Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ರಫ್ತು ಸಬ್ಸಿಡಿಗಳು ಅಕ್ರಮ:...

ಭಾರತದ ರಫ್ತು ಸಬ್ಸಿಡಿಗಳು ಅಕ್ರಮ: ಡಬ್ಲ್ಯುಟಿಒ ಸಮಿತಿ

ವಾರ್ತಾಭಾರತಿವಾರ್ತಾಭಾರತಿ1 Nov 2019 9:48 PM IST
share
ಭಾರತದ ರಫ್ತು ಸಬ್ಸಿಡಿಗಳು ಅಕ್ರಮ: ಡಬ್ಲ್ಯುಟಿಒ ಸಮಿತಿ

ಹೊಸದಿಲ್ಲಿ,ನ.1: ಅಮೆರಿಕವು ಸಲ್ಲಿಸಿದ್ದ ದೂರನ್ನು ಪುರಸ್ಕರಿಸಿರುವ ವಿಶ್ವ ವಾಣಿಜ್ಯ ಸಂಘಟನೆ (ಡಬ್ಲ್ಯುಟಿಒ)ಯ ವಿವಾದ ಸಮಿತಿಯು ಭಾರತದ ರಫ್ತು ಸಬ್ಸಿಡಿಗಳು ಅಕ್ರಮವಾಗಿವೆ ಎಂದು ಗುರುವಾರ ತೀರ್ಪು ನೀಡಿದೆ. 90ರಿಂದ 180 ದಿನಗಳ ಅವಧಿಗಳಲ್ಲಿ ಈ ಸಬ್ಸಿಡಿಗಳನ್ನು ರದ್ದುಗೊಳಿಸುವಂತೆ ಅದು ಸರಕಾರಕ್ಕೆ ನಿರ್ದೇಶ ನೀಡಿದೆ.

ಸೀಮಾಸುಂಕ ಮತ್ತು ತೆರಿಗೆ ವಿನಾಯಿತಿಗಳ ರೂಪದಲ್ಲಿ ನೀಡಲಾಗಿರುವ ರಫ್ತು ಸಬ್ಸಿಡಿಯನ್ನು ಪ್ರಶ್ನಿಸಿದ್ದ ಅಮೆರಿಕದ ವಾದವನ್ನು ಸಮಿತಿಯು ಒಪ್ಪಿಕೊಂಡಿದೆಯಾದರೂ ಅದರ ಇತರ ಕೆಲವು ವಾದಗಳನ್ನು ತಿರಸ್ಕರಿಸಿದೆ.

ಉಕ್ಕು, ಔಷಧಿಗಳು, ರಾಸಾಯನಿಕಗಳು, ಮಾಹಿತಿ ತಂತ್ರಜ್ಞಾನ ಮತ್ತು ಜವಳಿ ಉತ್ಪನ್ನಗಳ ಉತ್ಪಾದಕರು ಸೇರಿದಂತೆ ಭಾರತೀಯ ರಫ್ತುದಾರರಿಗೆ ಏಳು ಶತಕೋಟಿ ಡಾ.(49,663 ಕೋ.ರೂ.)ಗೂ ಹೆಚ್ಚಿನ ನಿಷೇಧಿತ ವಾರ್ಷಿಕ ಸಬ್ಸಿಡಿಗಳನ್ನು ಭಾರತವು ಒದಗಿಸುತ್ತಿದೆ ಎನ್ನುವುದನ್ನು ಡಬ್ಲ್ಯುಟಿಒ ಗಮನಕ್ಕೆ ತೆಗೆದುಕೊಂಡಿದೆ ಎಂದು ಅಮೆರಿಕದ ವ್ಯಾಪಾರ ಪ್ರತಿನಿಧಿ ಕಚೇರಿಯು ಹೇಳಿಕೆಯೊಂದರಲ್ಲಿ ತಿಳಿಸಿದೆ.

ಸಬ್ಸಿಡಿಗಳು ಮತ್ತು ದೇಶಿಯ ಉತ್ಪಾದಕರನ್ನು ರಕ್ಷಿಸಲು ಆಮದುಗಳ ಮೇಲೆ ಸುಂಕವನ್ನು ಹೇರುವ ಕ್ರಮಗಳ ಕುರಿತಂತೆ ಡಬ್ಲುಟಿಒ ಒಪ್ಪಂದದಡಿ ರಫ್ತು ಸುಂಕ ನಿಷೇಧದಿಂದ ತಾನು ವಿನಾಯಿತಿ ಹೊಂದಿದ್ದೇನೆ ಎಂಬ ಭಾರತದ ವಾದವನ್ನು ತಿರಸ್ಕರಿಸಿರುವುದಾಗಿ ವಿವಾದ ಸಮಿತಿಯು ತನ್ನ ತೀರ್ಪಿನಲ್ಲಿ ತಿಳಿಸಿದೆ.

  ಕಳೆದ ವರ್ಷ ಡಬ್ಲ್ಯುಟಿಒಗೆ ಸಲ್ಲಿಸಿದ್ದ ತನ್ನ ದೂರಿನಲ್ಲಿ ಅಮೆರಿಕವು,ಭಾರತದ ರಫ್ತು ಕಾರ್ಯಕ್ರಮಗಳು ತನ್ನ ಕಾರ್ಮಿಕರಿಗೆ ಹಾನಿಯನ್ನುಂಟು ಮಾಡುತ್ತಿದೆ ಎಂದು ಆರೋಪಿಸಿತ್ತು. ರಫ್ತು ಸಬ್ಸಿಡಿಗಳನ್ನು ಹಂತಹಂತವಾಗಿ ರದ್ದುಗೊಳಿಸಬೇಕೆಂಬ ಒಪ್ಪಂದದಲ್ಲಿಯ ಅಂಶವನ್ನು ಅದು ಉಲ್ಲೇಖಿಸಿತ್ತು.

ಒಪ್ಪಂದದಂತೆ 1990ರ ವಿನಿಮಯ ದರಗಳಂತೆ ಸತತ ಮೂರು ವರ್ಷಗಳಿಗೆ 1,000 ಡಾ.ರಾಷ್ಟ್ರೀಯ ತಲಾದಾಯವನ್ನು ದಾಟುವ ಕನಿಷ್ಠ ಅಭಿವೃದ್ಧಿಗೊಂಡ ಮತ್ತು ಅಭಿವೃದ್ಧಿಶೀಲ ದೇಶಗಳಿಗೆ ಎಲ್ಲ ರಫ್ತು ಸಬ್ಸಿಡಿಗಳನ್ನು ನಿಲ್ಲಿಸಲು ಎಂಟು ವರ್ಷಗಳ ಕಾಲಾವಕಾಶವಿದೆ.

ಭಾರತಕ್ಕೆ ಆರಂಭದಲ್ಲಿ ನೀಡಿದ್ದ ವಿನಾಯಿತಿಯು ಅಂತ್ಯಗೊಂಡಿದೆ ಮತ್ತು ಇನ್ನಷ್ಟು ಸಮಯಾವಕಾಶವನ್ನು ಪಡೆಯಲು ಅದು ಅರ್ಹವಾಗಿಲ್ಲ ಎಂದು ವಿವಾದ ಸಮಿತಿಯು ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X