Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಘಾತಕಾರಿ: ಒಂದು ವರ್ಷದಲ್ಲಿ ಕ್ಯಾನ್ಸರ್...

ಆಘಾತಕಾರಿ: ಒಂದು ವರ್ಷದಲ್ಲಿ ಕ್ಯಾನ್ಸರ್ ಪ್ರಮಾಣ ಶೇ.324ರಷ್ಟು ಹೆಚ್ಚಳ !

ವಾರ್ತಾಭಾರತಿವಾರ್ತಾಭಾರತಿ3 Nov 2019 9:58 AM IST
share
ಆಘಾತಕಾರಿ: ಒಂದು ವರ್ಷದಲ್ಲಿ ಕ್ಯಾನ್ಸರ್ ಪ್ರಮಾಣ ಶೇ.324ರಷ್ಟು ಹೆಚ್ಚಳ !

ಹೊಸದಿಲ್ಲಿ, ನ.3: ದೇಶದಲ್ಲಿ ಬಾಯಿ ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್ ಸೇರಿದಂತೆ ದೇಶದ ಎನ್‌ಸಿಡಿ ಕ್ಲಿನಿಕ್‌ಗಳಲ್ಲಿ ಪತ್ತೆಯಾದ ಕ್ಯಾನ್ಸರ್ ರೋಗಿಗಳ ಸಂಖ್ಯೆ 2017-18ರ ಅವಧಿಯಲ್ಲಿ ಶೇ.324ರಷ್ಟು ಹೆಚ್ಚಳವಾಗಿದೆ ಎಂಬ ಆಘಾತಕಾರಿ ಮಾಹಿತಿ ನ್ಯಾಷನಲ್ ಹೆಲ್ತ್ ಪ್ರೊಫೈಲ್-2019 ಅಂಕಿಅಂಶಗಳಿಂದ ಹೊರಬಿದ್ದಿದೆ.

ಸಾಂಕ್ರಾಮಿಕವಲ್ಲದ ರೋಗಗಳ ಕ್ಲಿನಿಕ್‌ಗಳಿಗೆ 2018ರಲ್ಲಿ 6.5 ಕೋಟಿ ಮಂದಿ ತಪಾಸಣೆಗಾಗಿ ಆಗಮಿಸಿದ್ದು, 1.6 ಲಕ್ಷ ಮಂದಿಯಲ್ಲಿ ಕ್ಯಾನ್ಸರ್ ಪತ್ತೆಯಾಗಿದೆ. 2017ರಲ್ಲಿ ಪತ್ತೆಯಾದ 39,635 ಕ್ಯಾನ್ಸರ್ ಪ್ರಕರಣಗಳಿಗೆ ಹೋಲಿಸಿದರೆ ಇದು ಶೇಕಡ 324ರಷ್ಟು ಅಧಿಕ ಎಂದು ವರದಿ ಹೇಳಿದೆ.

ಈ ಒಂದು ವರ್ಷದ ಅವಧಿಯಲ್ಲಿ ಎನ್‌ಸಿಡಿ ಕ್ಲಿನಿಕ್‌ಗಳಿಗೆ ಭೇಟಿ ನೀಡಿದ ರೋಗಿಗಳ ಸಂಖ್ಯೆ 3.5 ಕೋಟಿಯಿಂದ 6.6 ಕೋಟಿಗೆ ಹೆಚ್ಚಿದ್ದರೂ, ಒತ್ತಡ, ಆಹಾರ ಕ್ರಮ, ತಂಬಾಕು ಉತ್ಪನ್ನಗಳು ಹಾಗೂ ಆಲ್ಕೋಹಾಲ್ ಸೇವನೆಯಂಥ ಕ್ಷಿಪ್ರ ಜೀವನಶೈಲಿ ಬದಲಾವಣೆ, ರೋಗ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ಗುಜರಾತ್‌ನಲ್ಲಿ ಅತ್ಯಧಿಕ ಸಂಖ್ಯೆಯ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿದ್ದು, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ನಂತರದ ಸ್ಥಾನಗಳಲ್ಲಿವೆ. ಗುಜರಾತ್‌ನಲ್ಲಿ 2017ರಲ್ಲಿ 3,939 ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿದ್ದರೆ, 2018ರಲ್ಲಿ 68,230 ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಅವಧಿಯಲ್ಲಿ ತಪಾಸಣೆಗಾಗಿ ಎನ್‌ಸಿಡಿ ಕ್ಲಿನಿಕ್‌ಗಳಿಗೆ ಭೇಟಿ ನೀಡಿರುವವರಲ್ಲಿ ಆಗಿರುವ ಹೆಚ್ಚಳ ಕೇವಲ ಶೇಕಡ 24. ಅಂತೆಯೇ ಆಂಧ್ರ ಪ್ರದೇಶ ಹಾಗೂ ಉತ್ತರ ಪ್ರದೇಶದಂಥ ರಾಜ್ಯಗಳಲ್ಲೂ ಅತ್ಯಧಿಕ ಪ್ರಮಾಣದ ಹೆಚ್ಚಳ ಕಂಡುಬಂದಿದೆ. ಕರ್ನಾಟಕದಲ್ಲಿ 2017ರಲ್ಲಿ 3,523ರಷ್ಟಿದ್ದ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಒಂದು ವರ್ಷದಲ್ಲಿ 20,084ಕ್ಕೆ ಹೆಚ್ಚಳವಾಗಿದೆ.

"ತಂಬಾಕು ಉತ್ಪನ್ನಗಳ ಬಳಕೆ ಬಾಯಿ ಕ್ಯಾನ್ಸರ್ ಹೆಚ್ಚಳಕ್ಕೆ ಪ್ರಮುಖ ಕರಣವಾಗಿದ್ದು, ಆಲ್ಕೋಹಾಲ್ ಸೇವನೆಯೂ ಸೇರಿದರೆ, ಈ ಅಪಾಯ ಸಾಧ್ಯತೆ ಅತ್ಯಧಿಕ. ಜಡ ಜೀವನಶೈಲಿ ಹಾಗೂ ಹೆಚ್ಚುತ್ತಿರುವ ಬೊಜ್ಜು ಸಮಸ್ಯೆ ಕೂಡಾ ಕ್ಯಾನ್ಸರ್‌ನಂಥ ರೋಗಗಳ ಹೆಚ್ಚಳಕ್ಕೆ ಕಾರಣ ಎಂದು ಆ್ಯಕ್ಷನ್ ಕ್ಯಾನ್ಸರ್ ಆಸ್ಪತ್ರೆಯ ಹಿರಿಯ ಕ್ಯಾನ್ಸರ್ ಸಲಹಾ ತಜ್ಞ ಡಾ.ಹರ್‌ಪ್ರೀತ್ ಸಿಂಗ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X