ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು
ಕಾಪು, ನ.2: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕಿಯೊಬ್ಬರು ಮೃತಪಟ್ಟ ಘಟನೆ ನ.1ರಂದು ರಾತ್ರಿ ವೇಳೆ ಮಜೂರು ರೈಲ್ವೆ ಸೇತುವೆ ಬಳಿ ನಡೆದಿದೆ.
ಮೃತರನ್ನು ಕಳತ್ತೂರು ಚಂದ್ರನಗರದ ಮೈಲಾ(46) ಎಂದು ಗುರುತಿಸ ಲಾಗಿದೆ. ಇವರು ಮಜೂರು ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ. ಅಪಘಾತ ನಡೆಸಿದ ವಾಹನ ಚಾಲಕ ತನ್ನ ವಾಹನವನ್ನು ನಿಲ್ಲಸದೆ ಪರಾರಿಯಾಗಿದ್ದಾನೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story