಕ್ರಿಯೆ ನಡೆಸಲು ಪಾಕಿಸ್ತಾನ ಟೆನಿಸ್ ಒಕ್ಕೂಟಕ್ಕೆ(ಪಿಟಿಎಫ್)ಎಐಟಿಎ ಸಲ್ಲಿಸಿರುವ ಪಟ್ಟಿಯಲ್ಲಿ ಪೇಸ್ ಹೆಸರನ್ನು ಕಳುಹಿಸಿಕೊಟ್ಟಿದೆ. 46ರ ಹರೆಯದ ಪೇಸ್ ಡೇವಿಸ್ ಕಪ್ ಪಂದ್ಯದಲ್ಲಿ ಆಡುವ ಇಂಗಿತ ವ್ಯಕ್ತಪಡಿಸಿದ್ದರು. ಪೇಸ್ 2018ರ ಎಪ್ರಿಲ್‌ನಲ್ಲಿ ಕೊನೆಯ ಬಾರಿ ಡೇವಿಸ್ ಕಪ್ ಪಂದ್ಯದಲ್ಲಿ ಆಡಿದ್ದರು.

ಭಾರತ ಟೆನಿಸ್ ತಂಡದಲ್ಲಿರುವ ಇತರ ಆಟಗಾರರೆಂದರೆ: ಸಾಕೇತ್ ಮೈನೇನಿ, ಅರ್ಜುನ್ ಕಧೆ, ವಿಜಯ್ ಸುಂದರ್ ಪ್ರಶಾಂತ್, ಎನ್.ಶ್ರೀರಾಮ್ ಬಾಲಾಜಿ, ಸಿದ್ದಾರ್ಥ್ ರಾವತ್ ಹಾಗೂ ಮನೀಶ್ ಸುರೇಶ್ ಕುಮಾರ್.

ಕೋಚ್ ಸಯ್ಯದ್ ಝೀಶಾನ್ ಅಲಿ, ಮ್ಯಾನೇಜರ್ ಸುಂದರ್ ನಾರಾಯಣ ಐಯ್ಯರ್ ಹಾಗೂ ಫಿಸಿಯೊ ಆನಂದ್ ಕುಮಾರ್‌ರನ್ನು ಸಹಾಯಕ ಸಿಬ್ಬಂದಿಯಾಗಿ ನೇಮಿಸಲಾಗಿದೆ.

ಭೂಪತಿ ಹಾಗೂ ಬೋಪಣ್ಣರಲ್ಲದೆ ಪಾಕ್ ಪ್ರವಾಸಕ್ಕೆ ಹಿಂದೇಟು ಹಾಕಿರುವ ಆಟಗಾರರೆಂದರೆ: ಅಗ್ರ ಸಿಂಗಲ್ಸ್ ಆಟಗಾರ ರಾಮಕುಮಾರ್ ರಾಮನಾಥನ್, ಸುಮಿತ್ ನಗಾಲ್ ಹಾಗೂ ಸಸಿ ಕುಮಾರ್ ಮುಕುಂದ್.

 ಭಾರತದ ಶ್ರೇಷ್ಠ ರ್ಯಾಂಕಿನ ಸಿಂಗಲ್ಸ್ ಆಟಗಾರ ಪ್ರಜ್ಞೇಶ್ ಗುಣೇಶ್ವರನ್ ಪಂದ್ಯಕ್ಕೆ ಲಭ್ಯವಿಲ್ಲ. ಪಂದ್ಯದ ಮೊದಲ ದಿನವಾದ ನ.29ರಂದು ಪ್ರಜ್ಞೇಶ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.

ಪೇಸ್ ಡಬಲ್ಸ್ ಆಟಗಾರನಾಗಿ ಕಣಕ್ಕಿಳಿಯುವ ಜೊತೆಗೆ ಭೂಪತಿ ಅನುಪಸ್ಥಿತಿಯಲ್ಲಿ ನಾಯಕನ ಜವಾಬ್ದಾರಿಯನ್ನೂ ವಹಿಸಿಕೊಳ್ಳಲಿದ್ದಾರೆಂದು ತಿಳಿದುಬಂದಿದೆ.

ನ.4ರಂದು ಐಟಿಎಫ್ ನಿರ್ಧಾರ ಹೊರಬಂದ ಬಳಿಕವಷ್ಟೇ ಆಟಗಾರರ ಪ್ರವೇಶಕ್ಕೆ ಸಂಬಂಧಿಸಿ ನಿರ್ಧಾರಕೈಗೊಳ್ಳಲಾಗುವುದು ಎಂದು ಎಐಟಿಎ ಕಾರ್ಯದರ್ಶಿ ಹೀರೊನ್ಮಯ್ ಚಟರ್ಜಿ ತಿಳಿಸಿದ್ದಾರೆ.

ಒಂದು ವೇಳೆ ಐಟಿಎಫ್, ಎಐಟಿಎ ಬೇಡಿಕೆಯ ಮೇರೆಗೆ ಪಂದ್ಯವನ್ನು ಇಸ್ಲಾಮಾಬಾದ್‌ನಿಂದ ತಟಸ್ಥ ತಾಣಕ್ಕೆ ಸ್ಥಳಾಂತರಗೊಳಿಸಿದರೆ,ಭೂಪತಿ ಹಾಗೂ ಬೋಪಣ್ಣರ ಜೊತೆಗೆ ಇತರ ಸಿಂಗಲ್ಸ್ ಆಟಗಾರರು ಆಟಗಾರರ ಪಟ್ಟಿಗೆ ಮರು ಸೇರ್ಪಡೆಯಾಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X