Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯದಲ್ಲಿ ಅನುಶೋಧನೆ ಪ್ರಾಧಿಕಾರ:...

ರಾಜ್ಯದಲ್ಲಿ ಅನುಶೋಧನೆ ಪ್ರಾಧಿಕಾರ: ಡಿಸಿಎಂ ಅಶ್ವಥ್ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ31 Oct 2019 10:34 PM IST
share
ರಾಜ್ಯದಲ್ಲಿ ಅನುಶೋಧನೆ ಪ್ರಾಧಿಕಾರ: ಡಿಸಿಎಂ ಅಶ್ವಥ್ ನಾರಾಯಣ

ಮಂಗಳೂರು: ಅನುಶೋಧನೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ರಾಜ್ಯದಲ್ಲಿ ಅನುಶೋಧನೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಅನುಶೋಧನೆ ಪ್ರಾಧಿಕಾರ (ಇನ್ನೊವೇಟಿವ್ ಅಥಾರಿಟಿ) ಆರಂಭಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ, ವೈದ್ಯಕೀಯ ಶಿಕ್ಷಣ, ಉನ್ನತ ಶಿಕ್ಷಣ, ಐಟಿ-ಬಿಟಿ ಖಾತೆ ಸಚಿವ ಡಾ.ಅಶ್ವಥ್ ನಾರಾಯಣ ನುಡಿದರು.

ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಇದು ದೇಶದಲ್ಲೇ ಮೊಟ್ಟಮೊದಲ ಅನುಶೋಧನೆ ಪ್ರಾಧಿಕಾರವಾಗಲಿದೆ ಎಂದು ಬಣ್ಣಿಸಿದರು.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹೊಸ ಆವಿಷ್ಕಾರಗಳಿಗೆ ಕಾನೂನಾತ್ಮಕ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಎರಡು ವರ್ಷಗಳ ಅವಧಿಗೆ ಅವರಿಗೆ ರಿಯಾಯ್ತಿ ನೀಡಿ, ಬಳಿಕ ಸೂಕ್ತ ಕಾನೂನು ತಿದ್ದುಪಡಿ ತರುವ ನಿಟ್ಟಿನಲ್ಲಿ ಇದು ಸಹಕಾರಿಯಾಗಲಿದೆ. ಅಂತೆಯೇ ವೈದ್ಯಕೀಯ ಸಾಧನಗಳ ನೀತಿ, ಇ- ಆರೋಗ್ಯ ಪ್ರಾಧಿಕಾರದಂಥ ಸುಧಾರಣಾ ಕ್ರಮಗಳು ಹಂತಹಂತವಾಗಿ ಜಾರಿಗೆ ಬರಲಿವೆ ಎಂದು ವಿವರಿಸಿದರು.

ವೈದ್ಯಕೀಯ ಶಿಕ್ಷಣ, ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಕಾರ್ಯಯೋಜನೆ ರೂಪಿಸಿ, ಕಾರ್ಯಾರಂಭ ಮಾಡಲಾಗಿದೆ. ರಾಜಕೀಯಕ್ಕಿಂತ ಇಲಾಖೆಯ ವಿಷಯಕ್ಕೆ ಹೆಚ್ಚಿನ ಗಮನ ಹರಿಸಲಾಗಿದೆ. 

ಇಡೀ ವಿಶ್ವವೇ ಸ್ಪರ್ಧೆಯ ಅಂಗಳವಾಗಿರುವ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದ ಸ್ಪರ್ಧಾತ್ಮಕತೆಯನ್ನು ಬೆಳೆಸಲು ಅಗತ್ಯ ಕಾರ್ಯಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. 

ಗುಣಮಟ್ಟದ ಬದುಕು, ಗುಣಮಟ್ಟದ ಸೌಲಭ್ಯದ ಕನಸಿಗೆ ಪೂರಕವಾಗಿ ಕಾರ್ಯ ನಿರ್ವಹಿಸಲಾಗುವುದು ಎಂದರು.

ವೈದ್ಯರ ಹಿತ ಕಾಪಾಡುವಲ್ಲಿ ಐಎಂಎ ಮುಂಚೂಣಿಯಲ್ಲಿದ್ದು, ನೀತಿ, ಕಾನೂನು, ಸಾಮಾಜಿಕ ಜವಾಬ್ದಾರಿ ವಿಚಾರದಲ್ಲಿ ದೇಶಾದ್ಯಂತ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನಾರ್ಹ. ವೈದ್ಯಕೀಯ ಶಿಕ್ಷಣ ಹಾಗೂ ವೈದ್ಯ ವೃತ್ತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಕಾಶಿ ಎನಿಸಿದೆ ಎಂದು ಬಣ್ಣಿಸಿದರು. ಐಎಂಎಯ ಸಮಾಜಮುಖಿ ಕಾರ್ಯಗಳಿಗೆ ಎಲ್ಲ ನೆರವು ನೀಡಲು ಸಿದ್ಧ ಎಂದರು.

ಜೀವನದ ತಿರುವು, ವ್ಯಕ್ತಿತ್ವ, ಗೌರವ, ಗುರುತಿಸುವಿಕೆ ಪಡೆದುಕೊಂಡದ್ದು ಮಂಗಳೂರಿನಿಂದ. ಇಲ್ಲಿನ ಸಜ್ಜನರು ಸಾಧಕರಿಂದ ಸ್ಫೂರ್ತಿ ದೊರಕಿದೆ ಎಂದು ನೆನಪಿಸಿಕೊಂಡರು.

ರಾಜ್ಯ ಐಎಂಎ ಅಧ್ಯಕ್ಷ ಡಾ.ಮಧುಸೂದನ ಕರಿಗನೂರು ಅಧ್ಯಕ್ಷತೆ ವಹಿಸಿದ್ದರು. ಐಎಂಎ ನೂತನ ಅಧ್ಯಕ್ಷ ಡಾ.ಅಣ್ಣಯ್ಯ ಕುಲಾಲ್ ಮುಂದಿನ ಕಾರ್ಯಯೋಜನೆಯ ರೂಪುರೇಷೆ ವಿವರಿಸಿದರು. 

ಎಜೆ ವೈದ್ಯಕೀಯ ಕಾಲೇಜಿನ ಅಧ್ಯಕ್ಷ ಎ.ಜೆ.ಶೆಟ್ಟಿ, ನಿಟ್ಟೆ ವಿವಿ ಕುಲಪತಿ ಡಾ.ಸತೀಶ್ ಭಂಡಾರಿ, ಸುಳ್ಯ ಕೆವಿಜೆ ಮೆಡಿಕಲ್ ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ.ಕೆ.ವಿ.ಚಿದಾನಂದ, ಯೆನಪೋಯ ಕಾಲೇಜಿನ ಸಹ ಕುಲಪತಿ ಡಾ.ರಘುವೀರ, ಮಣಿಪಾಲ ಕೆಎಂಸಿ ಸಹ ಕುಲಪತಿ ಡಾ.ಎಚ್.ಎಸ್.ಬಲ್ಲಾಳ್, ಕಣಚೂರು ವೈದ್ಯಕೀಯ ಕಾಲೇಜಿನ ಅಧ್ಯಕ್ಷ ಡಾ.ಯು.ಕೆ.ಮೋನು, ರಾಜ್ಯ ಐಎಂಎ ನಿಯೋಜಿತ ಅಧ್ಯಕ್ಷ ವೆಂಕಟಾಚಲಪತಿ ವಿಶೇಷ ಅತಿಥಿಗಳಾಗಿದ್ದರು.

ನೂತನ ಅಧ್ಯಕ್ಷ ಡಾ.ಎಂ.ಅಣ್ಣಯ್ಯ ಕುಲಾಲ್ ಉಳ್ತೂರು, ಕಾರ್ಯದರ್ಶಿ ಡಾ.ರಶ್ಮಿ ಕುಂದಾಪುರ, ಕೋಶಾಧ್ಯಕ್ಷ ಡಾ.ಜಿ.ಕೆ.ಭಟ್ ಸಂಕಬಿತ್ತಿಲು, ಹಿಂದಿನ ಸಾಲಿನ ಕಾರ್ಯದರ್ಶಿ ಡಾ.ಸುಧೀಂದ್ರ ರಾವ್, ಖಜಾಂಚಿ ವಿನಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ನಿಕಟಪೂರ್ವ ಅಧ್ಯಕ್ಷ ಡಾ.ಬಿ.ಸಚ್ಚಿದಾನಂದ ರೈ ಸ್ವಾಗತಿಸಿದರು. ಕೆ.ವಿ.ದೇವಾಡಿಗ ಐಎಂಎ ಇತಿಹಾಸ ಪರಿಚಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X