Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯೂರೋಪ್ ಸಂಸದರಿಗೆ ಪ್ರಧಾನಿಯನ್ನು ಭೇಟಿ...

ಯೂರೋಪ್ ಸಂಸದರಿಗೆ ಪ್ರಧಾನಿಯನ್ನು ಭೇಟಿ ಮಾಡಿಸಿದ ಮದಿ ಶರ್ಮಾ ಎಂಬ ಮಹಿಳೆ ಯಾರು?: ಕಾಂಗ್ರೆಸ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ30 Oct 2019 7:52 PM IST
share
ಯೂರೋಪ್ ಸಂಸದರಿಗೆ ಪ್ರಧಾನಿಯನ್ನು ಭೇಟಿ ಮಾಡಿಸಿದ ಮದಿ ಶರ್ಮಾ ಎಂಬ ಮಹಿಳೆ ಯಾರು?: ಕಾಂಗ್ರೆಸ್ ಪ್ರಶ್ನೆ

 ಹೊಸದಿಲ್ಲಿ,ಅ.30: ಐರೋಪ್ಯ ಒಕ್ಕೂಟದ ಸಂಸದರ ಅನಧಿಕೃತ ನಿಯೋಗದ ಜಮ್ಮು-ಕಾಶ್ಮೀರ ಭೇಟಿಗೆ ಅವಕಾಶ ನೀಡಿದ್ದಕ್ಕಾಗಿ ನರೇಂದ್ರ ಮೋದಿ ಸರಕಾರದ ವಿರುದ್ಧ ಬುಧವಾರ ತೀವ್ರ ದಾಳಿಯನ್ನು ನಡೆಸಿರುವ ಕಾಂಗ್ರೆಸ್, ಕಾಶ್ಮೀರವು ಆಂತರಿಕ ವಿಷಯವಾಗಿದೆ ಎನ್ನುವ ದೇಶದ ನೀತಿಯನ್ನು ಉಲ್ಲಂಘಿಸುವ ಮತ್ತು ಅದರಿಂದ ವಿಮುಖಗೊಳ್ಳುವ ಮೂಲಕ ಸರಕಾರವು ಮಹಾಪಾಪವನ್ನೆಸಗಿದೆ ಎಂದು ಹೇಳಿದೆ.

 ನಿಯೋಗದ ಭೇಟಿಯು ಅಂತರರಾಷ್ಟ್ರೀಯ 'ಬಿಸಿನೆಸ್ ಬ್ರೋಕರ್ ' ಸಂಘಟಿಸಿರುವ ಬಿಜೆಪಿ ಸರಕಾರದ ಅಪಕ್ವ, ಕೆಟ್ಟ ಸಲಹೆಯ ಮತ್ತು ಕೆಟ್ಟ ಪರಿಕಲ್ಪನೆಯ ಪ್ರಚಾರ ತಂತ್ರವಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಅವರು, ಮದಿ ಶರ್ಮಾ ಎಂಬ ಮಹಿಳೆಯನ್ನು ಪ್ರಸ್ತಾಪಿಸಿ ಹೇಳಿದರು. ಮೋದಿಯವರೊಂದಿಗೆ 'ಪ್ರತಿಷ್ಠಿತ ವಿಐಪಿ ಭೇಟಿ ' ಮತ್ತು ಕಾಶ್ಮೀರ ಪ್ರವಾಸದ ಭರವಸೆಯೊಂದಿಗೆ ಶರ್ಮಾ ಐರೋಪ್ಯ ಒಕ್ಕೂಟದ ಸಂಸದರಿಗೆ ಪತ್ರವನ್ನು ಬರೆದಿದ್ದರು.

   ಇಂಗ್ಲೆಂಡಿನ ಲಿಬರಲ್ ಡೆಮಾಕ್ರಟಿಕ್ ಪಕ್ಷದ ಸಂಸದ ಬಿಲ್ ನ್ಯೂಟನ್ ಡನ್ ಹೇಳಿರುವಂತೆ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ನಾನ್-ಅಲೈನ್ಡ್ ಸ್ಟಡೀಸ್ ನಿಯೋಗದ ಪ್ರವಾಸವನ್ನು ಆಯೋಜಿಸಿದೆ. ಅದು ತನ್ನನ್ನು ಅಲಿಪ್ತ ಚಳವಳಿಯ ಚಿಂತನ ಚಿಲುಮೆ ಎಂದು ಬಣ್ಣಿಸಿಕೊಳ್ಳುತ್ತಿದೆ. ದಿ ವಿಮೆನ್ಸ್ ಇಕನಾಮಿಕ್ ಆ್ಯಂಡ್ ಸೋಷಿಯಲ್ ಥಿಂಕ್ ಟ್ಯಾಂಕ್ ಕೂಡ ಪ್ರವಾಸವನ್ನು ಆಯೋಜಿಸುವಲ್ಲಿ ಭಾಗಿಯಾಗಿತ್ತು ಎನ್ನಲಾಗಿದೆ.

 ಕಾಶ್ಮೀರದಲ್ಲಿಯ ವಸ್ತುಸ್ಥಿತಿಯ ಮೌಲ್ಯಮಾಪನಕ್ಕೆ ಮೂರನೇ ಪಕ್ಷವನ್ನು,ಅದೂ ಅಪರಿಚಿತ ಚಿಂತನ ಚಿಲುಮೆಯ ಮೂಲಕ ತಂದು ಮೋದಿ ಸರಕಾರವು ಘೋರ ಅಪಚಾರವನ್ನೆಸಗಿದೆ. ತನ್ಮೂಲಕ ಜಮ್ಮು-ಕಾಶ್ಮೀರ ಕುರಿತು ಭಾರತದ ಸಾರ್ವಭೌಮ ಹಕ್ಕುಗಳನ್ನು ಬಹಿರಂಗವಾಗಿ ಅವಹೇಳನಗೊಳಿಸಿದೆ ಎಂದು ಸುರ್ಜೆವಾಲಾ ಹೇಳಿದರು.

 ಮದಿ ಶರ್ಮಾ ಯಾರು ಎನ್ನುವುದನ್ನು ವಿವರಿಸುವಂತೆ ಮೋದಿ ಅವರನ್ನು ಆಗ್ರಹಿಸಿದ ಸುರ್ಜೆವಾಲಾ,ಸರಕಾರವು ಆಕೆಗೆ ರಾಜತಾಂತ್ರಿಕತೆಯ ಹೊರಗುತ್ತಿಗೆಯನ್ನು ನೀಡಿದೆ ಎಂದು ಆರೋಪಿಸಿದರು. “ಬಿಜೆಪಿಗೂ ‘ದಿ ವಿಮೆನ್ಸ್ ಇಕನಾಮಿಕ್ ಆ್ಯಂಡ್ ಸೋಷಿಯಲ್ ಥಿಂಕ್ ಟ್ಯಾಂಕ್ ಮತ್ತು ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ನಾನ್-ಅಲೈನ್ಡ್ ಸ್ಟಡೀಸ್‌ಗೂ ಏನು ಸಂಬಂಧ?, ಮದಿ ಶರ್ಮಾ ಅವರು ಏಕೆ ಮತ್ತು ಯಾವ ಅಧಿಕಾರ ಸ್ಥಾನದಿಂದ ಭಾರತಕ್ಕೆ ಖಾಸಗಿ ಭೇಟಿ ನೀಡಿರುವ ಐರೋಪ್ಯ ಸಂಸದರ ನಿಯೋಗಕ್ಕೆ ಮೋದಿಯವರೊಂದಿಗೆ ಭೇಟಿಯನ್ನು ಏರ್ಪಡಿಸಿದ್ದರು?, ಸರಕಾರವೇಕೆ ನಿಯೋಗಕ್ಕೆ ಸೌಲಭ್ಯಗಳನ್ನೊದಗಿಸುತ್ತಿದೆ?, ನಿಯೋಗದ ಇಡೀ ಪ್ರವಾಸಕ್ಕೆ ಹಣವೆಲ್ಲಿಂದ ಬಂದಿದೆ? ವಿದೇಶಾಂಗ ವ್ಯವಹಾರಗಳ ಸಚಿವಾಲಯವನ್ನೇಕೆ ಮೂಲೆಗುಂಪು ಮಾಡಲಾಗಿದೆ” ಎಂದು ಸುರ್ಜೆವಾಲಾ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X