Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದೇವಧರ್ ಟ್ರೋಫಿ: ಭಾರತ ‘ಸಿ’ ಪೈನಲ್...

ದೇವಧರ್ ಟ್ರೋಫಿ: ಭಾರತ ‘ಸಿ’ ಪೈನಲ್ ಪ್ರವೇಶ

ಶುಭಮನ್ ಗಿಲ್, ಮಾಯಾಂಕ್ ಶತಕ, ಜಲಜ್ ಸಕ್ಸೇನಾ ಜೀವನಶ್ರೇಷ್ಠ ಬೌಲಿಂಗ್

ವಾರ್ತಾಭಾರತಿವಾರ್ತಾಭಾರತಿ1 Nov 2019 11:43 PM IST
share
ದೇವಧರ್ ಟ್ರೋಫಿ: ಭಾರತ ‘ಸಿ’ ಪೈನಲ್ ಪ್ರವೇಶ

ರಾಂಚಿ, ನ.1: ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಶುಭಮನ್ ಗಿಲ್ ಹಾಗೂ ಮಾಯಾಂಕ್ ಅಗರ್ವಾಲ್ ಆಕರ್ಷಕ ಶತಕ ಹಾಗೂ ಆಲ್‌ರೌಂಡರ್ ಜಲಜ್ ಸಕ್ಸೇನಾ ಅವರ ಜೀವನಶ್ರೇಷ್ಠ ಬೌಲಿಂಗ್ ನೆರವಿನಿಂದ ಭಾರತ ‘ಎ’ ತಂಡವನ್ನು 232 ರನ್‌ಗಳಿಂದ ಹೀನಾಯವಾಗಿ ಸೋಲಿಸಿದ ಭಾರತ ‘ಸಿ’ ತಂಡ ದೇವಧರ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದೆ.

ಶುಕ್ರವಾರ ಇಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ‘ಸಿ’ ತಂಡ ನಿಗದಿತ 50 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 366 ರನ್‌ಗಳಿಸಿತು. ಭಾರತ ‘ಸಿ’ ತಂಡದ ನಾಯಕ ಗಿಲ್(143 ರನ್, 142 ಎಸೆತ) ಹಾಗೂ ಟೆಸ್ಟ್ ಓಪನರ್ ಅಗರ್ವಾಲ್(120 ರನ್, 111 ಎಸೆತ)ಮೊದಲ ವಿಕೆಟ್‌ಗೆ 226 ರನ್ ಜೊತೆಯಾಟ ನಡೆಸಿ ತಂಡ ಉತ್ತಮ ಮೊತ್ತ ಗಳಿಸಲು ಭದ್ರಬುನಾದಿ ಹಾಕಿಕೊಟ್ಟರು. ಸೂರ್ಯಕುಮಾರ್ ಯಾದವ್(ಔಟಾಗದೆ 72, 29 ಎಸೆತ)ಭಾರತದ ಮೊತ್ತವನ್ನು 336ಕ್ಕೆ ತಲುಪಿಸಿದರು.

 ಗೆಲ್ಲಲು ಕಠಿಣ ಗುರಿ ಬೆನ್ನಟ್ಟಿದ ಭಾರತ ‘ಎ’ ತಂಡ ಆಫ್-ಸ್ಪಿನ್ನರ್ ಸಕ್ಸೇನಾ (7-41) ಅವರ ಅಮೋಘ ಬೌಲಿಂಗ್ ದಾಳಿಗೆ ತತ್ತರಿಸಿ ಬ್ಯಾಟಿಂಗ್ ವೈಫಲ್ಯಕ್ಕೀಡಾಯಿತು. 29.5 ಓವರ್‌ಗಳಲ್ಲಿ 134 ರನ್‌ಗಳಿಗೆ ಆಲೌಟಾಯಿತು. ಸತತ ಎರಡನೇ ದಿನ ಎರಡನೇ ಸೋಲು ಕಂಡಿರುವ ಭಾರತ ಎ ತಂಡ ಟೂರ್ನಿಯಿಂದ ನಿರ್ಗಮಿಸಿದೆ.

 ಭಾರತ ‘ಸಿ’ ಹಾಗೂ ಭಾರತ ‘ಬಿ’ ತಂಡಗಳು ಸೋಮವಾರ ಫೈನಲ್‌ನಲ್ಲಿ ಸೆಣಸಾಡಲಿವೆ. ಭಾರತ‘ಬಿ’ ತಂಡ ಗುರುವಾರ ಭಾರತ ‘ಎ’ ತಂಡವನ್ನು ಮಣಿಸಿತ್ತು. ಭಾರತ ‘ಸಿ’ ಹಾಗೂ ‘ಬಿ’ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುವ ಮೊದಲು ಶನಿವಾರ ಕೊನೆಯ ಲೀಗ್ ಪಂದ್ಯವನ್ನು ಆಡಲಿವೆ.

 ಭಾರತ ‘ಸಿ’ ತಂಡದ ಅಗರ್ವಾಲ್ ಹಾಗೂ ಗಿಲ್ ರನ್ ಹೊಳೆ ಹರಿಸಿ ಭಾರತ ‘ಎ’ ಆಟಗಾರರನ್ನು ಸ್ಪರ್ಧೆಯಿಂದ ಹೊರಗಿಟ್ಟರು. ದಕ್ಷಿಣ ಆಫ್ರಿಕಾ ವಿರುದ್ಧ ಸ್ವದೇಶದಲ್ಲಿ ನಡೆದಿದ್ದ ಟೆಸ್ಟ್ ಸರಣಿಗಾಗಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದರೂ ಆಡುವ ಅವಕಾಶ ಪಡೆಯದ ಗಿಲ್ 142 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 10 ಬೌಂಡರಿಗಳನ್ನು ಗಳಿಸಿ ಲಿಸ್ಟ್ ‘ಎ’ಕ್ರಿಕೆಟ್‌ನಲ್ಲಿ ಗರಿಷ್ಠ ಸ್ಕೋರ್ ಗಳಿಸಿದರು.

ಟೆಸ್ಟ್ ಕ್ರಿಕೆಟ್‌ನಲ್ಲಿ ಪ್ರಚಂಡ ಫಾರ್ಮ್‌ನ್ನು 50 ಓವರ್‌ಗಳ ಕ್ರಿಕೆಟ್‌ಗೂ ವಿಸ್ತರಿಸಿದ ಅಗರ್ವಾಲ್‌ರ 111 ಎಸೆತಗಳ ಇನಿಂಗ್ಸ್‌ನಲ್ಲಿ 15 ಬೌಂಡರಿ ಹಾಗೂ ಒಂದು ಸಿಕ್ಸರ್ ಇತ್ತು.

ಗಿಲ್ ಹಾಗೂ ಮಾಯಾಂಕ್ ದ್ವಿಶತಕದ ಜೊತೆಯಾಟ ನಡೆಸಿದ ಬಳಿಕ ಸೂರ್ಯಕುಮಾರ್ ತಾನೇಕೆ ಅಪಾಯಕಾರಿ ಏಕದಿನ ಕ್ರಿಕೆಟಿಗ ಎನ್ನುವುದನ್ನು ತೋರಿಸಿಕೊಟ್ಟರು. ಮುಂಬೈ ಬ್ಯಾಟ್ಸ್‌ಮನ್ ಕುಮಾರ್ ಕೇವಲ 29 ಎಸೆತಗಳಲ್ಲಿ 9 ಬೌಂಡರಿ ಹಾಗೂ 4 ಸಿಕ್ಸರ್‌ಗಳನ್ನು ಸಿಡಿಸುವುದರೊಂದಿಗೆ ಭಾರತ ‘ಸಿ’ ತಂಡದ ಇನಿಂಗ್ಸ್‌ಗೆ ಪರಿಪೂರ್ಣ ಅಂತ್ಯ ಹಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X