ಕೊಣಾಜೆ: ಬೈಕ್-ಬಸ್ ಢಿಕ್ಕಿ; ಯುವಕ ಮೃತ್ಯು
ಕೊಣಾಜೆ: ವಿಶ್ವವಿದ್ಯಾಲಯದ ಸಮೀಪ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಮೃತಪಟ್ಟ ಯುವಕನನ್ನು ಪಜೀರು ಗ್ರಾಮದ ಬಾಕಿಮಾರು ನಿವಾಸಿ ನಾರಾಯಣ ಪೂಜಾರಿ ಎಂಬವರ ಪುತ್ರ ಸಂತೋಷ್ (26) ಎಂದು ಗುರುತಿಸಲಾಗಿದೆ.
ಮಂಗಳೂರಿನಲ್ಲಿ ಇಲೆಕ್ಟ್ರಿಕಲ್ ಕೆಲಸದಲ್ಲಿದ್ದ ಈತ ಸೋಮವಾರ ರಾತ್ರಿ ಹೋಗುತ್ತಿದ್ದಾಗ ಬಸ್ ಢಿಕ್ಕಿ ಹೊಡೆದಿರುವುದಾಗಿ ದೂರಲಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story