Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಟ್ವೆಂಟಿ-20: ಇಂಗ್ಲೆಂಡ್ ಗೆ ಜಯ

ಮೊದಲ ಟ್ವೆಂಟಿ-20: ಇಂಗ್ಲೆಂಡ್ ಗೆ ಜಯ

►ಜೇಮ್ಸ್ ವಿನ್ಸಿ ಅರ್ಧಶತಕ ► ಕಿವೀಸ್ ಗೆ ಸೋಲು

ವಾರ್ತಾಭಾರತಿವಾರ್ತಾಭಾರತಿ1 Nov 2019 11:46 PM IST
share
ಮೊದಲ ಟ್ವೆಂಟಿ-20: ಇಂಗ್ಲೆಂಡ್ ಗೆ ಜಯ

ಕ್ರೈಸ್ಟ್‌ಚರ್ಚ್, ನ.1: ಜೇಮ್ಸ್ ವಿನ್ಸಿ ಅವರ ಚೊಚ್ಚಲ ಅರ್ಧಶತಕದ ಸಹಾಯದಿಂದ ಇಂಗ್ಲೆಂಡ್ ತಂಡ ನ್ಯೂಝಿಲ್ಯಾಂಡ್ ವಿರುದ್ಧ ಶುಕ್ರವಾರ ನಡೆದ ಮೊದಲ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಏಳು ವಿಕೆಟ್‌ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದೆ.

 ಗೆಲ್ಲಲು 154 ರನ್ ಗುರಿ ಪಡೆದಿದ್ದ ಇಂಗ್ಲೆಂಡ್ ಸರ್ವಾಧಿಕ ಸ್ಕೋರ್(59) ಗಳಿಸಿದ ವಿನ್ಸಿ ನೆರವಿನಿಂದ 18.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆಯಿತು. ಆಕರ್ಷಕ ಪ್ರದರ್ಶನ ನೀಡಿದ ವಿನ್ಸಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ರನ್ ಚೇಸಿಂಗ್ ವೇಳೆ ಇಂಗ್ಲೆಂಡ್ ತಂಡ ಆರಂಭಿಕ ಆಟಗಾರ ಡೇವಿಡ್ ಮಲಾನ್(11) ವಿಕೆಟನ್ನು ಬೇಗನೆ ಕಳೆದುಕೊಂಡಿತು. ಇನ್ನೋರ್ವ ಆರಂಭಿಕ ಬ್ಯಾಟ್ಸ್‌ಮನ್ ಜಾನಿ ಬೈರ್ ಸ್ಟೋವ್ 35 ರನ್(28ಎಸೆತ)ಗಳಿಸಿ ವಿಕೆಟ್ ಒಪ್ಪಿಸಿದರು. ಆಗ ಜೊತೆಯಾದ ವಿನ್ಸಿ ಹಾಗೂ ಮೊರ್ಗನ್ ಮೂರನೇ ವಿಕೆಟ್‌ಗೆ 54 ರನ್ ಸೇರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

 ಆತಿಥೇಯರನ್ನು 5 ವಿಕೆಟ್ ನಷ್ಟಕ್ಕೆ 153 ರನ್‌ಗೆ ನಿಯಂತ್ರಿಸಿ ಗೆಲುವಿನ ವೇದಿಕೆ ನಿರ್ಮಿಸಿದ್ದ ಇಂಗ್ಲೆಂಡ್‌ನ ಬೌಲರ್‌ಗಳನ್ನು ನಾಯಕ ಮೊರ್ಗನ್ ಶ್ಲಾಘಿಸಿದರು. ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್(3-23) ಮೂರು ವಿಕೆಟ್‌ಗಳನ್ನು ಪಡೆದರೂ ಕಿವೀಸ್‌ಗೆ ಗೆಲುವು ತಂದುಕೊಡಲು ವಿಫಲರಾದರು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಕಿವೀಸ್ ದಾಂಡಿಗರು ದೊಡ್ಡ ಮೊತ್ತ ಗಳಿಸಲು ವಿಫಲರಾದರು. ಕಿವೀಸ್‌ನ ಪರ ರಾಸ್ ಟೇಲರ್(44, 35 ಎಸೆತ, 3 ಬೌಂಡರಿ, 1 ಸಿಕ್ಸರ್)ಸರ್ವಾಧಿಕ ಸ್ಕೋರ್ ಗಳಿಸಿದರು. ಸೆಫರ್ಟ್(32)ಹಾಗೂ ಮಿಚೆಲ್(ಔಟಾಗದೆ 30)ಎರಡಂಕೆಯ ಸ್ಕೋರ್ ಗಳಿಸಿದರು.

 ವಿಶ್ವಕಪ್ ಜಯಿಸಿದ ಬಳಿಕ ಆ್ಯಶಸ್ ಸರಣಿಯನ್ನು ಉಳಿಸಿಕೊಳ್ಳಲು ವಿಫಲವಾಗಿದ್ದ ಇಂಗ್ಲೆಂಡ್‌ನ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಆದರೆ, ಮೊದಲ ಪಂದ್ಯದಲ್ಲಿ ಹಿರಿಯ ಆಟಗಾರರ ಅನುಪಸ್ಥಿತಿ ತಂಡಕ್ಕೆ ಕಾಡಲಿಲ್ಲ. ಗಾಯದ ಸಮಸ್ಯೆಯನ್ನು ಎದುರಿಸುತ್ತಿರುವ ಕಿವೀಸ್‌ನ ಖಾಯಂ ನಾಯಕ ಕೇನ್ ವಿಲಿಯಮ್ಸನ್ ಸರಣಿಯಿಂದ ಹೊರಗುಳಿದಿದ್ದರು. ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಬೌಲರ್ ಟಿಮ್ ಸೌಥಿ ತಂಡವನ್ನು ನಾಯಕನಾಗಿ ಮುನ್ನಡೆಸಿದರು.

ಜುಲೈನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಸೆಣಸಾಡಿದ ಬಳಿಕ ಮೊದಲ ಬಾರಿ ಉಭಯ ತಂಡಗಳು ಮುಖಾಮುಖಿಯಾದವು. ವಿಶ್ವಕಪ್ ಫೈನಲ್ ಪಂದ್ಯದ ಸ್ಕೋರ್ ಟೈ ಆಗಿದ್ದು, ಹೆಚ್ಚು ಬೌಂಡರಿಗಳನ್ನು ಬಾರಿಸಿದ ಆಧಾರದಲ್ಲಿ ಇಂಗ್ಲೆಂಡ್ ಜಯಶಾಲಿಯಾಗಿತ್ತು.

ಇದೀಗ ಉಭಯ ತಂಡಗಳು ಮುಂದಿನ ವರ್ಷ ನಡೆಯಲಿರುವ ಟಿ-20 ವಿಶ್ವಕಪ್ ತಯಾರಿಯತ್ತ ಚಿತ್ತಹರಿಸಿವೆ. ಇಂಗ್ಲೆಂಡ್ ವಿಶ್ವ ರ್ಯಾಂಕಿಂಗ್‌ನಲ್ಲಿ ದ್ವಿತೀಯ ಸ್ಥಾನದಲ್ಲಿದೆ. ನ್ಯೂಝಿಲ್ಯಾಂಡ್ ಆರನೇ ಸ್ಥಾನದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X