Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಕಾಶವಾಣಿಯ ಸರ್ದಾರ್ ಪಟೇಲ್ ಉಪನ್ಯಾಸದ...

ಆಕಾಶವಾಣಿಯ ಸರ್ದಾರ್ ಪಟೇಲ್ ಉಪನ್ಯಾಸದ ಬದಲು ಮೋದಿ-ಶಾ ಭಾಷಣ!

60 ವರ್ಷಗಳ ಸಂಪ್ರದಾಯಕ್ಕೆ ಕತ್ತರಿ

ವಾರ್ತಾಭಾರತಿವಾರ್ತಾಭಾರತಿ30 Oct 2019 9:01 PM IST
share
ಆಕಾಶವಾಣಿಯ ಸರ್ದಾರ್ ಪಟೇಲ್ ಉಪನ್ಯಾಸದ ಬದಲು ಮೋದಿ-ಶಾ ಭಾಷಣ!

ಹೊಸದಿಲ್ಲಿ,ಅ.30: ಆಕಾಶವಾಣಿಯು ಕಳೆದ 60 ವರ್ಷಗಳಿಂದಲೂ ಪ್ರತಿ ವರ್ಷದ ಅ.31ರಂದು ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯಂದು ಅವರ ಹೆಸರಿನಲ್ಲಿ ಒಂದು ಗಂಟೆ ಅವಧಿಯ ಸ್ಮಾರಕ ಉಪನ್ಯಾಸವನ್ನು ಪ್ರಸಾರ ಮಾಡುತ್ತಿತ್ತು. ಆದರೆ ಈ ವರ್ಷ ಆಕಾಶವಾಣಿಯು ಈ ವಾಡಿಕೆಯನ್ನು ಬದಲಿಸಿದೆ ಎಂದು Theprint.in ವರದಿ ಮಾಡಿದೆ.

 ಆಕಾಶವಾಣಿಯು ಗಣ್ಯ ವ್ಯಕ್ತಿಯೋರ್ವರಿಂದ ಉಪನ್ಯಾಸದ ಬದಲು ಗುಜರಾತಿನ ಕೇವಡಿಯಾದಲ್ಲಿ ಮತ್ತು ಗೃಹಸಚಿವ ಅಮಿತ್ ಶಾ ಅವರು ದಿಲ್ಲಿಯಲ್ಲಿ ಮಾಡಿದ್ದ ಭಾಷಣಗಳ ಆಯ್ದ ಭಾಗಗಳನ್ನೊಳಗೊಂಡ ರೇಡಿಯೊ ವರದಿಯನ್ನು ಪ್ರಸಾರಿಸಲಿದೆ. ಪ್ರಧಾನಿಯವರ ಮನ್ ಕಿ ಬಾತ್ ಅಧ್ಯಾಯಗಳ ಆಯ್ದ ಭಾಗಗಳು,ಕಾರ್ಯಕ್ರಮಕ್ಕಾಗಿ ಸಿದ್ಧಗೊಳಿಸಿರುವ ಗೀತೆ ಮತ್ತು ಪಟೇಲ್ ಅವರ ಕೆಲವು ಲಭ್ಯ ಉಕ್ತಿಗಳೂ ವರದಿಯ ಭಾಗವಾಗಿರಲಿವೆ ಎಂದು ಸರಕಾರದ ಮೂಲವೊಂದು ತಿಳಿಸಿದೆ.

ಗಣ್ಯ ವ್ಯಕ್ತಿಯೋರ್ವರು ನೀಡುತ್ತಿದ್ದ ವಾರ್ಷಿಕ ಸರ್ದಾರ್ ಪಟೇಲ್ ಸ್ಮಾರಕ ಉಪನ್ಯಾಸವನ್ನು ಅಕ್ಟೋಬರ್ ಕೊನೆಯ ವಾರದಲ್ಲಿ ಧ್ವನಿಮುದ್ರಿಸಿಕೊಳ್ಳಲಾಗುತ್ತದೆ ಮತ್ತು ಅ.31ರಂದು ಅದನ್ನು ಪ್ರಸಾರ ಮಾಡಲಾಗುತ್ತದೆ. ಆದರ ಈ ಬಾರಿ ಇದನ್ನು ಕೈಬಿಡಲಾಗಿದೆ. ಇದಕ್ಕೆ ಯಾವುದೇ ಕಾರಣಗಳನ್ನು ನೀಡಲಾಗಿಲ್ಲ ಎಂದು ಮೂಲವು ತಿಳಿಸಿದರೆ,ಇದು ಕೊನೆಯ ಗಳಿಗೆಯ ನಿರ್ಧಾರವಾಗಿದೆ ಎಂದು ಇತರ ಮೂಲಗಳು ಹೇಳಿವೆ.

ಆದರೆ ಕಾರ್ಯಕ್ರಮಕ್ಕೆ ಸರ್ದಾರ್ ಪಟೇಲ್ ಸ್ಮಾರಕ ಉಪನ್ಯಾಸ ಎಂಬ ಹೆಸರನ್ನು ಉಳಿಸಿಕೊಳ್ಳಲು ಆಕಾಶವಾಣಿಯು ನಿರ್ಧರಿಸಿದೆ. ಕಾರ್ಯಕ್ರಮವು ಅ.31ರಂದು ರಾತ್ರಿ ದೇಶಾದ್ಯಂತ ಎಲ್ಲ ಆಕಾಶವಾಣಿ ಕೇಂದ್ರಗಳಿಂದ ಪ್ರಸಾರಗೊಳ್ಳಲಿದೆ.

ಕಾರ್ಯಕ್ರಮವನ್ನು ವಿಭಿನ್ನ ರೂಪದಲ್ಲಿ ಪ್ರಸಾರಿಸಲಾಗುತ್ತಿದೆ,ಅಷ್ಟೇ ಎಂದು ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ ಆಕಾಶವಾಣಿಯ ಮಹಾ ನಿರ್ದೇಶಕ ಫಯಾಝ್ ಶೆಹ್ರೆಯಾರ್ ಅವರು,ಮೋದಿ ಅವರು ಪಟೇಲ್ ಗೌರವಾರ್ಥ ಕೇವಡಿಯಾದಲ್ಲಿ ಮಾಡಿದ್ದ ಭಾಷಣ ಮತ್ತು ಇತ್ತೀಚಿಗೆ ಜಮ್ಮು-ಕಾಶ್ಮೀರದ ಪುನರ್‌ರಚನೆಯಲ್ಲಿ ಅಂತ್ಯಗೊಂಡ ಭಾರತದ ಪುನರ್‌ಘಟನೆಯಲ್ಲಿ ಮಾಜಿ ಗೃಹಸಚಿವ ಪಟೇಲ್ ಅವರ ಪಾತ್ರದ ಮೇಲೆ ಬೆಳಕು ಚೆಲ್ಲಿ ಶಾ ದಿಲ್ಲಿಯಲ್ಲಿ ಮಾಡಿದ್ದ ಭಾಷಣದ ಆಯ್ದ ಭಾಗಗಳನ್ನು ಪ್ರಸಾರಿಸಲಾಗುವುದು ಎಂದು ತಿಳಿಸಿದರು.

ಇಂಗ್ಲಿಷ್‌ನಲ್ಲಿ ಪಟೇಲ್ ಸ್ಮಾರಕ ಉಪನ್ಯಾಸ 1955ರಲ್ಲಿ ಆರಂಭಗೊಂಡಿತ್ತು. ಭಾರತದ ಮೊದಲ ವಾರ್ತಾ ಮತ್ತು ಪ್ರಸಾರ ಸಚಿವರಾಗಿದ್ದ ಪಟೇಲ್ ಉಪಪ್ರಧಾನಿ ಮತ್ತು ಗೃಹಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

  ಭಾರತದ ಕೊನೆಯ ಗವರ್ನರ್ ಜನರಲ್ ಡಾ.ಸಿ.ರಾಜಗೋಪಾಲಾಚಾರಿ,ಮಾಜಿ ರಾಷ್ಟ್ರಪತಿಗಳಾದ ಡಾ.ಝಾಕಿರ್ ಹುಸೇನ್ ಮತ್ತು ಡಾ.ಎಪಿಜೆ ಅಬ್ದುಲ್ ಕಲಾಂ,ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಮತ್ತಿತರ ಗಣ್ಯರು ಈ ಎಲ್ಲ ವರ್ಷಗಳಲ್ಲಿ ಪಟೇಲ್ ಸ್ಮಾರಕ ಉಪನ್ಯಾಸಗಳನ್ನು ನೀಡಿದ್ದರು. ಕಳೆದ ಐದು ವರ್ಷಗಳಲ್ಲಿ ಅರುಣ್ ಜೇಟ್ಲಿ, ಜಿತೇಂದ್ರ ಸಿಂಗ್ ಮತ್ತು ಸ್ಮೃತಿ ಇರಾನಿ ಸೇರಿದಂತೆ ಮೋದಿ ಸರಕಾರದ ಹಲವಾರು ಸಚಿವರು ಈ ಉಪನ್ಯಾಸಗಳನ್ನು ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X