Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ.ಆಫ್ರಿಕಾ ಗೆಲುವಿನ ಪಥಕ್ಕೆ ಮರಳುವ...

ದ.ಆಫ್ರಿಕಾ ಗೆಲುವಿನ ಪಥಕ್ಕೆ ಮರಳುವ ವಿಶ್ವಾಸವಿದೆ: ಹಾಶಿಮ್ ಅಮ್ಲ

ವಾರ್ತಾಭಾರತಿವಾರ್ತಾಭಾರತಿ29 Oct 2019 11:07 PM IST
share
ದ.ಆಫ್ರಿಕಾ ಗೆಲುವಿನ ಪಥಕ್ಕೆ ಮರಳುವ ವಿಶ್ವಾಸವಿದೆ: ಹಾಶಿಮ್ ಅಮ್ಲ

ಜೊಹಾನ್ಸ್‌ಬರ್ಗ್, ಅ.29: ಸೋಲು-ಗೆಲುವು ಆಟದಲ್ಲಿ ಸಾಮಾನ್ಯ. ಏರಿಳಿತ ಎಲ್ಲಾ ತಂಡಕ್ಕೂ ಅನ್ವಯಿಸುತ್ತದೆ. ಸೋಲನ್ನು ಸವಾಲಾಗಿ ಸ್ವೀಕರಿಸಿ ಗೆಲುವಿನ ಪಥಕ್ಕೆ ಮರಳಬೇಕು. ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಖಂಡಿತಾ ಗೆಲುವಿನ ಪಥಕ್ಕೆ ಮರಳಲಿದೆ ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ನಿವೃತ್ತ ಆಟಗಾರ ಹಾಶಿಮ್ ಅಮ್ಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಭಾರತದೆದುರು ನಡೆದಿದ್ದ ಸರಣಿಯಲ್ಲಿ ದ. ಆಫ್ರಿಕಾ ತಂಡದ ಕಳಪೆ ನಿರ್ವಹಣೆಯನ್ನು ಉಲ್ಲೇಖಿಸಿದ ಅವರು, ಈ ಸರಣಿಯಲ್ಲಿ ತಂಡದ ಪ್ರದರ್ಶನ ತುಂಬಾ ಕೆಟ್ಟದಾಗಿತ್ತು. ಯಾವುದೇ ಸರಣಿಯಿರಲಿ, ಪ್ರವಾಸೀ ತಂಡದೆದುರು ಆತಿಥೇಯರಿಗೆ ಸ್ವಲ್ಪ ಮಟ್ಟಿನ ಮೇಲುಗೈ ಇರುತ್ತದೆ. ಆದರೆ ಭಾರತದ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ ಆಟಗಾರರು ಯಾವುದೇ ಪ್ರತಿರೋಧ ತೋರದೆ ಶರಣಾಗಿರುವುದು ನಿರಾಶೆಯನ್ನುಂಟು ಮಾಡಿದೆ ಎಂದಿದ್ದಾರೆ.

ಭಾರತದೆದುರಿನ ಸರಣಿಯಂತೆ, ಒಂದು ಕೆಟ್ಟ ಸರಣಿಯ ಬಳಿಕ ತಂಡದ ವಿರುದ್ಧ ಎಲ್ಲೆಡೆಯಿಂದ ಟೀಕಾಸ್ತ್ರದ ಸುರಿಮಳೆಯಾಗುತ್ತದೆ. ತಂಡದ ವೈಫಲ್ಯಕ್ಕೆ ಕಾರಣವೇನು ಎಂಬ ಪ್ರಶ್ನೆ ಮೂಡುತ್ತದೆ. ಆದರೆ ಸರಣಿ ಸೋತಾಗ ಆ ಸೋಲಿನ ಹೊಣೆಯನ್ನು ಹೊರಬೇಕಾಗುತ್ತದೆ. ನಾವು ಚೆನ್ನಾಗಿ ಆಡಿಲ್ಲ ಎಂದು ಹೇಳಬಹುದು. ಒಂದು ವೇಳೆ ಗೆದ್ದರೆ, ನಾವು ಉತ್ತಮ ಪ್ರದರ್ಶನ ನೀಡಿದ್ದು ಈ ಪ್ರದರ್ಶನವನ್ನು ಸುಧಾರಿಸಿಕೊಳ್ಳುವತ್ತ ಗಮನ ಹರಿಸುತ್ತೇವೆ ಎನ್ನಬಹುದು. ತಂಡದ ಪ್ರದರ್ಶನಕ್ಕೆ ಕಾರಣವನ್ನು ಪ್ರಮಾಣೀಕರಿಸುವುದು ಸುಲಭವಲ್ಲ. ಆದರೆ, ದಕ್ಷಿಣ ಆಫ್ರಿಕಾ ತಂಡ ಗೆಲುವಿನ ಪಥಕ್ಕೆ ಮರಳಲು ಹೆಚ್ಚಿನ ಸಮಯ ಬೇಕಿಲ್ಲ ಎಂಬ ವಿಶ್ವಾಸವಂತೂ ತಮ್ಮಲ್ಲಿದೆ ಎಂದು ಅಮ್ಲ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ತಂಡದ ಕೋಚ್ ಹುದ್ದೆಯಲ್ಲಿ ಆಸಕ್ತಿ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸದ ಅಮ್ಲ, ಭಾರತದ ಈಗಿನ ತಂಡ ಹಾಗೂ ಈ ಹಿಂದಿನ ತಂಡಗಳ ನಡುವೆ ಹೋಲಿಕೆ ಮಾಡುವುದು ಸರಿಯಲ್ಲ ಎಂದರು. ಸಚಿನ್, ದ್ರಾವಿಡ್, ಲಕ್ಷ್ಮಣ್, ಗಂಗುಲಿ, ಸೆಹ್ವಾಗ್ ಅವರಿದ್ದ ತಂಡದ ವಿರುದ್ಧದ ಸರಣಿಯಲ್ಲೂ ನಾನು ದಕ್ಷಿಣ ಆಫ್ರಿಕಾ ಪರ ಆಡಿದ್ದೇನೆ. ಅದು ಪ್ರತಿಭಾವಂತರ ತಂಡವಾಗಿತ್ತು. ಅನಿಲ್ ಕುಂಬ್ಳೆ, ಹರ್ಭಜನ್‌ರಂತಹ ಅದ್ಭುತ ಬೌಲರ್‌ಗಳಿದ್ದರು. ಈಗಿನ ವಿರಾಟ್ ಕೊಹ್ಲಿ ನಾಯಕತ್ವದ ತಂಡದ ವಿರುದ್ಧವೂ ಆಡಿದ್ದೇನೆ. ಈಗಿನ ಭಾರತ ತಂಡ ಉತ್ತಮವಾಗಿ ಆಡುತ್ತಿದ್ದು ಸಮತೋಲಿತ ತಂಡವಾಗಿದೆ. ವಿಶ್ವದ ಯಾವುದೇ ತಂಡವನ್ನು ಸೋಲಿಸಲು ಸಮರ್ಥವಾಗಿದೆ. ಆದರೆ ಯಾವುದೇ ತಂಡವನ್ನು ಇನ್ನೊಂದು ತಂಡದೊಂದಿಗೆ ಹೋಲಿಸಲಾಗದು ಎಂಬುದು ತನ್ನ ಅಭಿಪ್ರಾಯ ಎಂದರು. ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಕಳಪೆ ಪ್ರದರ್ಶನದ ಬಳಿಕ 36 ವರ್ಷದ ಅಮ್ಲ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರು. ಇದೀಗ ಇಂಗ್ಲೆಂಡಿನಲ್ಲಿ ಸರ್ರೇ ತಂಡದ ಪರ ಕೌಂಟಿ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ನಿರೀಕ್ಷೆಯಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X