Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶುಕ್ರವಾರದಿಂದ ಭಾರತದ ಹಾಕಿಗೆ...

ಶುಕ್ರವಾರದಿಂದ ಭಾರತದ ಹಾಕಿಗೆ ಒಲಿಂಪಿಕ್ಸ್ ಅರ್ಹತಾ ಪರೀಕ್ಷೆ

ಪುರುಷರ ತಂಡಕ್ಕೆ ರಶ್ಯ, ಮಹಿಳಾ ತಂಡಕ್ಕೆ ಅಮೆರಿಕದ ಸವಾಲು

ವಾರ್ತಾಭಾರತಿವಾರ್ತಾಭಾರತಿ31 Oct 2019 11:54 PM IST
share
ಶುಕ್ರವಾರದಿಂದ ಭಾರತದ ಹಾಕಿಗೆ ಒಲಿಂಪಿಕ್ಸ್ ಅರ್ಹತಾ ಪರೀಕ್ಷೆ

ಹೊಸದಿಲ್ಲಿ, ಅ.31: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದ ಬಾಗಿಲಲ್ಲಿ ನಿಂತಿರುವ ಭಾರತೀಯ ಪುರುಷ ಮತ್ತು ಮಹಿಳಾ ಹಾಕಿ ತಂಡಗಳು 2020ರ ಟೋಕಿಯೊ ಒಲಿಂಪಿಕ್ಸ್‌ಗೆ ಟಿಕೆಟ್ ಕಾಯ್ದಿರಿಸಲು ಕೇವಲ ಎರಡು ಹೆಜ್ಜೆಗಳನ್ನು ಮುಂದಿಡಬೇಕಾಗಿದೆ. ಮನ್‌ಪ್ರೀತ್ ಸಿಂಗ್ ನೇತೃತ್ವದ ಪುರುಷರ ತಂಡ ಮತ್ತು ರಾಣಿ ರಾಂಪಾಲ್ ನೇತೃತ್ವದ ಮಹಿಳೆಯರ ತಂಡ ಶುಕ್ರವಾರ ಭುವನೇಶ್ವರದಲ್ಲಿ ಆರಂಭವಾಗಲಿರುವ ಒಲಿಂಪಿಕ್ಸ್‌ನ ಅರ್ಹತಾ ಪಂದ್ಯಗಳಲ್ಲಿ ಅನುಕ್ರಮವಾಗಿ ರಶ್ಯ ಮತ್ತು ಅಮೆರಿಕ ತಂಡವನ್ನು ಎದುರಿಸಲಿವೆ.

ಒಡಿಶಾದ ರಾಜಧಾನಿ ಭುವನೇಶ್ವರದ ಕಳಿಂಗಾ ಕ್ರೀಡಾಂಗಣದಲ್ಲಿ ನವೆಂಬರ್ 1 ಮತ್ತು 2 ರಂದು ನಡೆಯುವ ಪಂದ್ಯಗಳಲ್ಲಿ ಟೋಕಿಯೊ ಒಲಿಂಪಿಕ್ಸ್ ಗೆ ಟಿಕೆಟ್ ಪಡೆಯಲು ಹೋರಾಟ ನಡೆಸಬೇಕಾಗಿದೆ.

ಭಾರತದ ಪುರುಷರ ತಂಡಕ್ಕೆ ರಶ್ಯ ಮತ್ತು ಮಹಿಳಾ ತಂಡಕ್ಕೆ ಅಮೆರಿಕದ ಕಠಿಣ ಸವಾಲು ನಿರೀಕ್ಷಿಸಲಾಗಿದೆ. ಮಹಿಳಾ ತಂಡ ಉತ್ತಮವಾಗಿ ಆಡುತ್ತಿದೆ. ನಾಯಕಿ ರಾಣಿ ರಾಂಪಾಲ್ ಮತ್ತು ಉಪ ನಾಯಕಿ ಸವಿತಾ ಅವರಂತಹ ಪ್ರಮುಖ ಪ್ರತಿಭಾವಂತ ಆಟಗಾರ್ತಿಯರನ್ನು ಒಳಗೊಂಡ ತಂಡದಲ್ಲಿ ಡ್ರ್ಯಾಗ್ ಫ್ಲಿಕರ್ ಗುರ್ಜಿತ್ ಕೌರ್ ಮತ್ತು ಫಾರ್ವರ್ಡ್ ಲಾಲ್ರೆಮ್ಸಿಯಾಮಿ ಇದ್ದಾರೆ.

ಪುರುಷರ ತಂಡದ ಶಕ್ತಿ: ಕಳೆದ 12 ತಿಂಗಳುಗಳಲ್ಲಿ ಭಾರತ ತಂಡದ ರಕ್ಷಣಾ ವ್ಯವಸ್ಥೆಯಲ್ಲಿ ಸುಧಾರಣೆಯಾಗಿದ್ದು, ಜೂನಿಯರ್ ವಿಶ್ವಕಪ್ ವಿಜೇತ ಹರ್ಮನ್‌ಪ್ರೀತ್ ಸಿಂಗ್ ತಂಡಕ್ಕೆ ಸೇರ್ಪಡೆಗೊಂಡ ಬಳಿಕ ಈ ಬದಲಾವಣೆಯಾಗಿದೆ. ವಿಶ್ವಾಸಾರ್ಹ ಸುರೇಂದರ್ ಕುಮಾರ್,ಅನುಭವಿ ರೂಪಿಂದರ್ ಪಾಲ್ ಸಿಂಗ್ ಮತ್ತು ಹರ್ಮನ್‌ಪ್ರೀತ್ ಅವರೊಂದಿಗೆ ಭಾರತದ ತಳಮಟ್ಟದ ಕೊರತೆಯ ಸ್ಥಿರತೆಯನ್ನು ಒದಗಿಸಿದ್ದಾರೆ. 23 ವರ್ಷದ ಹರ್ಮನ್‌ಪ್ರೀತ್ 100 ಕ್ಕೂ ಹೆಚ್ಚು ಅಂತರ್‌ರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಮನ್‌ಪ್ರೀತ್ ಸಿಂಗ್ ಮಾರ್ಗದರ್ಶನದಲ್ಲಿ ಬೆಳೆಯುತ್ತಿದ್ದಾರೆ. ಟೋಕಿಯೊದಲ್ಲಿ ಕೆಲವು ತಿಂಗಳ ಹಿಂದೆ ನಡೆದ ನಾಲ್ಕು ರಾಷ್ಟ್ರಗಳ ಒಲಿಂಪಿಕ್ಸ್ ಟೆಸ್ಟ್ ಸ್ಪರ್ಧೆಯಲ್ಲಿ ಮನ್‌ಪ್ರೀತ್ ಸಿಂಗ್ ಅವರ ಅನುಪಸ್ಥಿತಿಯಲ್ಲಿ ಭಾರತ ಜಯ ಗಳಿಸಿತ್ತು.

24ರ ಹರೆಯದ ಮನ್‌ದೀಪ್ ಸಿಂಗ್ ಅವರು ಹರ್ಮನ್‌ಪ್ರೀತ್ ಅವರಂತೆ 2016ರಲ್ಲಿ ಜೂನಿಯರ್ ವಿಶ್ವಕಪ್ ಗೆದ್ದ ತಂಡದ ಸದಸ್ಯರಾಗಿದ್ದಾರೆ.

ಭಾರತದ ಪುರುಷರ ತಂಡ: ಮನ್‌ಪ್ರೀತ್ ಸಿಂಗ್ (ನಾಯಕ ), ಎಸ್.ವಿ.ಸುನೀಲ್ (ಉಪನಾಯಕ), ಪಿ.ಆರ್.ಶ್ರೀಜೇಶ್, ಕ್ರಿಶನ್ ಬಹದ್ದೂರ್ ಪಾಠಕ್, ಹರ್ಮನ್‌ಪ್ರೀತ್ ಸಿಂಗ್, ವರುಣ್ ಕುಮಾರ್, ಸುರೇಂದರ್ ಕುಮಾರ್, ಗುರಿಂದರ್ ಸಿಂಗ್, ರೂಪಿಂದರ್ ಪಾಲ್ ಸಿಂಗ್, ಅಮಿತ್ ರೋಹಿದಾಸ್, ನೀಲಕಂಠ ಶರ್ಮಾ, ಹಾರ್ದಿಕ್ ಸಿಂಗ್, ವಿವೇಕ್‌ಸಾಗರ್ ಪ್ರಸಾದ್, ಲಲಿತ್ ಕುಮಾರ್ ಉಪಾಧ್ಯಾಯ, ಮನ್‌ದೀಪ್ ಸಿಂಗ್, ಆಕಾಶ್‌ದೀಪ್ ಸಿಂಗ್, ರಮಣ್‌ದೀಪ್ ಸಿಂಗ್, ಸಿಮ್ರನ್‌ಜಿತ್ ಸಿಂಗ್.

ಗುರ್ಜಿತ್ ಕೌರ್ ಸ್ಟಾರ್ ಆಟಗಾರ್ತಿ: 24ರ ಹರೆಯದ ಗುರ್ಜಿತ್ ಕೌರ್ ಅವರು 2016ರ ರಿಯೊ ಒಲಿಂಪಿಕ್ಸ್‌ನಿಂದ ಭಾರತದ ಮಹಿಳಾ ಹಾಕಿ ತಂಡದ ಅತ್ಯಂತ ಪ್ರಭಾವಶಾಲಿ ಆಟಗಾರ್ತಿಯಾಗಿ ಬೆಳೆದಿದ್ದಾರೆ. ಈ ವರ್ಷ ಹಿರೋಶಿಮಾದಲ್ಲಿ ನಡೆದ ಎಫ್‌ಐಎಚ್ ಮಹಿಳಾ ಹಾಕಿ ಸಿರೀಸ್ ಫೈನಲ್ ಅಭಿಯಾನದಲ್ಲಿ 11 ಗೋಲು ಗಳಿಸಿದ್ದರು. ಗುರ್ಜಿತ್ ಒಂದೇ ಅಂತರ್‌ರಾಷ್ಟ್ರೀಯ ಪಂದ್ಯಾವಳಿಯಲ್ಲಿ 10 ಅಥವಾ ಹೆಚ್ಚಿನ ಗೋಲುಗಳನ್ನು ಗಳಿಸಿದ ಐದನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು 2018ರ ಏಷ್ಯನ್ ಗೇಮ್ಸ್ ಮತ್ತು ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಬೆಳ್ಳಿ ಪದಕ ಗೆದ್ದ ತಂಡದಲ್ಲಿದ್ದರು.

ಮಹಿಳಾ ತಂಡ:  ರಾಣಿ ರಾಂಪಾಲ್ (ನಾಯಕಿ), ಸವಿತಾ (ಉಪನಾಯಕಿ), ರಜನಿ ಎಟಿಮಾರ್ಪು, ದೀಪಾ ಗ್ರೇಸ್ ಎಕ್ಕಾ, ಗುರ್ಜಿತ್ ಕೌರ್, ರೀನಾ ಖೋಖರ್, ಸಲೀಮಾ ಟೆಟೆ, ಸುಶೀಲಾ ಚಾನು ಪುಖ್ರಾಂಬಮ್, ನಿಕ್ಕಿ ಪ್ರಧಾನ್, ಮೋನಿಕಾ, ನೇಹಾ ಗೋಯಲ್, ಲಿಲಿಮಾ ಮಿನ್ಜ್, ನಮಿತಾ ಟೊಪ್ಪೊ ,ವಂದನಾ ಕಟಾರಿಯಾ, ನವನೀತ್ ಕೌರ್, ಲಾಲ್ರೆಮ್ಸಿಯಾಮಿ, ನವಜೋತ್ ಕೌರ್, ಶರ್ಮಿಳಾ ದೇವಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X