Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹಗಲು ರಾತ್ರಿ ಟೆಸ್ಟ್ ಪಂದ್ಯಕ್ಕೆ ಪಿಂಕ್...

ಹಗಲು ರಾತ್ರಿ ಟೆಸ್ಟ್ ಪಂದ್ಯಕ್ಕೆ ಪಿಂಕ್ ಚೆಂಡಿನ ಸಮಸ್ಯೆ

ವಾರ್ತಾಭಾರತಿವಾರ್ತಾಭಾರತಿ29 Oct 2019 11:13 PM IST
share
ಹಗಲು ರಾತ್ರಿ ಟೆಸ್ಟ್ ಪಂದ್ಯಕ್ಕೆ ಪಿಂಕ್ ಚೆಂಡಿನ ಸಮಸ್ಯೆ

ಹೊಸದಿಲ್ಲಿ, ಅ.29: ಭಾರತ- ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಒಂದು ಟೆಸ್ಟ್ ಪಂದ್ಯ ಕೋಲ್ಕತಾದ ಈಡನ್‌ ಗಾರ್ಡನ್ಸ್‌ನಲ್ಲಿ ಹಗಲು ರಾತ್ರಿ ನಡೆಯುವ ಬಗ್ಗೆ ಚರ್ಚೆ ಆರಂಭವಾಗುತ್ತಿರುವಂತೆಯೇ, ಹಗಲು ರಾತ್ರಿಯ ಟೆಸ್ಟ್ ಪಂದ್ಯದಲ್ಲಿ ಬಳಸುವ ಗುಣಮಟ್ಟದ ಪಿಂಕ್ ಚೆಂಡು(ಗುಲಾಬಿ ಬಣ್ಣದ ಚೆಂಡು) ಪೂರೈಸುವುದು ಹೇಗೆ ಎಂಬ ಸಮಸ್ಯೆ ಬಿಸಿಸಿಐಗೆ ಎದುರಾಗಿದೆ.

ಹಗಲು ರಾತ್ರಿಯ ಟೆಸ್ಟ್ ಪಂದ್ಯದಲ್ಲಿ ಕೆಂಪು ಚೆಂಡಿನ ಬದಲು ಗುಲಾಬಿ ಬಣ್ಣದ ಚೆಂಡು ಬಳಸಲಾಗುತ್ತದೆ. ಆಟಗಾರರ ಅಭ್ಯಾಸಕ್ಕೆ ಮತ್ತು ಪಂದ್ಯ ನಡೆಯಲು ಕನಿಷ್ಠ 24 ಗುಲಾಬಿ ಬಣ್ಣದ ಚೆಂಡುಗಳ ಅಗತ್ಯವಿದೆ. ಜೊತೆಗೆ, ಕೆಲವೊಮ್ಮೆ ಚೆಂಡು ಬದಲಾಯಿಸುವ ಅಗತ್ಯಬರುತ್ತದೆ. ಆಗ ಅಷ್ಟೇ ಬಳಕೆಯಾದ ಚೆಂಡುಗಳನ್ನು ನೀಡಬೇಕಾಗುತ್ತದೆ.(ಚೆಂಡಿನ ಬಗ್ಗೆ ಆಟಗಾರರು ಆಕ್ಷೇಪಿಸಿದಾಗ ಚೆಂಡನ್ನು ಬದಲಾಯಿಸಲು ಅವಕಾಶವಿದೆ.

ಆದರೆ ಆಗ ಹೊಸ ಚೆಂಡನ್ನು ಒದಗಿಸುವಂತಿಲ್ಲ. ಬದಲಾಯಿಸಲಾಗುವ ಚೆಂಡಿನಷ್ಟೇ ಬಳಕೆಯಾಗಿರುವ ಮತ್ತೊಂದು ಚೆಂಡನ್ನು ಒದಗಿಸಬೇಕಾಗುತ್ತದೆ). ಇಂತಹ ಕೆಲವು ಸಮಸ್ಯೆಗಳಿವೆ ಎಂದು ಬಿಸಿಸಿಐ ಅಧಿಕಾರಿ ಹೇಳಿದ್ದಾರೆ. ಭಾರತದಲ್ಲಿ ಟೆಸ್ಟ್ ಪಂದ್ಯಗಳಿಗೆ ಎಸ್‌ಜಿ ಸಂಸ್ಥೆಯ ಚೆಂಡನ್ನು ಬಳಸಲಾಗುತ್ತಿದ್ದು, ಈ ಚೆಂಡುಗಳ ಕಳಪೆ ಗುಣಮಟ್ಟದ ಬಗ್ಗೆ ಹಲವಾರು ಬಾರಿ ದೂರು ಕೇಳಿಬಂದಿದೆ. 2016ರಲ್ಲಿ ಭಾರತದ ದೇಶೀಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೊತ್ತ ಮೊದಲ ಬಾರಿಗೆ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಪ್ರಯೋಗಾತ್ಮಕ ನೆಲೆಯಲ್ಲಿ ಗುಲಾಬಿ ಬಣ್ಣದ ಚೆಂಡುಗಳನ್ನು ಬಳಕೆ ಮಾಡಲಾಗಿತ್ತು.

ಆದರೆ ಈ ಪ್ರಯೋಗ ವಿಫಲವಾಗಿತ್ತು. ಭಾರತ ಪಾಲ್ಗೊಳ್ಳುವ ಪ್ರಪ್ರಥಮ ಹಗಲು ರಾತ್ರಿ ಟೆಸ್ಟ್ ಪಂದ್ಯ, ಬಾಂಗ್ಲಾದೇಶದೆದುರು ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ನವೆಂಬರ್ 22ರಿಂದ ನಡೆಯುವ ಬಗ್ಗೆ ವಿಶ್ವಾಸವಿದೆ ಎಂದು ಬಿಸಿಸಿಐ ನೂತನ ಅಧ್ಯಕ್ಷ ಸೌರವ್ ಗಂಗುಲಿ ಹೇಳಿದ್ದಾರೆ. ಬಾಂಗ್ಲಾದೇಶ ತಂಡ ಹಾಗೂ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಇದಕ್ಕೆ ಒಪ್ಪುವ ವಿಶ್ವಾಸವಿದೆ. ಟೆಸ್ಟ್ ಕ್ರಿಕೆಟ್‌ನ ಬಗ್ಗೆ ಆಸಕ್ತಿ ಹೆಚ್ಚಬೇಕಿದ್ದರೆ ಇಂತಹ ನವೀನತೆಯ ಅಗತ್ಯವಿದೆ ಎಂದು ಗಂಗುಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X