Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲದ ಈ ಯುವಕನ ಹಾಡಿಗೆ 80 ಲಕ್ಷಕ್ಕೂ...

ಉಳ್ಳಾಲದ ಈ ಯುವಕನ ಹಾಡಿಗೆ 80 ಲಕ್ಷಕ್ಕೂ ಅಧಿಕ ಮಂದಿ ಫಿದಾ !

ವಾರ್ತಾಭಾರತಿವಾರ್ತಾಭಾರತಿ27 Oct 2019 8:18 PM IST
share
ಉಳ್ಳಾಲದ ಈ ಯುವಕನ ಹಾಡಿಗೆ 80 ಲಕ್ಷಕ್ಕೂ ಅಧಿಕ ಮಂದಿ ಫಿದಾ !

ಮಂಗಳೂರು, ಅ. 27: ತಿಂಗಳ ಹಿಂದೆ ಉಳ್ಳಾಲದ ಈ ಯುವಕ ಹಾಡಿದ ಹಾಡಿಗೆ ಇಷ್ಟೊಂದು ಜನರು ಫಿದಾ ಆದಾರು ಎಂದು ಸ್ವತಃ ಈ ಯುವಕ ಭಾವಿಸಿರಲಿಲ್ಲ. ಆದರೆ, ದಿನದಿಂದ ದಿನಕ್ಕೆ ಈ ಹಾಡಿಗೆ ಜನರು ಮರಳಾಗುತ್ತಿದ್ದು, ರವಿವಾರ ಮಧ್ಯಾಹ್ನದವರೆಗೆ ಇದನ್ನು 80 ಲಕ್ಷಕ್ಕೂ ಅಧಿಕ ಮಂದಿ ಯೂ ಟ್ಯೂಬ್‌ನಲ್ಲಿ ವೀಕ್ಷಿಸಿದ್ದು, ಒಂದುವರೆ ಲಕ್ಷಕ್ಕೂ ಅಧಿಕ ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಂದಹಾಗೆ, ಉಳ್ಳಾಲ ಸುಭಾಷ್‌ನಗರದ ಅರ್ಫಾಝ್ ಉಳ್ಳಾಲ್ ಎಂಬ 21ರ ಹರೆಯದ ಯುವಕನೇ ಸಂಗೀತಪ್ರೇಮಿಗಳ ಮನ ಗೆದ್ದಾತ. ಅರ್ಜಿತ್ ಸಿಂಗ್‌ರ ಬಢೆ ಪಚ್‌ತಾವೊಗೆ ಹಾಡಿನ ಕನ್ನಡ ವರ್ಷನ್ ‘ಮೋಸಗಾತಿಯೇ’ ಹಾಡನ್ನು ಅರ್ಫಾಝ್ ಉಳ್ಳಾಲ್ ಹಾಡಿದ್ದರು. ಮೊದಲು ಅಷ್ಟೇನೂ ಪ್ರತಿಕ್ರಿಯೆ ವ್ಯಕ್ತವಾಗದಿದ್ದರೂ ತಿಂಗಳಾಗುತ್ತಲೇ ಈ ಹಾಡಿಗೆ ಯೂ ಟ್ಯೂಬ್‌ನಲ್ಲಿ ಭರ್ಜರಿ ಪ್ರತಿಕ್ರಿಯೆ ಸಿಗತೊಡಗಿತು.

ಉಳ್ಳಾಲದ ಭಾರತ್ ಹೈಸ್ಕೂಲ್‌ನಲ್ಲಿ ದ್ವಿತೀಯ ಪಿಯು ಮುಗಿಸಿ ಇದೀಗ ಬೆಂಗಳೂರಿಗೆ ಬದುಕು ಅರಸಿಕೊಂಡು ಹೋಗಿರುವ ಅರ್ಫಾಝ್‌ಗೆ ಬಾಲ್ಯದಿಂದಲೇ ಹಾಡುವುದು ಅಂದರೆ ತುಂಬಾ ಇಷ್ಟ. ಹಾಗೇ ಬೆಂಗಳೂರಿನಲ್ಲಿ ಕನ್ನಡದ ಹಾಡುಗಳನ್ನು ಹಾಡುವ ಅವಕಾಶಗಳನ್ನು ಬಳಸಿಕೊಂಡ ಅರ್ಫಾಝ್ ಕಳೆದ ಎರಡು ವರ್ಷಗಳಿಂದ ಯೂಟ್ಯೂಬ್‌ನಲ್ಲಿ ಸ್ನೇಹಿತರ ಜೊತೆಗೂಡಿ ಹಾಡುಗಳ ವೀಡಿಯೊವನ್ನು ಅಪ್ಲೋಡ್ ಮಾಡುತ್ತಿದ್ದರು. ಅದರಂತೆ ಸುಮಾರು 25ಕ್ಕೂ ಅಧಿಕ ಆಲ್ಬಂ ಸಾಂಗ್‌ಗಳನ್ನು ಅಪ್ಲೋಡ್ ಮಾಡಿದ್ದಾರೆ. ಆದರೆ, ‘ಮೋಸಗಾತಿಯೇ’ ಹಾಡಿಗೆ ಸಿಕ್ಕ ಸ್ಪಂದನೆ ಬೇರೆ ಯಾವ ಹಾಡಿಗೂ ಸಿಕ್ಕಿಲ್ಲ ಎಂದು ಅರ್ಫಾಝ್ ಹೇಳುತ್ತಾರೆ. ಸಾಧು ಕೋಕಿಲರಂತಹ ಕಲಾವಿದರು ತನ್ನ ಹಾಡನ್ನು ಮೆಚ್ಚಿರುವುದರಿಂದ ಅರ್ಫಾಝ್‌ರ ಉತ್ಸಾಹ ಹೆಚ್ಚಿದೆ.

ಬೆಂಗಳೂರಿನಲ್ಲಿದ್ದರೂ ಕೂಡ ಮಂಗಳೂರಿಗೆ ಆಗಾಗ ಬಂದು ಹಾಡು ರೆಕಾರ್ಡಿಂಗ್ ಮಾಡುತ್ತಿದ್ದರು. ಅಂದರೆ ಅಡ್ಯಾರ್ ಕಣ್ಣೂರಿನ ಕ್ಲಾಸಿಕ್ ಮೀಡಿಯಾದಲ್ಲಿ ಹಾಡನ್ನು ರೆಕಾರ್ಡಿಂಗ್ ಮಾಡುತ್ತಿದ್ದರು. ಬಳಿಕ ಯೂ ಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದರು. ಈಗಾಗಲೆ 80 ಲಕ್ಷಕ್ಕೂ ಅಧಿಕ ಜನರ ಮೆಚ್ಚುಗೆಗೆ ಪಾತ್ರರಾಗಿರುವ ‘ಮೋಸಗಾತಿಯೇ’ ಹಾಡಿಗೆ ಕಣ್ಣೂರಿನ ಶಬಾಝ್ ಸಾಹಿತ್ಯ ರಚಿಸಿದ್ದರು. ನಿತಿನ್ ಶಂಕರಘಟ್ಟ ಇದನ್ನು ನಿರ್ಮಿಸಿದ್ದರು.

ಬ್ರೇಕ್ ನೀಡಿದ ಬಢೆ ಪಚ್‌ತಾವೊ

‘ಬಢೆ ಪಚ್‌ತಾವೋಗೆ’ ಹಾಡು ತನಗೆ ಹೊಸ ದಾರಿಯನ್ನೇ ತೆರೆದುಕೊಟ್ಟಿದೆ. ತನ್ನ ನಿರೀಕ್ಷೆಗೂ ಮೀರಿ ಈ ಹಾಡಿಗೆ ಸ್ಪಂದನೆ ಸಿಕ್ಕಿದೆ. ಅದರಂತೆ ಉಪ್ಪಾರಿ ರಮೇಶ್ ನಿರ್ದೇಶನದ ‘ನಾನ್ ಒಂಥರಾ’ ಸಿನೆಮಾದ ಹಾಡಿನ ರೆಕಾರ್ಡಿಂಗ್ ಮುಗಿಸಿದ್ದೇನೆ. ಸಿನೆಮಾ ರಂಗದಿಂದ ಆಹ್ವಾನಗಳು ಬರುತ್ತಿವೆ. ಇದರಿಂದ ತುಂಬಾ ಖುಷಿಯಾಗುತ್ತಿದೆ ಎಂದು ಅರ್ಫಾಝ್ ಉಳ್ಳಾಲ್ ‘ವಾರ್ತಾಭಾರತಿ’ಗೆ ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X