Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಚೆಂಬಳಕಿನ ಕವಿಯ ಪರಿಮಳವ ಮೊಗೆದು...

ಚೆಂಬಳಕಿನ ಕವಿಯ ಪರಿಮಳವ ಮೊಗೆದು...

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ29 Oct 2019 12:00 AM IST
share
ಚೆಂಬಳಕಿನ ಕವಿಯ ಪರಿಮಳವ ಮೊಗೆದು...

ಡಾ. ಜಿ. ಎಂ. ಹೆಗಡೆ ಅವರ ‘ಚೆಂಬೆಳಕಿನ ಕವಿ-ಚೆನ್ನವೀರ ಕಣವಿ’ ಕೃತಿ, ಕಣವಿಯವರ ಬದುಕು ಸಾಹಿತ್ಯದ ಮೇಲೆ ಸಮಗ್ರವಾಗಿ ಬೆಳಕು ಚೆಲ್ಲುವ ಕೃತಿ.

‘ಅಲ್ಲಿಂದ, ಇಲ್ಲಿಂದ ಎಲ್ಲಿಂದಲೋ ಬಂದ ಬೆಳಕುಗಳನ್ನು ಪ್ರಸ್ನತೆಯ ಪಾಕದಲ್ಲಿ ಹರಳುಗೊಳಿಸುತ್ತ ಸಾನೆಟ್ಟುಗಳ ಗುಡಿ ಕಟ್ಟಿ ಒಳಗೊಂದು ಪ್ರೀತಿಯ ಹಣತೆ ಹಚ್ಚಿಡುವ...’ ಕಣವಿಯ ಕಲೆಗಾರಿಕೆಯನ್ನು ಬಿಡಿಸಿಡುವ ಪ್ರಯತ್ನವೂ ಈ ಕೃತಿಯಲ್ಲಿ ನಡೆದಿದೆ. ಮುಖ್ಯವಾಗಿ ಅವರ ಕಾವ್ಯಾಧ್ಯಯನದ ಕಡೆಗೆ ಬರಹಗಳು ಗಮನ ನೀಡುತ್ತವೆ.

ಈ ಕೃತಿಯಲ್ಲಿ ಒಟ್ಟು ಏಳು ಅಧ್ಯಾಯಗಳಿವೆ. ಮೊದಲನೆಯದು, ಚೆನ್ನವೀರ ಕಣವಿ ಜೀವನಪಥದ ಕಡೆಗೆ ಬೆಳಕು ಚೆಲ್ಲುತ್ತದೆ. ಆ ಬಳಿಕ ಕಣವಿ ಕಾವ್ಯ ಭಂಡಾರ , ಕಣವಿ ಅವರ ಸುನೀತಗಳು, ಕಣವಿಯವರ ಕಾವ್ಯ ಮೀಮಾಂಸೆ, ಕಣವಿಯವರ ಆಯ್ದ ಕವಿತೆಯ ಸಂಗ್ರಹಗಳು ಮತ್ತು ಸಮಗ್ರ ಕಾವ್ಯ, ಪ್ರಜ್ಞಾನೇತ್ರದ ಬೆಳಕಿನಲ್ಲಿ ಕಣವಿ ವ್ಯಕ್ತಿತ್ವ ಹೀಗೆ ಬೇರೆ ಬೇರೆ ತಲೆಬರಹಗಳ ಮೂಲಕ ಕಣವಿ ಕಾವ್ಯಗಳನ್ನು ವಿಶ್ಲೇಷಿಸಲಾಗಿದೆ.

 ‘‘ಕಣವಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯದಲ್ಲಿ ನಾವು ಭಿನ್ನತೆ ಬಿರುಕು ಕಾಣುವುದು ಸಾಧ್ಯವಿಲ್ಲ. ‘ಅಲ್ಲ ಸಲ್ಲದ ವಿಷಮ ವಿಪರೀತ ಭಾವನೆಯ ವಿಷಗಾಳಿ ಎನ್ನ ಬಳಿ ಸುಳಿಯದಿರಲಿ’ ಎಂದು ಆಶಿಸಿದ ಕಣವಿ ಅವರಲ್ಲಿ ವಿಶ್ವಭಾವಾತ್ಮಕ ಧೋರಣೆಯಿದೆ. ನಯ-ವಿನಯಗಳು ಕಣವಿಯವರ ಸ್ವಭಾವದಲ್ಲಿ ಮೇಳೈಸಿವೆ. ಸಿಟ್ಟು, ಕ್ರೌರ್ಯ, ರೋಷ, ಆಕ್ರೋಶಗಳಿಂದ ದೂರವಿದ್ದು ಮನಸ್ಸಿನ ಸದಸದ್ವಿವೇಕವನ್ನು ಸದಾ ಜಾಗೃತವಾಗಿಟ್ಟುಕೊಳ್ಳುವ ಗುಣ ಚೆನ್ನವೀರ ಕಣವಿಯವರ ಚೇತನದ ವೈಶಿಷ್ಟವಾಗಿದೆ’’ ಎಂದು ಲೇಖಕರು ಅಭಿಪ್ರಾಯಪಡುತ್ತಾರೆ. ಸಾಂಸ್ಕೃತಿಕವಾದ ರಾಜಕಾರಣದಿಂದ ದೂರವಿದ್ದುಕೊಂಡು ಜಾತ್ಯತೀತ ವೌಲ್ಯಗಳನ್ನು ಸಾಹಿತ್ಯ ಮತ್ತು ಬದುಕಿನಲ್ಲಿ ಅಳವಡಿಸಿಕೊಂಡು ಕಣವಿಯವರು ಹೆಜ್ಜೆಗಳನ್ನು ಹಾಕಿ, ಕಿರಿಯರಿಗೆ ಮಾದರಿಯಾಗಿದ್ದಾರೆ. ಸಾಹಿತ್ಯವಲಯದಲ್ಲಿ ಅಜಾತ ಶತ್ರುವಾಗಿರುವ ಕಣವಿಯವರು ಸಂಘಟನೆ, ಸಂವಾದ, ಬೌದ್ಧಿಕ ಪ್ರಾಮಾಣಿಕತೆಯಿಂದ ಅವಿನಾಭಾವ ಸಂಬಂಧವನ್ನು ನಿರ್ಮಿಸಿದ್ದಾರೆ ಎಂದು ಕೃತಿ ಅಭಿಪ್ರಾಯಪಡುತ್ತದೆ. ಹೊಸ ತಲೆಮಾರಿನ ಓದುಗರಿಗೆ ಕಣವಿ ಕಾವ್ಯ ಜಗತ್ತಿಗೆ ಪ್ರವೇಶಿಸಲು ಈ ಕೃತಿ ಬಹಳಷ್ಟು ನೆರವನ್ನು ನೀಡುತ್ತದೆ. ಸಾಹಿತ್ಯದ ವಿದ್ಯಾರ್ಥಿಗಳು ಅತ್ಯವಶ್ಯವಾಗಿ ಹೊಂದಿರಬೇಕಾದ ಪುಸ್ತಕ ಇದು. ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಈ ಕೃತಿಯನ್ನು ಹೊರತಂದಿದೆ. 128 ಪುಟಗಳ ಈ ಕೃತಿಯ ಮುಖಬೆಲೆ 120 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X