Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸ್ಪೈವೇರ್ ಗಳು ಭಾರತದಲ್ಲಿ...

ಸ್ಪೈವೇರ್ ಗಳು ಭಾರತದಲ್ಲಿ ಕಾರ್ಯಾಚರಿಸುತ್ತಿರುವುದು ಸರಕಾರಕ್ಕೆ ಗೊತ್ತಿತ್ತು: ಮಾಜಿ ಗೃಹ ಕಾರ್ಯದರ್ಶಿ ಪಿಳ್ಳೈ

ಭಾರತೀಯರ ಮೇಲೆ ಬೇಹುಗಾರಿಕೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ1 Nov 2019 11:16 PM IST
share
ಸ್ಪೈವೇರ್ ಗಳು ಭಾರತದಲ್ಲಿ ಕಾರ್ಯಾಚರಿಸುತ್ತಿರುವುದು ಸರಕಾರಕ್ಕೆ ಗೊತ್ತಿತ್ತು: ಮಾಜಿ ಗೃಹ ಕಾರ್ಯದರ್ಶಿ ಪಿಳ್ಳೈ

ಹೊಸದಿಲ್ಲಿ,ನ.1: ಇಸ್ರೇಲಿ ತಂತ್ರಜ್ಞಾನ ಸಂಸ್ಥೆ ಎನ್‌ಎಸ್‌ಒ ಭಾರತದಲ್ಲಿ ಕಾರ್ಯಾಚರಿಸುತ್ತಿದ್ದುದು ತನಗೆ ಗೊತ್ತಿತ್ತು ಮತ್ತು ಅದು ದೇಶದಲ್ಲಿಯ ಖಾಸಗಿ ಸಂಸ್ಥೆಗಳು ಮತ್ತು ವ್ಯಕ್ತಿಗಳಿಗೆ ಗೂಢಚರ್ಯೆ ತಂತ್ರಾಂಶಗಳನ್ನು ಮಾರಾಟ ಮಾಡಿತ್ತು ಎಂದು ಮಾಜಿ ಗೃಹ ಕಾರ್ಯದರ್ಶಿ ಜಿ.ಕೆ.ಪಿಳ್ಳೈ ಅವರು ಹೇಳಿದ್ದಾರೆ.

ಸರಕಾರಿ ಏಜೆನ್ಸಿಗಳು ಹಿಂದೆಯೂ ಎನ್‌ಎಸ್‌ಒದಂತಹ ಸಂಸ್ಥೆಗಳಿಂದ ಸ್ಪೈವೇರ್‌ಗಳನ್ನು ಖರೀದಿಸಿವೆ ಎಂದು ಸುದ್ದಿ ಜಾಲತಾಣ ‘ದಿ ಕ್ವಿಂಟ್’ಗೆ ನೀಡಿರುವ ಸಂದರ್ಶನದಲ್ಲಿ ದೃಢಪಡಿಸಿರುವ ಪಿಳ್ಳೈ,ಇವೆಲ್ಲ ಸಾಮಾನ್ಯ ಎಂದು ಹೇಳಿದ್ದಾರೆ.

ಎನ್‌ಎಸ್‌ಒ ನಿರ್ಮಿತ ಸ್ಪೈವೇರ್ ‘ಪೆಗಾಸಸ್’ ಅನ್ನು ಕನಿಷ್ಠ ಎರಡು ಡಝನ್ ಭಾರತೀಯ ಸಾಮಾಜಿಕ ಹೋರಾಟಗಾರರು ಮತ್ತು ಮಾನವ ಹಕ್ಕುಗಳ ವಕೀಲರು ಸೇರಿದಂತೆ ವಿಶ್ವಾದ್ಯಂತ 1,400 ಜನರ ಖಾತೆಗಳನ್ನು ಹ್ಯಾಕ್ ಮಾಡಲು ಬಳಸಲಾಗಿತ್ತು ಎನ್ನುವುದನ್ನು ವಾಟ್ಸ್‌ಆ್ಯಪ್ ದೃಢಪಡಿಸಿದ ನಂತರ ತನ್ನನ್ನು ಸಂಪರ್ಕಿಸಿದ್ದ ‘ದಿ ಕ್ವಿಂಟ್‌’ಗೆ ‘ಪರವಾನಿಗೆ ಹೊಂದಿರುವ ಸರಕಾರಿ ಗುಪ್ತಚರ ಮತ್ತು ಕಾನೂನು ಜಾರಿ ಸಂಸ್ಥೆಗಳಿಗೆ ತಂತ್ರಜ್ಞಾನವನ್ನು ಒದಗಿಸುವುದು ತನ್ನ ಏಕಮಾತ್ರ ಉದ್ದೇಶವಾಗಿದೆ ’ಎಂದು ಎನ್‌ಎಸ್‌ಒ ತಿಳಿಸಿತ್ತು.

“ಭಾರತೀಯ ಪ್ರಜೆಗಳ ವಿರುದ್ಧ ಬೇಹುಗಾರಿಕೆ ನಡಸಲು ಸರಕಾರವು ಎನ್‌ಎಸ್‌ಒನಿಂದ ಪೆಗಾಸಸ್‌ನ್ನು ಖರೀದಿಸಿತ್ತೇ? ಅದನ್ನು ಕಾನೂನು ಸಮ್ಮತ ನಿಗಾಕ್ಕೆ ಬಳಸಬಹುದೇ ಮತ್ತು ಅದು ಹೇಗೆ ಕಾರ್ಯನಿರ್ವಹಿಸುತ್ತದೆ.” ಎಂಬ ಪ್ರಶ್ನೆಗೆ ಉತ್ತರಿಸಿದ ಪಿಳ್ಳೈ,ಗುಪ್ತಚರ ವರದಿಗಳ ಮೂಲಕ ಗೃಹ ಕಾರ್ಯದರ್ಶಿಗಳಿಗೆ ಕೋರಿಕೆಯನ್ನು ಸಲ್ಲಿಸಿದಾಗ ಮತ್ತು ಅವರು ಅನುಮತಿಸಿದಾಗ ಮಾತ್ರ ಕಣ್ಗಾವಲನ್ನು ನಡೆಸಲಾಗುತ್ತದೆ. ರಾಜ್ಯ ಸರಕಾರಗಳೂ ಕಣ್ಗಾವಲು ಇರಿಸಲು ತಮ್ಮ ಪೊಲೀಸ್ ಪಡೆಗೆ ಅಧಿಕಾರ ನೀಡಬಹುದು. ವಿವಿಧ ರಾಜ್ಯಗಳ ಕಣ್ಗಾವಲಿಗೆ ಒಳಪಟ್ಟಿರುವ ವ್ಯಕ್ತಿಗಳ ಸಂಖ್ಯೆ ಕೇಂದ್ರ ಸರಕಾರದ ಕಣ್ಗಾವಲಿನ ಸಂಖ್ಯೆಗಿಂತ ಅಧಿಕವಾಗಿರುತ್ತದೆ ಎಂದು ತಿಳಿಸಿದರು.

   ತನ್ನ ಅಧಿಕಾರಾವಧಿ (2009-2011)ಯಲ್ಲಿ ಸುಮಾರು 4,000ದಿಂದ 8,000 ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಕೇಂದ್ರ ಸರಕಾರದ ಕಣ್ಗಾವಲಿಗೆ ಒಳಪಡಿಸಲಾಗಿತ್ತು ಎಂದೂ ಪಿಳ್ಳೈ ತಿಳಿಸಿದರು. ಯುಪಿಎ-2 ಸರಕಾರದಲ್ಲಿ ಪಿ.ಚಿದಂಬರಂ ಅವರು ಗೃಹಸಚಿವರಾಗಿ ನೇಮಕಗೊಂಡಾಗ ಪಿಳ್ಳೈ ಗೃಹ ಕಾರ್ಯದರ್ಶಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X