ಐಎನ್ ಎಕ್ಸ್ ಮೀಡಿಯಾ ಹಗರಣ: ಕರ್ನಾಟಕದ ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥ ಅನೂಪ್ ಕೆ ಪೂಜಾರಿ ರಾಜೀನಾಮೆ

ಹೊಸದಿಲ್ಲಿ, ಅ.27: ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ತಮ್ಮ ವಿರುದ್ಧ ಸಿಬಿಐ ಜಾರ್ಜ್ ಶೀಟ್ ಸಲ್ಲಿಸಿದ ಬೆನ್ನಲ್ಲೆ ಕರ್ನಾಟಕದ ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ಚೇರ್ಮೆನ್ ಅನೂಪ್ ಕೆ ಪೂಜಾರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಅನೂಪ್ ಕೆ ಪೂಜಾರಿ ಈ ಹಿಂದೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಜನವರಿ 2016ರಲ್ಲಿ ನಿವೃತ್ತರಾಗಿದ್ದರು.
ತನ್ನ ವಿರುದ್ಧ ಸಿಬಿಐ ಜಾರ್ಜ್ ಶೀಟ್ ಸಲ್ಲಿಸಿದ ವಿಚಾರ ಮಾಧ್ಯಮಗಳ ಮೂಲಕ ಗೊತ್ತಾಯಿತು. ಈ ಕಾರಣದಿಂದಾಗಿ ತಾನು ರಾಜೀನಾಮೆ ನೀಡಿರುವುದಾಗಿ ಅನೂಪ್ ಕೆ ಪೂಜಾರಿ ತಿಳಿಸಿದ್ದಾರೆ.
ಅನೂಪ್ ಕೆ ಪೂಜಾರಿ , ನೀತಿ ಅಯೋಗದ ಮಾಜಿ ಸಿಇಒ ಸಿಂಧುಶ್ರೀ ಖುಲ್ಲಾರ್ ಸೇರಿದಂತೆ ಆರು ಮಂದಿ ಅಧಿಕಾರಿಗಳ ವಿರುದ್ಧ ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ.
Next Story





