ಕೂಳೂರಿನಲ್ಲಿ ಐವನ್ ಪ್ರಚಾರ
![ಕೂಳೂರಿನಲ್ಲಿ ಐವನ್ ಪ್ರಚಾರ ಕೂಳೂರಿನಲ್ಲಿ ಐವನ್ ಪ್ರಚಾರ](https://www.varthabharati.in/sites/default/files/images/articles/2019/11/2/217524-1572708066.jpg)
ಮಂಗಳೂರು, ನ.2: ಸರಕಾರಿ ಜಾಗಗಳಲ್ಲಿ ವಾಸವಾಗಿರುವ ಬಡವರಿಗೆ ಹಕ್ಕು ಪತ್ರಗಳನ್ನು ನೀಡುವ ಮೂಲಕ ಬಡವರ ಮನೆಗೆ ಅನ್ನಭಾಗ್ಯ ಯೋಜನೆಯಡಿ ಒಂದು ಮನೆಯಲ್ಲಿ ಒರ್ವ ವ್ಯಕ್ತಿಗೆ 7 ಕೆ.ಜಿ. ಅಕ್ಕಿಯನ್ನು ನೀಡುವುದರ ಮೂಲಕ ಹಸಿವನ್ನು ನೀಗಿಸುವ ಮೂಲಕ ಕಾಂಗ್ರೆಸ್ ಪ್ರಮುಖ ಸಾಧನೆಗೈದಿದೆ. ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಯೋಜನೆಗಳು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರಮುಖ ವಿಚಾರವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.
ಕೂಳೂರು ವಾರ್ಡ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಸಂದರ್ಭ ಮಾಜಿ ಶಾಸಕ ಮೊಯ್ದಿನ್ ಬಾವಾ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
Next Story