Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಕ್ಷರ್ ಪಟೇಲ್, ಮಾಯಾಂಕ್ ಮಾರ್ಕಂಡೆ...

ಅಕ್ಷರ್ ಪಟೇಲ್, ಮಾಯಾಂಕ್ ಮಾರ್ಕಂಡೆ ಸಾಹಸ: ಭಾರತ ‘ಬಿ’ ತಂಡವನ್ನು ಮಣಿಸಿದ ಭಾರತ ‘ಸಿ’

ವಾರ್ತಾಭಾರತಿವಾರ್ತಾಭಾರತಿ2 Nov 2019 11:55 PM IST
share
ಅಕ್ಷರ್ ಪಟೇಲ್, ಮಾಯಾಂಕ್ ಮಾರ್ಕಂಡೆ ಸಾಹಸ: ಭಾರತ ‘ಬಿ’ ತಂಡವನ್ನು ಮಣಿಸಿದ ಭಾರತ ‘ಸಿ’

ರಾಂಚಿ, ನ.2: ಆಲ್‌ರೌಂಡರ್ ಅಕ್ಷರ್ ಪಟೇಲ್ ಅರ್ಧಶತಕ(98 ರನ್, 61 ಎಸೆತ)ಹಾಗೂ ಲೆಗ್ ಸ್ಪಿನ್ನರ್ ಮಾಯಾಂಕ್ ಮಾರ್ಕಂಡೆ(4-25) ನಾಲ್ಕು ವಿಕೆಟ್‌ಗಳ ಗೊಂಚಲು ನೆರವಿನಿಂದ ಭಾರತ ‘ಸಿ’ ತಂಡ ಶನಿವಾರ ಇಲ್ಲಿ ನಡೆದ ದೇವಧರ್ ಟ್ರೋಫಿ ಏಕದಿನ ಟೂರ್ನಿಯ ಮೂರನೇ ಹಾಗೂ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ‘ಬಿ’ ತಂಡವನ್ನು 136 ರನ್‌ಗಳ ಅಂತರದಿಂದ ಮಣಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ‘ಸಿ’ ತಂಡ ಅಕ್ಷರ್ ಪಟೇಲ್ ಹಾಗೂ ವಿರಾಟ್ ಸಿಂಗ್(76 ರನ್,96 ಎಸೆತ)ಅರ್ಧಶತಕಗಳ ಕೊಡುಗೆಯ ನೆರವಿನಿಂದ 5 ವಿಕೆಟ್‌ಗಳ ನಷ್ಟಕ್ಕೆ 280 ರನ್ ಗಳಿಸಿತು. ಗೆಲ್ಲಲು 281 ರನ್ ಗುರಿ ಬೆನ್ನಟ್ಟಿದ ಭಾರತ ‘ಬಿ’ ತಂಡವನ್ನು 43.4 ಓವರ್‌ಗಳಲ್ಲಿ 144 ರನ್‌ಗಳಿಗೆ ನಿಯಂತ್ರಿಸಿದ ಭಾರತ ‘ಸಿ’ಭರ್ಜರಿ ಗೆಲುವು ದಾಖಲಿಸಿತು.

ಪರಾಜಿತ ಭಾರತ ‘ಬಿ’ ತಂಡದ ಪರ ಬಾಬಾ ಅಪರಾಜಿತ್ ಸರ್ವಾಧಿಕ ಸ್ಕೋರ್(53 ರನ್, 90 ಎಸೆತ, 5 ಬೌಂಡರಿ)ಗಳಿಸಿದರು. ಆದರೆ, ಅವರಿಗೆ ಮತ್ತೊಂದು ಕಡೆಯಿಂದ ಸರಿಯಾದ ಸಾಥ್ ಸಿಗಲಿಲ್ಲ. ಭಾರತ ‘ಬಿ‘ ಹಾಗೂ ಭಾರತ ‘ಸಿ’ ತಂಡಗಳು ಈಗಾಗಲೇ ಫೈನಲ್‌ಗೆ ಅರ್ಹತೆ ಪಡೆದಿವೆ. ಸೋಮವಾರ ರಾಂಚಿಯಲ್ಲಿ ನಡೆಯುವ ಫೈನಲ್‌ನಲ್ಲಿ ಈ ಎರಡು ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲಿವೆ.

ಗೆಲ್ಲಲು ಕಠಿಣ ಗುರಿ ಪಡೆದ ಭಾರತ ‘ಬಿ’ ತಂಡದ ಬ್ಯಾಟ್ಸ್‌ಮನ್‌ಗಳು ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದರು. ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್(20) ಹಾಗೂ ಯಶಸ್ವಿ ಜೈಸ್ವಾಲ್(28)ಕ್ರಮವಾಗಿ ದಿವೇಶ್ ಪಥಾನಿಯ ಹಾಗೂ ಜಲಜ್ ಸಕ್ಸೇನಾಗೆ ವಿಕೆಟ್ ಒಪ್ಪಿಸಿದರು. ಆಗ ಭಾರತ ‘ಬಿ’ ಸ್ಕೋರ್ 74ಕ್ಕೆ2.

ಭಾರತ ‘ಬಿ’ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದು, ಕೇದಾರ್ ಜಾಧವ್(5), ನಿತೀಶ್ ರಾಣಾ(1), ಪಾರ್ಥಿವ್ ಪಟೇಲ್(1), ವಿಜಯ ಶಂಕರ್(9) ಹಾಗೂ ಅನುಕೂಲ್ ರಾಯ್(1)ಎರಡಂಕೆಯ ಸ್ಕೋರ್ ಗಳಿಸಲು ವಿಫಲರಾದರು. ಶಹಬಾಝ್ ನದೀಂ(12) ಬೇಗನೆ ಔಟಾದರು. ಏಕಾಂಗಿ ಹೋರಾಟ ನೀಡಿದ ಅಪರಾಜಿತ್ 44ನೇ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು. ರೂಶ್ ಕಲಾರಿಯಾ(6) ವಿಕೆಟ್ ಪತನದೊಂದಿಗೆ ಭಾರತ ಬಿ ತಂಡದ ಸವಾಲು ಅಂತ್ಯವಾಯಿತು.

 ಇದಕ್ಕೂ ಮೊದಲು ಭಾರತ ‘ಸಿ’ ತಂಡ ನಿಧಾನಗತಿಯ ಆರಂಭ ಪಡೆದಿದ್ದು, 13.1 ಓವರ್‌ಗಳಲ್ಲಿ 54 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. ನಾಯಕ ಶುಭಮನ್ ಗಿಲ್(1)ಇನಿಂಗ್ಸ್‌ನ ಎರಡನೇ ಓವರ್‌ನಲ್ಲಿ ವಿಜಯ ಶಂಕರ್‌ಗೆ ವಿಕೆಟ್ ಒಪ್ಪಿಸಿದರು. ಪ್ರಿಯಾಂ ಗರ್ಗ್(18) ಹಾಗೂ ಅನ್ಮೋಲ್‌ಪ್ರೀತ್ ಸಿಂಗ್(23)ರನ್ನು ಮುಹಮ್ಮದ್ ಸಿರಾಜ್(1-60) ಹಾಗೂ ಎಸ್.ನದೀಂ(2-37)ಕ್ರಮವಾಗಿ 13ನೇ ಹಾಗೂ 14ನೇ ಓವರ್‌ನಲ್ಲಿ ಪೆವಿಲಿಯನ್‌ಗೆ ಕಳುಹಿಸಿದರು.

ಸೂರ್ಯಕುಮಾರ್ ಯಾದವ್(10) ಕೂಡ ಬೇಗನೆ ಔಟಾದರು. ದಿನೇಶ್ ಕಾರ್ತಿಕ್(34)ನಿತೀಶ್ ರಾಣಾಗೆ(1-30)ವಿಕೆಟ್ ಒಪ್ಪಿಸುವುದರೊಂದಿಗೆ ಭಾರತ ಸಿ ತಂಡ 126 ರನ್‌ಗೆ ಐದು ವಿಕೆಟ್‌ಗಳನ್ನು ಕಳೆದುಕೊಂಡಿತು.

ಆಗ ಜೊತೆಯಾದ ವಿರಾಟ್ ಸಿಂಗ್(ಔಟಾಗದೆ 76, 96 ಎಸೆತ, 3 ಬೌಂಡರಿ, 3 ಸಿಕ್ಸರ್)ಹಾಗೂ ಅಕ್ಷರ್ ಪಟೇಲ್(ಔಟಾಗದೆ 98, 61 ಎಸೆತ, 13 ಬೌಂಡರಿ, 3 ಸಿಕ್ಸರ್)ಆರನೇ ವಿಕೆಟ್ ಜೊತೆಯಾಟದಲ್ಲಿ 112 ಎಸೆತಗಳಲ್ಲಿ 154 ರನ್ ಸೇರಿಸಿ ತಂಡವನ್ನು ಆಧರಿಸಿದರು.

ಭಾರತ ‘ಬಿ’ ತಂಡದ ನಾಯಕ ಪಾರ್ಥಿವ್ ಪಟೇಲ್, ವಿರಾಟ್-ಅಕ್ಷರ್ ಜೋಡಿಯನ್ನು ಬೇರ್ಪಡಿಸಲು 8 ಬೌಲರ್‌ಗಳನ್ನು ದಾಳಿಗಿಳಿಸಿದರೂ ಪ್ರಯೋಜನವಾಗಲಿಲ್ಲ. ಭಾರತ ‘ಬಿ ’ ತಂಡದ ಪರ ಶಹಬಾಝ್ ನದೀಂ(2-37) ಎರಡು ವಿಕೆಟ್‌ಗಳನ್ನು ಕಬಳಿಸಿದರೆ, ವಿಜಯ ಶಂಕರ್(1-18), ಮುಹಮ್ಮದ್ ಸಿರಾಜ್(1-60) ಹಾಗೂ ನಿತೀಶ್ ರಾಣಾ(1-30)ತಲಾ ಒಂದು ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X