Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಎಚ್ಚರಿಕೆ, ರಕ್ತದೊತ್ತಡ ನಿಯಂತ್ರಿಸುವ...

ಎಚ್ಚರಿಕೆ, ರಕ್ತದೊತ್ತಡ ನಿಯಂತ್ರಿಸುವ ಸಾಮಾನ್ಯ ಔಷಧಿಗಳು ಹೃದಯಾಘಾತದ ಅಪಾಯ ಹೆಚ್ಚಿಸಬಹುದು !

ವಾರ್ತಾಭಾರತಿವಾರ್ತಾಭಾರತಿ1 Nov 2019 8:24 PM IST
share
ಎಚ್ಚರಿಕೆ, ರಕ್ತದೊತ್ತಡ ನಿಯಂತ್ರಿಸುವ ಸಾಮಾನ್ಯ ಔಷಧಿಗಳು ಹೃದಯಾಘಾತದ ಅಪಾಯ ಹೆಚ್ಚಿಸಬಹುದು !

ಅನಾರೋಗ್ಯದಿಂದ ಪಾರಾಗಲು ನಾವು ಔಷಧಿಗಳನ್ನು ಸೇವಿಸುತ್ತೇವೆ. ಆದರೆ ಈ ಔಷಧಿಗಳೇ ಬೇರೆ ಅನಾರೋಗ್ಯಗಳಿಗೆ ಕಾರಣವಾದರೆ ಏನು ಗತಿ? ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಮತ್ತು ಎದೆನೋವಿಗೆ ಸಾಮಾನ್ಯವಾಗಿ ಸೇವಿಸುವ ಔಷಧಿಯೊಂದು ದಿಢೀರ್ ಹೃದಯಸ್ತಂಭನದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ.

 ನೆದರ್ ಲ್ಯಾಂಡ್ಸ್‌ನ ಆಮಸ್ಟರ್‌ ಡ್ಯಾಮ್‌ ಅಕಾಡೆಮಿಕ್ ಮೆಡಿಕಲ್ ಸೆಂಟರ್‌ನ ಸಂಶೋಧಕರು ಈ ಅಧ್ಯಯನವನ್ನು ಕೈಗೊಂಡಿದ್ದು,60,000ಕ್ಕೂ ಅಧಿಕ ಜನರನ್ನು ಸಮೀಕ್ಷೆಗೊಳಪಡಿಸಿದ್ದಾರೆ. ವಿವಿಧ ಔಷಧಿಗಳ ಪರಿಣಾಮಗಳನ್ನು ವಿಶ್ಲೇಷಿಸಿದ ಬಳಿಕ ಸಂಶೋಧಕರು ನಿಫೆಡಿಪೈನ್ ಮತ್ತು ಆಮ್ಲಾಡಿಪೈನ್ ಎಂಬ ಡಿಹೈಡ್ರೊಪೈರಿಡಿನ್ ವರ್ಗಕ್ಕೆ ಸೇರಿದ ಎರಡು ಔಷಧಿಗಳ ಸಂಭಾವ್ಯ ಪರಿಣಾಮಗಳ ಕುರಿತು ಆಳವಾದ ಅಧ್ಯಯನವನ್ನು ನಡೆಸಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಹೃದಯಕ್ಕೆ ರಕ್ತಪೂರೈಕೆ ಕಡಿಮೆಯಾದಾಗ ಕಾಣಿಸಿಕೊಳ್ಳುವ ಎದೆನೋವು ‘ಆ್ಯಂಜಿನಾ’ದ ಚಿಕಿತ್ಸೆಯಲ್ಲಿ ಈ ಔಷಧಿಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.

ಸಂಭಾವ್ಯ ಪರಿಣಾಮಗಳ ಅಧ್ಯಯನಕ್ಕಾಗಿ ಸಂಶೋಧಕರು ನಿಫೆಡಿಪೈನ್ ಮತ್ತು ಆಮ್ಲಾಡಿಪೈನ್‌ನ ಅಧಿಕ ಡೋಸ್ (ದಿನಕ್ಕೆ 60 ಎಮ್‌ಜಿ)ನ್ನು ಬಳಸಿದ್ದರು. ನಿಫೆಡಿಮೈನ್ ದಿಢೀರ್ ಹೃದಯ ಸ್ತಂಭನದ ಹೆಚ್ಚಿನ ಅಪಾಯವನ್ನೊಡ್ಡುತ್ತದೆ ಮತ್ತು ಆಮ್ಲೊಡಿಪೈನ್ ಅಂತಹ ಯಾವುದೇ ಅಪಾಯವನ್ನು ಹೊಂದಿಲ್ಲ ಎನ್ನುವುದು ಅವರ ಅಧ್ಯಯನದಿಂದ ಬೆಳಕಿಗೆ ಬಂದಿದೆ.

  ಹೃದಯ ತಜ್ಞರು ಮತ್ತು ಇತರ ವೈದ್ಯರು ಹೆಚ್ಚಾಗಿ ನಿಫೆಡಿಪೈನ್ ಮತ್ತು ಆಮ್ಲಾಡಿಪೈನ್ ಔಷಧಿಗಳನ್ನು ಶಿಫಾರಸು ಮಾಡುತ್ತಾರೆ ಮತ್ತು ಆಯ್ಕೆಯು ಅವರ ಆದ್ಯತೆ ಹಾಗೂ ವೈಯಕ್ತಿಕ ಅನುಭವವನ್ನು ಅವಲಂಬಿಸಿರುತ್ತದೆ ಎಂದು ಮುಖ್ಯ ಸಂಶೋಧಕ ಡಾ.ಹ್ಯಾನೊ ಟ್ಯಾನ್ ವರದಿಯಲ್ಲಿ ಹೇಳಿದ್ದಾರೆ.

 ನಿಫೆಡಿಪೈನ್‌ನ ಅಧಿಕ ಡೋಸ್‌ನ್ನು ಸೇವಿಸುವ ವ್ಯಕ್ತಿಗಳಲ್ಲಿ ದಿಢೀರ್ ಹೃದಯ ಸ್ತಂಭನದ ಅಪಾಯ ಡಿಹೈಡ್ರೊಪೈರಿಡಿನ್‌ಗಳನ್ನು ತೆಗೆದುಕೊಳ್ಳದ ಅಥವಾ ಆಮ್ಲೊಡಿಪೈನ್ ಅನ್ನು ತೆಗೆದುಕೊಳ್ಳುತ್ತಿರುವ ವ್ಯಕ್ತಿಗಳಿಗಿಂತ ಹೆಚ್ಚಾಗಿರುವುದನ್ನು ಸಂಶೋಧಕರ ವಿಶ್ಲೇಷಣೆಯು ಬೆಟ್ಟು ಮಾಡಿದೆ.

ಇವೆರಡೂ ಔಷಧಿಗಳು ಹಲವಾರು ವರ್ಷಗಳಿಂದ ಬಳಕೆಯಲ್ಲಿರುವುದು ಮತ್ತು ಇವು ಒಂದೇ ವಿಧಾನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ ಪರಿಣಾಮಗಳು ಭಿನ್ನವಾಗಿರುವುದು ಸಂಶೋಧಕರಿಗೆ ಅಚ್ಚರಿಯನ್ನು ಮೂಡಿಸಿದೆ.

  ನಿಫೆಡಿಪೈನ್‌ನ ಅಧಿಕ ಡೋಸ್ ಸೇವನೆಯು ಮಾರಣಾಂತಿಕ ಅನಿಯಮಿತ ಹೃದಯಬಡಿತದಿಂದಾಗಿ ದಿಢೀರ್ ಹೃದಯ ಸ್ತಂಭನದ ಅಪಾಯವನ್ನು ಹೆಚ್ಚಿಸುತ್ತದೆ ಮತ್ತು ಆಮ್ಲಿಡಿಪೈನ್ ಯಾವುದೇ ಅಪಾಯವನ್ನುಂಟು ಮಾಡುವುದಿಲ್ಲ ಎನ್ನುವುದು ಅಧ್ಯಯನದಲ್ಲಿ ಕಂಡು ಬಂದಿದೆ. ಆದರೆ ತಮ್ಮ ಅಧ್ಯಯನದಲ್ಲಿ ಒಂದು ವರ್ಷ ಕಾಲ ಅಧಿಕ ರಕ್ತದೊತ್ತಡ ಮತ್ತು ಆ್ಯಂಜಿನಾ ಚಿಕಿತ್ಸೆಗಾಗಿ ಈ ಔಷಧಿಗಳನ್ನು ಬಳಸಿ ನೋಡಿರುವ ಸಂಶೋಧಕರು,ಯಾವುದೇ ಕ್ರಮವನ್ನು ಕೈಗೊಳ್ಳುವ ಮುನ್ನ ಇದೇ ಫಲಿತಾಂಶವನ್ನು ಪ್ರತಿಬಿಂಬಿಸುವ ಇನ್ನಷ್ಟು ಸಂಶೋಧನೆಗಳು ನಡೆಯಬೇಕಿರುವುದರಿಂದ ಅಧ್ಯಯನದ ಫಲಿತಾಂಶವನ್ನು ಎಚ್ಚರಿಕೆಯಿಂದ ವ್ಯಾಖ್ಯಾನಿಸಬೇಕಿದೆ ಎಂದು ಒತ್ತಿ ಹೇಳಿದ್ದಾರೆ.

ಸದ್ಯಕ್ಕೆ ಸಂಶೋಧಕರು ರೋಗಿಗಳು ತಮ್ಮ ವೈದ್ಯರೊಂದಿಗೆ ಸಮಾಲೋಚಿಸಿ ಆ್ಯಂಜಿನಾ ಮತ್ತು ಅಧಿಕ ರಕ್ತದೊತ್ತಡಕ್ಕಾಗಿ ನಿಫೆಡಿಪೈನ್ ಅನ್ನು ಒಂದು ಮಿತಿಯಲ್ಲಿ ಸೇವಿಸಬಹುದಾಗಿದೆ ಎಂದು ಸಲಹೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X