Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೆಸ್ಕಾಂನಿಂದ ಗ್ರಾಹಕರಿಗೆ ಅನಿಯಮಿತ...

ಮೆಸ್ಕಾಂನಿಂದ ಗ್ರಾಹಕರಿಗೆ ಅನಿಯಮಿತ ಬಿಲ್: ಸ್ಪಷ್ಟನೆ ನೀಡುವಂತೆ ತಾ.ಪಂ. ಸಾಮಾನ್ಯ ಸಭೆಯಲ್ಲಿ ಸದಸ್ಯರಿಂದ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ31 Oct 2019 11:35 PM IST
share

ಬೆಳ್ತಂಗಡಿ: ಮೆಸ್ಕಾಂ ಮೀಟರ್ ಸಿಬಂದಿ ನಿರ್ಲಕ್ಷ್ಯದಿಂದಾಗಿ ಬೆಳ್ತಂಗಡಿ ತಾಲೂಕಿನ ನಾಳ, ನ್ಯಾತರ್ಪು, ಓಡಿಲ್ನಾಳ ಸೇರಿದಂತೆ ಹಲವೆಡೆ ಏಕಾಏಕಿ ಸಾವಿರಾರು ವಿದ್ಯುತ್ ಬಿಲ್ ನೀಡಿರುವ ಕುರಿತು ಮೆಸ್ಕಾಂ ಅಧಿಕಾರಿಗಳು ಸ್ಪಷ್ಟನೆ ನೀಡಿ ಗ್ರಾಹಕರಿಗೆ ಸೂಕ್ತ ಸ್ಪಂದನೆ ನೀಡಬೇಕು ಎಂದು ತಾ.ಪಂ. ಸಾಮಾನ್ಯ ಸಬೆಯಲ್ಲಿ ಒತ್ತಾಯಿಸಲಾಯಿತು. 

ಗುರುವಾರ ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ ಅಧ್ಯಕ್ಷತೆಯಲ್ಲಿ ಜರಗಿದ ತಾ.ಪಂ. ಸಾಮಾನ್ಯ ಸಭೆಯಲ್ಲಿ ಕೆಲ ಕಾಲ ಚರ್ಚೆಗೆ ಕಾರಣವಾಯಿತು.
ಮೆಸ್ಕಾಂ ಮೀಟರ್ ರೀಡಿಂಗ್ ಸಿಬಂದಿ ನಿರ್ಲಕ್ಷ್ಯದಿಂದ ಗ್ರಾಹಕರಿಗೆ ಒಂದೇ ಸಮನೆ 10ರಿಂದ 30 ಸಾವಿರ ಬಿಲ್ ನೀಡಿದ್ದೀರಿ. ಈ ಕುರಿತು ನಮಗೆ ಸ್ಪಷ್ಟನೆ ಬೇಕು. ಇಷ್ಟು ದಿನ ನಿಮ್ಮ ಗಮನಕ್ಕೆ ಬಂದಿಲ್ಲವೇ ಎಂದು ತಾ.ಪಂ. ಸದಸ್ಯ ಗೋಪಿನಾಥ್ ನಾಯಕ್ ಪ್ರಶ್ನಿಸಿದರು.  

ಪ್ರತಿಕ್ರಿಯಿಸಿದ ಮೆಸ್ಕಾಂ ಎಇಇ ಶಿವಶಂಕರ್, ಮೀಟರ್ ರೀಡಿಂಗ್ ಮಾಡದೆ ನಿಗದಿತ ಬಿಲ್ ನೀಡಿದ್ದರಿಂದ ಗ್ರಾಹಕರಿಗೆ ಸಮಸ್ಯೆಯಾಗಿರುವುದು ನನ್ನ ಗಮನಕ್ಕೆ ಬಂದಕೂಡಲೆ ಸಿಬಂದಿಯನ್ನು ವಜಾ ಮಾಡಲಾಗಿದೆ. ಆದರೆ ಗ್ರಾಹಕರು ಹೆಚ್ಚು ಬಿಲ್ ಬಂದ ಕುರಿತು ಮಾಹಿತಿ ನೀಡಿದಂತೆ ಕಡಿಮೆ ಬಿಲ್ ಬಂದಾಗ ಪರಿಶೀಲಿಸಿದ್ದರೆ ಸಮಸ್ಯೆ ಯಾಗುತ್ತಿರಲಿಲ್ಲ ಎಂದು ಹೇಳಿದರು. ಇದಕ್ಕೆ ಸದಸ್ಯರಾದ ವಿಜಯ ಗೌಡ ಹಾಗೂ ಶಶಿಧರ್ ಕಲ್ಮಂಜ ಆಕ್ಷೇಪ ವ್ಯಕ್ತಪಡಿಸಿದರು. ತಾ.ಪಂ. ಇ.ಒ. ಜಯರಾಂ ಪ್ರವೇಶಿಸಿ, ಗ್ರಾಹಕರಿಗೆ ಮನವರಿಕೆ ಮಾಡಿ ಬಿಲ್ ಪಾವತಿಗೆ ಹೊರೆಯಾಗದಂತೆ ಸಮಸ್ಯೆ ಈ ಕೂಡಲೆ ಬಗೆಹರಿಸುವಂತೆ ಅಧಿಕಾರಿಗೆ ಸೂಚಿಸಿದರು.

ಸರಕಾರಕ್ಕೆ ಆದಾಯ ತರುವ ಎಂಎಸ್‍ಐಎಲ್ ತಾಲೂಕಲ್ಲಿ ಪರವಾನಗಿ ನೀಡುತ್ತಿಲ್ಲ. ಆದರೆ ಎಗ್ಗಿಲ್ಲದೆ ಆಕ್ರಮವಾಗಿ ಮದ್ಯ ಮಾರಾಟ ನಡೆದರೂ ಅಬಕಾರಿ ಇಲಾಖೆ ಕಂಡರೂ ಕಾಣದಂತಿದೆ ಎಂದು ಸದಸ್ಯ ಜೋಯೆಲ್ ಮೆಂಡೋನ್ಸಾ ಸಭೆಯ ಗಮನ ಸೆಳೆದರು. ಅಬಕಾರಿ ಇಲಾಖೆ ನಿರೀಕ್ಷಕಿ ಸೌಮ್ಯಲತಾ ಪ್ರತಿಕ್ರಿಯಿಸಿ, ಜಿಲ್ಲೆಯಿಂದ ಪರವಾನಿಗೆ ನೀಡಿರುವ ಕುರಿತು ನಮಗೆ ಸ್ಪಷ್ಟ ಮಾಹಿತಿ ಇಲ್ಲ. ತಾಲೂಕಲ್ಲಿ ಯಾವುದೇ ಅಕ್ರಮ ಚಟುವಟಿಕೆ ನಡೆಯುತ್ತಿಲ್ಲ ಎಂದು ಪ್ರತಿಕ್ರಯಿಸಿದರು.

ವೈನ್ ಶಾಪ್‍ಗಳಲ್ಲಿ ದರ ಪಟ್ಟಿ
ತಾಲೂಕಿನ ವೈನ್ ಶಾಪ್‍ಗಳಲ್ಲಿ ಕಡ್ಡಾಯ ದರ ಪಟ್ಟಿ ನಿಗದಿ ಪಡಿಸಬೇಕೆಂಬ ಕಾನೂನು ಪಾಲನೆಯಾಗುತ್ತಿಲ್ಲ. ಈ ವಿರುದ್ಧ ಎಷ್ಟು ದೂರು ದಾಖಲಿಸಿದ್ದೀರಿ ಎಂದು ಸದಸ್ಯ ಲಕ್ಷ್ಮೀನಾರಾಯಣ ಪ್ರಶ್ನಿಸಿದರು. ಸದಸ್ಯ ಶಶಿಧರ್, ವಿಜಯ ಗೌಡ ಧ್ವನಿಗೂಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಇ.ಒ.ಜಯರಾಂ, ಅಬಕಾರಿ ಇಲಾಖೆಯಿಂದ ಸಾಮಾಜಿಕ ಜಾಲತಾಣ ರಚಿಸಿ, ದೂರು ಸಾರ್ವಜನಿಕರಿಂದ ದೂರು ಸ್ವೀಕರಿಸುವಂತಾಗಬೇಕು ಎಂದು ಖಡಕ್ ಸೂಚನೆ ನೀಡಿದರು. 

ನೆರೆ ಸಂತ್ರಸ್ತರಿಗೆ ಗರಿಷ್ಠ ಪರಿಹಾರ
ನೆರೆಯಿಂದ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಕೆಲವೊಂದು ಕುಟುಂಬ ವಂಚಿತವಾಗಿದೆ. ತಾಂತ್ರಿಕ ತೊಂದರೆ ಇರುವ ಕುರಿತು ಸ್ಪಷ್ಟನೆ ಬೇಕಾಗಿದೆ. ಮಿತ್ತಬಾಗಿಲು ಕುಕ್ಕಾವು ಸಮೀಫ ತೋಡುಗಳಲ್ಲಿ ಹೂಳು ತುಂಬಿದ್ದು,  ತೆರವಿಗೆ ಕ್ರಮ ವಹಿಸುವಂತೆ ಸದಸ್ಯ ಜೋಯೆಲ್ ವಿನಂತಿಸಿದರು.

ತಹಶೀಲ್ದಾರ್ ಗಣಪತಿ ಶಾಸ್ತೀ ಪ್ರತಿಕ್ರಿಯಿಸಿ ತಾಲೂಕಲ್ಲಿ 234 ಮಂದಿಗೆ 5 ಲಕ್ಷದಂತೆ ಸರಕಾರದಿಂದ ಪರಿಹಾರ ಲಭ್ಯವಾಗಲಿದೆ. ಮತ್ತೆ 48 ಹಾನಿಕುರಿತಾದ ಅರ್ಜಿ ಬಂದಿದ್ದು, ಎನ್‍ಡಿಆರ್‍ಎಫ್ ಗೈಡ್ ಲೈನ್ ಪ್ರಕಾರ ಗರಿಷ್ಠ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲೂ ಬ್ಯಾಂಕ್ ಖಾತೆ ಹಾಗೂ ಲೋನ್ ಖಾತೆ ನೀಡಿರುವುದರಿಂದ 16 ಅರ್ಜಿದಾರರಿಗೆ ಪರಿಹಾರ ವಿಳಂಬವಾಗಿದೆ ಎಂದು ತಿಳಿಸಿದರು.
ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ.ಸೆಬಾಸ್ಟಿನ್ ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X